ವಾರಣಾಸಿಯಲ್ಲಿ ಟೆಂಟ್ ಸಿಟಿ ಉದ್ಘಾಟಿಸಿದ ಪ್ರಧಾನಿ ಮೋದಿ, ಇದರ ವಿಶೇಷತೆ
ವಾರಣಾಸಿ, ಜನವರಿ 13: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾರಣಾಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಿದರು. ಬಳಿಕ 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.
ವಾರಣಾಸಿ ನಗರದ ಪ್ರಸಿದ್ಧ ಘಾಟ್ಗಳ ಎದುರು ಗಂಗಾನದಿಯ ದಡದಲ್ಲಿ ಅಭಿವೃದ್ಧಿಪಡಿಸಲಾದ ಟೆಂಟ್ ಸಿಟಿಯು ಈ ಪ್ರದೇಶದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ.
ವಾರಣಾಸಿ ಅಭಿವೃದ್ಧಿ ಪ್ರಾಧಿಕಾರವು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಟೆಂಟ್ ಸಿಟಿ ಪ್ರವಾಸಿಗರಿಗೆ ಲೈವ್ ಶಾಸ್ತ್ರೀಯ ಸಂಗೀತ ಮತ್ತು ಯೋಗ ಅವಧಿಗಳ ಜೊತೆಗೆ ವಸತಿ ಸೌಕರ್ಯಗಳನ್ನು ಒದಗಿಸುತ್ತದೆ. ಪ್ರವಾಸಿಗರು ವಾರಣಾಸಿಯ ವಿವಿಧ ಘಾಟ್ಗಳಿಂದ ದೋಣಿಗಳ ಮೂಲಕ ಟೆಂಟ್ ಸಿಟಿಯನ್ನು ತಲುಪಬಹುದು.

ಇದು ಅಕ್ಟೋಬರ್ನಿಂದ ಜೂನ್ವರೆಗೆ ಕಾರ್ಯನಿರ್ವಹಿಸಲಿದ್ದು, ಮಳೆಗಾಲದಲ್ಲಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುವುದರಿಂದ ಮೂರು ತಿಂಗಳ ಕಾಲ ಅದನ್ನು ಕಿತ್ತುಹಾಕಲಾಗುತ್ತದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಅಸ್ಸಾಂ ಸಹವರ್ತಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ವಾರಣಾಸಿಯಲ್ಲಿ ಗಂಗಾ ನದಿಯ ಮರಳಿನ ದಂಡೆಯಲ್ಲಿ, 200ಕ್ಕೂ ಹೆಚ್ಚು ಡೇರೆಗಳು (ಟೆಂಟ್) ಪ್ರವಾಸಿಗರಿಗೆ ನದಿಯ ಇನ್ನೊಂದು ಬದಿಯಲ್ಲಿರುವ ಪವಿತ್ರ ನಗರದ ಪ್ರಸಿದ್ಧ ಘಾಟ್ಗಳ ವಿಹಂಗಮ ನೋಟವನ್ನು ಲೈವ್ ಶಾಸ್ತ್ರೀಯ ಸಂಗೀತ, ಸಂಜೆ 'ಆರತಿ' ಮತ್ತು ಯೋಗ ಅವಧಿಗಳೊಂದಿಗೆ ನೀಡುತ್ತವೆ. ವಾರಣಾಸಿ ಟೆಂಟ್ ಸಿಟಿಯ ಅಧಿಕೃತ ವೆಬ್ಸೈಟ್ನಲ್ಲಿ ಬುಕಿಂಗ್ ಓಪನ್ ಆಗಿದೆ ಎಂದು ತಿಳಿಸಲಾಗಿದೆ. ನಗರದ ಪ್ರಸಿದ್ಧ ಘಾಟ್ಗಳ ಎದುರು ಗಂಗಾನದಿಯ ದಡದಲ್ಲಿ ಅಭಿವೃದ್ಧಿಪಡಿಸಲಾಗಿದೆ, ಟೆಂಟ್ ಸಿಟಿ ಯೋಜನೆಯು ವಾರಣಾಸಿಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ.

ತಲಾ 10 ಹೆಕ್ಟೇರ್ಗಳ ಮೂರು ಕ್ಲಸ್ಟರ್ಗಳು ಟೆಂಟ್ ಸಿಟಿಯನ್ನು ಒಳಗೊಂಡಿವೆ ಮತ್ತು ನಗರದ ಪ್ರವಾಸೋದ್ಯಮ ಸಾಮರ್ಥ್ಯವನ್ನು ತುಂಬುವ ನಿರೀಕ್ಷೆಯಿದೆ ಎಂದು ವಾರಣಾಸಿಯ ವಿಭಾಗೀಯ ಆಯುಕ್ತ ಕೌಶಲ್ ರಾಜ್ ಶರ್ಮಾ ಹೇಳಿದರು. ವಾರಣಾಸಿ ಅಭಿವೃದ್ಧಿ ಪ್ರಾಧಿಕಾರದ (ವಿಡಿಎ) ಉಪಾಧ್ಯಕ್ಷ ಅಭಿಷೇಕ್ ಗೋಯಲ್ ಮಾತನಾಡಿ, ಟೆಂಟ್ ಸಿಟಿ ಧರ್ಮ, ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯ ಸಂಗಮವಾಗಲಿದೆ ಎಂದು ಹೇಳಿದರು.












Click it and Unblock the Notifications