ಮಾಜಿ ಸಿಎಂ ಬಾಯಿಯಿಂದ ಪ್ರಧಾನಿ ಬಗ್ಗೆ ಇಂಥಾ ಕೀಳು ಮಾತಾ?
ಆಗ್ರಾ, ಜ 7: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಯಾವಾಗಲೂ ಕಿಡಿಕಾರುವ ಪ್ರಮುಖ ನಾಯಕರುಗಳಲ್ಲಿ ಮಂಚೂಣಿಯಲ್ಲಿ ಬರುವ ಹೆಸರು ಲಾಲೂ ಪ್ರಸಾದ್ ಮತ್ತು ಮುಲಾಯಂ ಸಿಂಗ್ ಯಾದವ್.
ಮೋದಿಯವರ 'ಸ್ವಚ್ಛ ಭಾರತ' ಅಭಿಯಾನದ ಬಗ್ಗೆ ಮಾತನಾಡುತ್ತಾ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್, ಪ್ರಧಾನಿ ವಿರುದ್ದ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ. (ವಿಜ್ಞಾನ, ತಂತ್ರಜ್ಞಾನ ಬಿಟ್ಟು ಅಭಿವೃದ್ಧಿ ಅಸಾಧ್ಯ:ಮೋದಿ)
ಮೋದಿಯವರ ಸ್ವಚ್ಛ ಭಾರತ ಅಭಿಯಾನ ಬರೀ ಪ್ರಚಾರಕ್ಕೆ. ಇಂಡಿಯಾ ಗೇಟ್ ಬಳಿ, ಮಾಧ್ಯಮದವರ ಮುಂದೆ ಪೊರಕೆ ಹಿಡಿದು ಪ್ರತ್ಯಕ್ಷರಾದರೆ ದೇಶ ಸ್ವಚ್ಛವಾಗುವುದಿಲ್ಲ. ಅವರಿಗೂ ನಿಜವಾಗಲೂ ಸ್ವಚ್ಛ ಭಾರತದ ಕನಸಿದ್ದರೆ ಉತ್ತರ ಪ್ರದೇಶಕ್ಕೆ ಬಂದು ಇಲ್ಲಿನ ಟಾಯ್ಲೆಟ್ ಗಳನ್ನು ಮೊದಲು ಕ್ಲೀನ್ ಮಾಡಲಿ ಎಂದು ಸವಾಲೆಸೆದಿದ್ದಾರೆ.
ದೇಶದಲ್ಲಿ ಶೌಚಾಲಯ ಕ್ಲೀನ್ ಇದ್ದರೆ ದೇಶ ಸ್ವಚ್ಛ ಆದಂತೆ, ಹಳ್ಳಿಹಳ್ಳಿಯಲ್ಲೂ ಈ ಕೆಲಸ ನಡೆಯಬೇಕು, ಬರೀ ಇಂಡಿಯಾ ಗೇಟ್ ಬಳಿಯಲ್ಲ ಎಂದು ಮುಲಾಯಂ ಲೇವಡಿ ಮಾಡಿದ್ದಾರೆ.

ದೇಶದಲ್ಲಿರುವ ಬಡತನವೇ ಶೌಚಾಲಯದ ಸಮಸ್ಯೆಗೆ ಮೂಲ ಕಾರಣ. ಪ್ರಧಾನಿ ಮೋದಿ ಈ ಬಗ್ಗೆ ಮೊದಲು ಗಮನ ಹರಿಸಲಿ. ಚುನಾವಣೆಯ ಸಮಯದಲ್ಲಿ ಮೋದಿ ಜನರಿಗೆ ನೀಡಿದ ಆಶ್ವಾಸನೆ ಕಾರ್ಯರೂಪಕ್ಕೆ ತರಲು ಮೊದಲು ಕಾರ್ಯೋನ್ಮುಖರಾಗಲಿ ಎಂದು ಮುಲಾಯಂ, ಮೋದಿಗೆ ಸಲಹೆ ನೀಡಿದ್ದಾರೆ.
ಆಗ್ರಾದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮುಲಾಯಂ, ಮೋದಿ ಸರಕಾರ ಅಧಿಕಾರಕ್ಕೆ ಬಂದು ಏಳು ತಿಂಗಳಾಯಿತು. ಚುನಾವಣೆಯಲ್ಲಿ ನೀಡಿದ್ದ ಯಾವುದಾದರೂ ಒಂದು ಆಶ್ವಾಸನೆಯನ್ನು ಸರಕಾರ ಕಾರ್ಯರೂಪಕ್ಕೆ ತಂದಿದೆಯೇ ಎಂದು ಪ್ರಶ್ನಿಸಿದ್ದಾರೆ.
ರಾಷ್ಟೀಯ ಸ್ವಯಂಸೇವಕ ಸಂಘದ ಬಗ್ಗೆ ಮಾತನಾಡುತ್ತಾ, ದೇಶಕ್ಕೆ ಆತಂಕವಿರುವುದೇ ಹಿಂದೂ ಪರ ಸಂಘಟನೆಗಳಿಂದ. ಕೋಮು ಗಲಭೆ ಆರಂಭವಾಗುವುದೇ ಇಂತಹ ಸಂಘಟನೆಗಳಿಂದ ಎಂದು ಮುಲಾಯಂ ವಿವಾದಕಾರಿ ಹೇಳಿಕೆ ನೀಡಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications