ಪ್ರಧಾನಿ ನರೇಂದ್ರ ಮೋದಿಗೆ ಸಿಯೋಲ್ ಶಾಂತಿ ಪ್ರಶಸ್ತಿ
Recommended Video

ನವದೆಹಲಿ, ಅಕ್ಟೋಬರ್ 24 : 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ಮೋದಿ ಶಾಂತಿ ಪ್ರಶಸ್ತಿಗೆ ಆಯ್ಕೆಯಾದ 14ನೇ ಜಾಗತಿಕ ನಾಯಕರಾಗಿದ್ದಾರೆ.
ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕ್ವೋನ್ ಇ ಹ್ಯೋಕ್ ಅವರು ಪಶಸ್ತಿ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ಕಳೆದ ಗುರುವಾರ ಸಿಯೋಲ್ನಲ್ನಲ್ಲಿ ಶಾಂತಿ ಪ್ರಶಸ್ತಿಯ ಆಯ್ಕೆ ಸಮಿತಿಯ ಅಂತಿಮ ಸಭೆ ನಡೆದಿತ್ತು.
12 ಸದಸ್ಯರ ತಂಡ ವಿವಿಧ ದೇಶಗಳ ಮುಖ್ಯಸ್ಥರು, ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಪತ್ರಕರ್ತರು, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಹೀಗೆ 100 ಗಣ್ಯರ ಪಟ್ಟಿಯನ್ನು ಅಧ್ಯಯನ ಮಾಡಿತ್ತು. ಅಂತಿಮವಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತದ ಜನರ ಜೀವನ ಮಟ್ಟ ಸುಧಾರಿಸಲು ನಡೆಸಿದ ಪ್ರಯತ್ನ, ಮಾನವ ಕಲ್ಯಾಣ ಸುಧಾರಣೆ ಮತ್ತು ವಿಶ್ವಶಾಂತಿಗಾಗಿ ನಡೆಸಿದ ಪ್ರಯತ್ನ, ನಾನಾ ದೇಶಗಳ ಜೊತೆ ಆರ್ಥಿಕ ಸಹಕಾರ ಸ್ಥಾಪನೆ ಮಾಡಲು ನಡೆಸಿದ ಪ್ರಯತ್ನಗಳಿಗಾಗಿ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿಗೆ ಅತ್ಯಂತ ಅರ್ಹ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ ಎಂದು ಕ್ವೋನ್ ಇ ಹ್ಯೋಕ್ ಅವರು ಹೇಳಿದ್ದಾರೆ. ನರೇಂದ್ರ ಮೋದಿ ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾದ 14ನೇ ಜಾಗತಿಕ ನಾಯಕರಾಗಿದ್ದಾರೆ.
ನೋಟು ನಿಷೇಧ ಮತ್ತು ಸರ್ಜಿಕಲ್ ದಾಳಿ, ಸ್ವಚ್ಛ ಭಾರತದಂತದ ಮೋದಿ ಕಾರ್ಯಗಳನ್ನು ಆಯ್ಕೆ ಸಮಿತಿ ಶ್ಲಾಘಿಸಿದೆ. ಸಿಯೋಲ್ ಶಾಂತಿ ಪ್ರಶಸ್ತಿ ಪ್ರಶಸ್ತಿ ಫಲಕ ಮತ್ತು 2 ಲಕ್ಷ ಡಾಲರ್ ಗೌರವ ಧನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಗುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications