ಮತ್ತೆ 21 ದಿನ ಜನತಾ ಕರ್ಫ್ಯೂ; ಯಾರು ಏನಂದರು?
ನವದೆಹಲಿ, ಮಾರ್ಚ್ 24: ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.
21 ದಿನ ಇಡೀ ದೇಶವೇ ಲಾಕ್ ಡೌನ್ ಆಗಿರಲಿದೆ. ದಯವಿಟ್ಟು ಮನೆಯಲ್ಲಿ ಇದ್ದು, ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಶ್ರಮವಹಿಸಿ ಎಂದು ಮನವಿ ಮಾಡಿದ್ದಾರೆ.
ಪ್ರಧಾನಿ ಅವರ ಈ ಕರೆಗೆ ಹಲವು ರಾಜಕೀಯ ಮುಖಂಡರು ಬೆಂಬಲ ಸೂಚಿಸಿದ್ದಾರೆ. ನಾವೆಲ್ಲ ಕೊರೊನಾ ಓಡಿಸಲು ಸಿದ್ದ ಎಂದು ಹೇಳಿದ್ದಾರೆ. ಲಾಕ್ಡೌನ್ ಮಾಡುವುದೇ ಈ ಹಂತದಲ್ಲಿ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. #IndiaFightsCorona ಟ್ವಿಟ್ಟರ್ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಸವಾಲನ್ನು ಎದುರಿಸೋಣ; ಶಾ
ದೇಶವನ್ನು ಕರೋನ ವೈರಸ್ ನಿಂದ ರಕ್ಷಿಸಲು ಪ್ರಧಾನಿ ಮೋದಿ ಅವರ ಮನವಿಯಂತೆ 21 ದಿನಗಳು ಮನೆಗಳಿಂದ ಹೊರಗಡೆ ಬರುವುದು ಬೇಡ. ಸರ್ಕಾರದ ಎಲ್ಲಾ ಆದೇಶಗಳನ್ನು ಪಾಲಿಸಿ. ನಮ್ಮ ಎಲ್ಲರ ರಕ್ಷಣೆ ನಮ್ಮೆಲ್ಲರ ಹೊಣೆ. ಸಮಾಜ ಒಂದಾಗಿ ಈ ಸನ್ನಿವೇಶವನ್ನು ಎದುರಿಸೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.

ಚಾಚೂ ತಪ್ಪದೆ ಪಾಲಿಸಬೇಕು
ಕೊರೊನಾ ವಿರುದ್ಧದ ನಿರ್ಣಾಯಕ ಸಮರಕ್ಕಾಗಿ ಪ್ರಧಾನಿ ಅವರು ಕೈಗೊಂಡಿರುವ ಕ್ರಮಗಳನ್ನು ಸ್ವಾಗತಿಸುತ್ತೇನೆ. ಮೋದಿ ಅವರ ಮನವಿಯಂತೆ ಎಲ್ಲ ನಾಗರಿಕರೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಇಡೀ ಮಾನವಕುಲವೇ ಎದಿರುಸುತ್ತಿರುವ ಈ ಸಂಕಟದ ಘಳಿಗೆಯನ್ನು ದಾಟಲು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಲು ಕೋರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಒಂದು ತಿಂಗಳ ಸಂಬಳ
ಲಾಕ್ ಡೌನ್ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಸದಾನಂದ ಗೌಡ ಅವರು, ಕೊರೊನಾ ವಿರುದ್ಧದ ಹೋರಾಟಕ್ಕೆ ತಮ್ಮ ಒಂದು ತಿಂಗಳ ಸಂಬಳವನ್ನು ಪ್ರಧಾನಿ ಪರಿಹಾರ ನಿಧಿಗೆ ನೀಡುವುದಾಗಿ ಹೇಳಿದ್ದಾರೆ.

ಯಾಕೆ ಕಡಿಮೆ ಹಣ ಮೀಸಲು?
ಕೊರೊನಾ ವಿರುದ್ಧದ ಹೋರಾಟದಲ್ಲಿ ಇಡೀ ದೇಶವೇ ಕೇಂದ್ರದ ಜೊತೆಗಿದೆ. ಆದರೆ, ದೇಶದ ಜನರಿಗೆ ಪ್ರಧಾನಿ ಅವರು ಕೊಟ್ಟ ಭರವಸೆ ಏನು? ಕೇರಳ ಒಂದೇ ರಾಜ್ಯ ಒಂದು ವಾರದ ಹಿಂದೆಯೇ ₹20,000 ಕೋಟಿ ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಕೇವಲ ₹16,000 ಕೋಟಿ ಘೋಷಿಸಿರುವುದು 130 ಕೋಟಿ ಜನತೆಗೆ ಸಾಕಾಗುವುದೇ? ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications