Modi visit Tirumala: ಈ ದಿನ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಪ್ರಧಾನಿ ಮೋದಿ
ಕಲಿಯುಗದ ಜೀವಂತ ದೇವರ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಈ ತಿಂಗಳು ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ಪ್ರಧಾನಿ ಕಾರ್ಯಾಲಯ ಬುಧವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಪ್ರಧಾನಿಯವರ ಭೇಟಿ ಎರಡು ದಿನಗಳ ಕಾಲ ಮುಂದುವರಿಯಲಿದೆ. ನವೆಂಬರ್ 26ರಂದು ಸಂಜೆ 6.50ಕ್ಕೆ ವಿಶೇಷ ವಿಮಾನದಲ್ಲಿ ತಿರುಪತಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಅಲ್ಲಿಂದ ರಾತ್ರಿ 7:50ಕ್ಕೆ ರಸ್ತೆ ಮಾರ್ಗವಾಗಿ ತಿರುಮಲ ತಲುಪಿ ಬೆಟ್ಟದ ಮೇಲಿರುವ ಶ್ರೀರಚನಾ ಅತಿಥಿಗೃಹದಲ್ಲಿ ತಂಗುತ್ತಾರೆ.

ನವೆಂಬರ್ 27 ರಂದು ಬೆಳಿಗ್ಗೆ 7:55 ಕ್ಕೆ ಶ್ರೀಗಳ ದರ್ಶನವಾಗುತ್ತದೆ. ಬೆಳಗ್ಗೆ 8.45ರವರೆಗೆ ಪ್ರಧಾನಿ ದೇವಸ್ಥಾನದಲ್ಲಿಯೇ ಇರುತ್ತಾರೆ. ಸ್ವಾಮಿಯ ದರ್ಶನದ ನಂತರ ವೇದ ವಿದ್ವಾಂಸರ ಆಶೀರ್ವಾದ ಮತ್ತು ಪ್ರಸಾದ ಸ್ವೀಕರಿಸಿ 8:55 ಕ್ಕೆ ಶ್ರೀರಚನಾ ಅತಿಥಿಗೃಹಕ್ಕೆ ಮರಳಲಿದ್ದಾರೆ. ಸ್ವಲ್ಪ ವಿಶ್ರಾಂತಿ ಪಡೆದು ತಿರುಮಲದಿಂದ 9:30ಕ್ಕೆ ಹೊರಡಲಿದ್ದಾರೆ. ಅಲ್ಲಿಂದ ತಿರುಪತಿ ವಿಮಾನ ನಿಲ್ದಾಣ ತಲುಪಿ ವಿಶೇಷ ವಿಮಾನದ ಮೂಲಕ ಹಿಂತಿರುಗಲಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವೆಡೆ ಪ್ರಚಾರ ನಡೆಸುತ್ತಿದ್ದಾರೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ಇಂದು (ನವೆಂಬರ್ 23) ಪ್ರಚಾರ ಕೊನೆಗೊಳ್ಳಲಿದೆ. ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯುತ್ತಿದೆ. ಇದೇ ತಿಂಗಳ 25, 26 ಮತ್ತು 27 ರಂದು ತೆಲಂಗಾಣದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.
ಇದೇ ವೇಳೆ, ಪ್ರಧಾನಿ ಭೇಟಿಗೆ ಸಂಬಂಧಿಸಿದ ವ್ಯವಸ್ಥೆಗಳ ಬಗ್ಗೆಯೂ ಪಿಎಂಒ ಟಿಟಿಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಇದರೊಂದಿಗೆ ಅಧಿಕಾರಿಗಳು ಭದ್ರತೆಯತ್ತ ಗಮನ ಹರಿಸಿದ್ದಾರೆ. ತಿರುಮಲದಲ್ಲಿ ಪ್ರಧಾನಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಮೋದಿಯನ್ನು ಸ್ವಾಗತಿಸಲು ಸಿಎಂ ಜಗನ್ ಇದೇ 26ರಂದು ತಿರುಪತಿಗೆ ಬರಲಿದ್ದಾರೆ. ಈ ಹಿಂದೆ ಪ್ರಧಾನಿಯವರು ತಿರುಮಲಕ್ಕೆ ಬಂದಾಗ ಅವರನ್ನು ಸ್ವಾಗತಿಸಲು ಎಪಿ ಸಿಎಂ ತಿರುಪತಿಗೆ ಬಂದಿದ್ದರು. ಇಬ್ಬರೂ ಒಟ್ಟಿಗೆ ತಿರುಮಲ ತಲುಪಿ ದೇವರ ದರ್ಶನ ಕೂಡ ಪಡೆದಿದ್ದರು.
ಪಂಚ ರಾಜ್ಯಗಳ ಚುನಾವಣೆ
ತೆಲಂಗಾಣ ವಿಧಾನಸಭೆ ಚುನಾವಣೆ ನವೆಂಬರ್ 30ರಂದು ನಡೆಯಲಿದೆ. ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದ್ದು ಒಂದೇ ದಿನ ಫಲಿತಾಂಶ ಬರಲಿದೆ. ಈಗಾಗಲೇ ಮಿಜೋರಾಂ ರಾಜ್ಯದ ಚುನಾವಣೆ ನವೆಂಬರ್ 7ರಂದು ಒಂದೇ ಹಂತದಲ್ಲಿ ನಡೆದಿತ್ತು, ಛತ್ತಿಸ್ಗಢದಲ್ಲಿ ಮೊದಲ ಹಂತದ ಚುನಾವಣೆ ನವೆಂಬರ್ 7 ಮತ್ತು ಎರಡನೇ ಹಂತದ ಚುನಾವಣೆ ನವೆಂಬರ್ 17ರಂದು ನಡೆದಿದೆ. ಮಧ್ಯಪ್ರದೇಶ ಚುನಾವಣೆ ಕೂಡ ನವೆಂಬರ್ 17ರಂದು ನಡೆದಿದ್ದು, ರಾಜಸ್ಥಾನ ವಿಧಾನಸಭೆ ಚುನಾವಣೆ ನವೆಂಬರ್ 23ರಂದು ನಡೆಯಲಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ.
ತೆಲಂಗಾಣದಲ್ಲಿ ಮೋದಿ ಪ್ರಚಾರ
ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು ಆಡಿಳಿತಾರೂಢ ಭಾರತ್ ರಾಷ್ಟ್ರ ಸಮಿತಿ (BRS) 36-39 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್ 69 ರಿಂದ 72 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ಎಐಎಂಐಎಂ 5-6 ಸ್ಥಾನಗಳಲ್ಲಿ, ಬಿಜೆಪಿ 2-3 ಮತ್ತು ಇತರೆ 0-1 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಸಮೀಕ್ಷೆಗಳ ಫಲಿತಾಂಶವನ್ನು ನಿಜವಾಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.












Click it and Unblock the Notifications