Narendra Modi: ಭಾರತದ ಯಾವುದೇ ಪ್ರಧಾನಿ ಮಾಡದ ಸಾಧನೆ ಮಾಡುತ್ತಿದ್ದಾರೆ ನರೇಂದ್ರ ಮೋದಿ!
ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ಜಾಗತಿಕ ಮಟ್ಟದಲ್ಲಿ ಹಲವು ಬದಲಾವಣೆ ನಡೆದಿವೆ. ಅದರಲ್ಲೂ, ಜಾಗತಿಕ ಮಟ್ಟದಲ್ಲಿ 2 ಭೀಕರ ಯುದ್ಧಗಳು ನಡೆಯುತ್ತಿವೆ. ಹೀಗಾಗಿ ಜಗತ್ತು 2 ಓಳಾಗಿ ಹರಿದು ಹಂಚಿ ಹೋಗುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿದ್ದರೂ ಭಾರತ ಯಾವುದೇ ಒಂದು ದೇಶದ ಜೊತೆಗೆ ಗುರುತಿಸಿಕೊಳ್ಳದೆ, ಎಲ್ಲಾ ದೇಶಗಳ ಜೊತೆ ಸ್ನೇಹ ಬೆಳೆಸಿಕೊಂಡು ತನ್ನ ಅಭಿವೃದ್ಧಿ ಓಟ ಮುಂದುವರಿಸಿದೆ. ಹೀಗಿದ್ದಾಗಲೇ ಭಾರತದ ಯಾವುದೇ ಪ್ರಧಾನಿ ಮಾಡದ ಸಾಧನೆ ಮಾಡಲು ಈಗ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ!
ಪ್ರಧಾನಿ ನರೇಂದ್ರ ಮೋದಿ ಇದೀಗ ಉಕ್ರೇನ್ ದೇಶದ ರಾಜಧಾನಿ ಕೀವ್ಗೆ ತೆರಳಲು ರೈಲಿನ ಮೂಲಕ ಪ್ರಯಾಣ ಆರಂಭ ಮಾಡಿದ್ದಾರೆ. ಯುರೋಪ್ ದೇಶವಾದ ಪೋಲೆಂಡ್ ಮೂಲಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ & ಸುರಕ್ಷಿತ ರೈಲಿನಲ್ಲಿ ಪ್ರಯಾಣವನ್ನ ಆರಂಭಿಸಿದ್ದಾರೆ. ಸುಮಾರು 10 ಗಂಟೆಗಳ ನಿರಂತರ ಪ್ರಯಾಣದ ನಂತರ ಅವರು ಉಕ್ರೇನ್ ರಾಜಧಾನಿಗೆ ತಲುಪಲಿದ್ದಾರೆ. ವಿಷಯ ಇದಲ್ಲ 1991ರ ನಂತರ ಉಕ್ರೇನ್ಗೆ ಭಾರತದ ಯಾವುದೆ ಪ್ರಧಾನಿ ಭೇಟಿ ನೀಡಿಲ್ಲ. ಯಾಕಂದ್ರೆ 1991ಕ್ಕೂ ಮೊದಲು ಉಕ್ರೇನ್ ದೇಶ 'ಸೋವಿಯತ್ ರಷ್ಯಾ' ಭಾಗವಾಗಿತ್ತು, ಆದರೆ 1991 ರಲ್ಲಿ ಉಕ್ರೇನ್ ಸ್ವಾತಂತ್ರ್ಯ ಪಡೆದಿತ್ತು.

ಪ್ರಧಾನಿ ಮೋದಿ ಅವರಿಂದ ಇತಿಹಾಸ
'ಸೋವಿಯತ್ ರಷ್ಯಾ' ವಿಘಟನೆ ನಂತರ 1991 ರಲ್ಲಿ ಸ್ವಾತಂತ್ರ್ಯ ಪಡೆದ ಉಕ್ರೇನ್ ದೇಶಕ್ಕೆ ಭಾರತದ ಯಾವುದೇ ಪ್ರಧಾನಿಗಳು ಭೇಟಿ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿ ನಮ್ಮ ಭಾರತದ ಪ್ರಧಾನಿ ಒಬ್ಬರು ಉಕ್ರೇನ್ಗೆ ಎಂಟ್ರಿ ಕೊಡುತ್ತಿದ್ದಾರೆ. ಉಕ್ರೇನ್ ರಾಜಧಾನಿ ಕೀವ್ ನಗರಕ್ಕೆ ತೆರಳಿ, ಅಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆಗೆ ಮಾತನಾಡಲು ಈಗ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣ ಆರಂಭ ಮಾಡಿದ್ದಾರೆ. ಹಾಗಾದ್ರೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣ ಮಾಡುತ್ತಿರುವ ಆ ವಿಶೇಷ ರೈಲು ಯಾವುದು? ಮುಂದೆ ಓದಿ.
'ಟ್ರೇನ್ ಪೋರ್ಸ್ ಒನ್' ರೈಲು!
ಅಷ್ಟಕ್ಕೂ ಇದೀಗ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧವು ಘೋರವಾಗಿದೆ. ಅದರಲ್ಲೂ ಈ ಯುದ್ಧದಲ್ಲಿ ವೈಮಾನಿಕ ದಾಳಿ ಹೆಚ್ಚಾಗಿದ್ದು, ಪ್ರಧಾನಿ ಮೋದಿ ಅವರನ್ನು ಉಕ್ರೇನ್ ನೆಲಕ್ಕೆ ತೆರಳುವಂತೆ ವ್ಯವಸ್ಥೆ ಮಾಡಲು ರೈಲು ಮಾರ್ಗದ ವ್ಯವಸ್ಥೆ ಮಾಡಲಾಗಿದೆ. 'ಟ್ರೇನ್ ಪೋರ್ಸ್ ಒನ್' ಹೆಸರಿನ ವಿಶೇಷ ರೈಲಿನಲ್ಲಿ ಪ್ರಧಾನಿ 20 ಗಂಟೆಗಳ ಕಾಲ ಪ್ರಯಾಣಿಸಲಿದ್ದಾರೆ. ಒಂದ್ಕಡೆ ಉಕ್ರೇನ್ ರಾಜಧಾನಿಗೆ ತೆರಳಲು ಮೋದಿ ಅವರಿಗೆ 10 ಗಂಟೆ ಕಾಲಾವಕಾಶ ಬೇಕಿದೆ. ಚರ್ಚೆ ನಂತರ ಮತ್ತೆ ಪೋಲೆಂಡ್ ವಾಪಸ್ ಬರಲು ಪ್ರಧಾನಿ ಮೋದಿ ಅವರು ಸಜ್ಜಾಗಲಿದ್ದು ಆಗ ಕೂಡ 10 ಗಂಟೆಗಳ ಕಾಲ ಮತ್ತೆ ರೈಲು ಪ್ರಯಾಣ ಮಾಡಲಿದ್ದಾರೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications