ಪೊಲೀಸರ ಮೇಲಿನ ನಕ್ಸಲ್ ದಾಳಿ ಮರೆಯಲ್ಲ: ಪಿಎಂ ಮೋದಿ
ರಾಯ್ಪುರ: ನಕ್ಸಲರ ದಾಳಿ ಭಾರತೀಯರಲ್ಲಿ ಆಕ್ರೋಶ ತರಿಸಿದೆ. ಭದ್ರತಾ ಪಡೆ ಈ ಭೀಕರ ಘಟನೆಯನ್ನ ಗಂಭೀರವಾಗಿ ಪರಿಗಣಿಸಿ ತಪ್ಪು ಮಾಡಿದವರಿಗೆ ಬುದ್ಧಿ ಕಲಿಸಲು ಕಾರ್ಯಾಚರಣೆ ಆರಂಭಿಸಿದೆ. ಈ ಸಂದರ್ಭದಲ್ಲೇ ಪ್ರಧಾನಿ ಮೋದಿ ಕೂಡ ಖಡಕ್ ಸಂದೇಶ ನೀಡಿದ್ದಾರೆ, 'ಪೊಲೀಸರ ಮೇಲಿನ ನಕ್ಸಲ್ ದಾಳಿ ಮರೆಯಲ್ಲ' ಎನ್ನುವ ಮೂಲಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
'ನಿಮ್ಮ ತ್ಯಾಗ ಎಂದಿಗೂ ಮರೆಯಲ್ಲ'
'ನಕ್ಸಲ್ ದಾಳಿಯಲ್ಲಿ ಮೃತರಾದ ಪೋಲಿಸರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ. ಛತ್ತೀಸ್ಗಢದ ದಾಂತೇವಾಡದಲ್ಲಿ ಪೋಲಿಸರ ಮೇಲೆ ನಡೆದ ನಕ್ಸಲ್ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಘಟನೆಯಲ್ಲಿ ಹುತಾತ್ಮರಾದ ಧೀರ ಸಿಬ್ಬಂದಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಈ ತ್ಯಾಗವನ್ನು ಸದಾ ನೆನಪಿನಲ್ಲಿಟ್ಟಿರುತ್ತೇವೆ. ಹುತಾತ್ಮರ ಕುಟುಂಬಗಳಿಗೆ ನನ್ನ ಸಾಂತ್ವಾನ' ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಪ್ರಧಾನಿ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿ ಘಟನೆ ಖಂಡಿಸಿದ್ದಾರೆ.

ಅಮಿತ್ ಶಾ ಖಡಕ್ ವಾರ್ನಿಂಗ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಕ್ಸಲರ ಭೀಕರ ದಾಳಿಯನ್ನ ಬಲವಾಗಿ ಖಂಡಿಸಿದ್ದಾರೆ. ಅಮಿತ್ ಶಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 'ದಾಂತೇವಾಡದಲ್ಲಿ ಛತ್ತೀಸ್ಗಢ ಪೊಲೀಸರ ಮೇಲೆ ನಡೆದ ಹೇಡಿತನದ ದಾಳಿಯಿಂದ ನೊಂದಿದ್ದೇನೆ. ಛತ್ತೀಸ್ಗಢದ ಸಿಎಂ ಜೊತೆ ಮಾತನಾಡಿ ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನ ನೀಡುವುದಾಗಿ ಭರವಸೆ ನೀಡಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ ಅಮಿತ್ ಶಾ. ಜೊತೆಗೆ ಹುತಾತ್ಮರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
Strongly condemn the attack on the Chhattisgarh police in Dantewada. I pay my tributes to the brave personnel we lost in the attack. Their sacrifice will always be remembered. My condolences to the bereaved families.
— Narendra Modi (@narendramodi) April 26, 2023
ಘಟನೆ ನಡೆದಿದ್ದು ಹೇಗೆ?
ಬುಧವಾರ ಮಧ್ಯಾಹ್ನ ಛತ್ತೀಸ್ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಛತ್ತೀಸ್ಗಢದ ಅರನ್ಪುರದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆ ಛತ್ತೀಸ್ಗಢದ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಸೈನಿಕರು ಆ ಪ್ರದೇಶಕ್ಕೆ ಬಾಡಿಗೆಗೆ ಪಡೆದ ಮಿನಿ ವ್ಯಾನ್ನಲ್ಲಿ ತೆರಳಿದ್ದರು. ಆದರೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ನಕ್ಸಲರು ಭೀಕರ ದಾಳಿ ನಡೆಸಿದ್ದಾರೆ. ಅಲ್ಲದೆ ಈ ದಾಳಿಗೆ ನಕ್ಸಲರು ಖತರ್ನಾಕ್ ಪ್ಲ್ಯಾನ್ ಮಾಡಿದ್ದು ಬಯಲಾಗಿದೆ.
Anguished by the cowardly attack on the Chhattisgarh police at Dantewada. Have spoken to Chhattisgarh's Chief Minister and assured all possible assistance to the state government. My condolences to the bereaved family members of the martyred Jawans.
— Amit Shah (@AmitShah) April 26, 2023
10 ಅಡಿ ಆಳದ ಗುಂಡಿ!
ಪೊಲೀಸರನ್ನು ಬಲಿ ಪಡೆದಿರುವ ನಕ್ಸಲರು ತಮ್ಮ ಕೃತ್ಯಕ್ಕೆ ಅದೆಷ್ಟು ಸಿದ್ಧತೆ ನಡೆಸಿದ್ದರು ಎಂದರೆ, ಬಾಂಬ್ ಸ್ಫೋಟದ ಜಾಗದಲ್ಲಿ ಸುಮಾರು 10 ಅಡಿ ಆಳ ಹಾಗೂ 20 ಅಡಿ ಅಗಲದ ದೊಡ್ಡ ಗುಂಡಿ ತೋಡಿದ್ದರು ಎನ್ನಲಾಗಿದೆ. ಅಲ್ಲದೆ ಇದೇ ಗುಂಡಿ ಒಳಗೆ 50 ಕೆಜಿ ಸುಧಾರಿತ ಸ್ಫೋಟಕ (IED) ತುಂಬಿದ್ದರು. ಪೊಲೀಸರು ಕಾರ್ಯಾಚರಣೆಯನ್ನ ಮುಗಿಸಿ ವಾಪಸ್ ಬರುವ ಸಂದರ್ಭದಲ್ಲೇ ದಾಳಿಗೆ ಸ್ಕೆಚ್ ಹಾಕಲಾಗಿತ್ತು. ವಾಪಸ್ ಬರುತ್ತಿದ್ದ ವಾಹನವನ್ನು ಸ್ಫೋಟಿಸಿ 10 ಪೊಲೀಸರ ಹತ್ಯೆಗೆ ಕಾರಣರಾಗಿದ್ದಾರೆ ನಕ್ಸಲರು.

150 ಮೀ. ದೂರದಲ್ಲಿ ಅವಶೇಷ
ಈ ಸ್ಫೋಟದ ತೀವ್ರತೆ ಅದೆಷ್ಟು ಬಲವಾಗಿತ್ತು ಎಂದರೆ, ವಾಹನ ಸ್ಫೋಟದ ಸ್ಥಳದಿಂದ ಕನಿಷ್ಠ 20 ಅಡಿ ದೂರಕ್ಕೆ ಹಾರಿ ಬಿದ್ದಿದೆ. ಸ್ಫೋಟದ ಸ್ಥಳದಿಂದ ಸುಮಾರು 150 ಮೀ. ದೂರದಲ್ಲಿ ಚೂರಾದ ವಾಹನದ ಅವಶೇಷಗಳು ಸಿಕ್ಕಿವೆ ಎಂದರೆ ಲೆಕ್ಕ ಹಾಕಿ ಅದೆಷ್ಟು ಬಲವಾಗಿ ಸ್ಫೋಟ ಸಂಭವಿಸಿರಬೇಡ. ಘಟನೆ ನಡೆದ ಬಳಿಕ ವಿಶೇಷ ಭದ್ರತಾ ಪಡೆಗಳು ಕಾಡಿನಲ್ಲಿ ಅಡಗಿರುವ ಮಾವೋವಾದಿಗಳನ್ನು ಹುಡುಕುತ್ತಿದ್ದಾರೆ. ಈ ಪ್ರದೇಶ 3 ರಾಜ್ಯಗಳ ಮಧ್ಯೆ ಇದ್ದು, ತ್ರಿ-ಜಂಕ್ಷನ್ ಎಂದು ಕರೆಯಲಾಗುತ್ತದೆ.
ನಕ್ಸಲರ ವಿರುದ್ಧ ಹೋರಾಡಲು ವಿಶೇಷವಾಗಿ ತರಬೇತಿ ಪಡೆದ ಸ್ಥಳೀಯ ಬುಡಕಟ್ಟು ಸಮುದಾಯದ ಭದ್ರತಾ ಸಿಬ್ಬಂದಿ ಈ ದುರ್ಘಟನೆಯಲ್ಲಿ ಹುತಾತ್ಮರಾಗಿದ್ದಾರೆ ಎನ್ನಲಾಗಿದೆ. ಮತ್ತೊಂದು ಕಡೆ ಈಗ ಸ್ಫೋಟಿಸಿರುವ ವಾಹನದ ಮೇಲೆ ಹಲವು ದಿನಗಳಿಂದ ನಕ್ಸಲರು ಕಣ್ಣಿಟ್ಟಿದ್ದರು ಎನ್ನಲಾಗಿದೆ. ಅದರ ಚಲನವಲನ ಸೂಕ್ಷ್ಮವಾಗಿ ಗಮನಿಸಿ ದಾಳಿ ಮಾಡಿದ್ದಾರೆ. ಈ ಮೂಲಕ ದಾಳಿಗೆ ಮೊದಲೇ ನಕ್ಸಲರು ಸಿದ್ಧರಾಗಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಘಟನೆ ನಡೆದಿರುವ ಸುತ್ತಮುತ್ತಲ ಪ್ರದೇಶದಲ್ಲಿ ನಕ್ಸಲರಿಗಾಗಿ ಹುಡುಕಾಟ ತೀವ್ರಗೊಂಡಿದೆ.
ಇಷ್ಟೆಲ್ಲದರ ನಡುವೆ ನಕ್ಸಲ್ ದಾಳಿ ಹಿನ್ನೆಲೆಯಲ್ಲಿ ಒಡಿಶಾ ರಾಜ್ಯದ ಒಟ್ಟು 3 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಘಟನೆ ನಂತರ ಛತ್ತೀಸ್ಗಢದ ಗಡಿಭಾಗದ ಜಿಲ್ಲೆಗಳಾದ ಮಲ್ಕಾನ್ಗಿರಿ, ಕೊರಾಪುಟ್, ಬರ್ಗಾರ್ಡ್, ನುವಾಪಾದ ಮತ್ತು ನಬರಂಗ್ಪುರದಲ್ಲಿ ಇಂಚಿಂಚು ಜಾಗವನ್ನೂ ಪರಿಶೀಲಿಸಲಾಗುತ್ತಿದೆ. ಭದ್ರತೆಯನ್ನೂ ಹೆಚ್ಚಿಸಿ ಸರ್ಚಿಂಗ್ ಆಪರೇಷನ್ ಮುಂದುವರಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications