Lok Sabha elections 2024: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಅಧಿಕೃತ: ಯಾವ ಕ್ಷೇತ್ರ?
ನವದೆಹಲಿ, ಮಾರ್ಚ್ 02: ಲೋಕಸಭಾ ಚುನಾವಣೆಗೆ ಸಂಬಂಧ ಭಾರತೀಯ ಜನತಾ ಪಕ್ಷವು ಶನಿವಾರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಫೈನಲ್ ಆಗಿದೆ. ಯಾವ ಕ್ಷೇತ್ರ, ಎಷ್ಟು ಟಿಕೆಟ್ ಫೈನಲ್ ಎಂಬ ಎಲ್ಲ ಮಾಹಿತಿ ಇಲ್ಲಿದೆ.
ಲೋಕಸಭಾ ಚುನಾವಣೆ 2024 ಯಲ್ಲಿ ಬಹುಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮೊದಲ ಹಂತದಲ್ಲಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ವಾರಣಾಸಿಯಿಂದ (Varanasi LS constituency) ಸ್ಪರ್ಧೆ ಮಾಡುವುದು ಅಧಿಕೃತಗೊಂಡಿದೆ ಎಂದು ಪ್ರಕಟಗೊಂಡಿರುವ ಬಿಜೆಪಿ ಮೊದಲ ಪಟ್ಟಿಯಿಂದ ಮಾಹಿತಿ ಹೊರ ಬಿದ್ದಿದೆ.

ಇನ್ನೇನು ಕೆಲವೇ ದಿನಗಳಲ್ಲಿ 2024ನೇ ಸಾಲಿನ ಲೋಕಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಲಿದೆ. ಈ ಮಧ್ಯ ಬಿಜೆಪಿಯು ಒಟ್ಟು 543 ಕ್ಷೇತ್ರಗಳಲ್ಲಿ ಪೈಕಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟು 51 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಿದೆ. ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶ ಹೆಚ್ಚು ಸ್ಥಾನ ಪಡೆದುಕೊಂಡಿದೆ.
ವಾರಣಾಸಿ: 2019ರ ಗೆಲುವು-ಸೋಲಿನ ವಿವರ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ 2019 ರಲ್ಲಿ ಎದುರಾಳಿಗಳನ್ನೆಲ್ಲ ಸೋಲಿಸಿ ವಿಜಯ ಸಾಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ 4,79,505 ಮತಗಳ ಅಂತರದಿಂದ ಪ್ರಚಂಡ ಗೆಲುವು ಸಾಧಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ 6,74,664 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಶಾಲಿನಿ ಯಾದವ್ 1,95,159 ಮತಗಳನ್ನು ಪಡೆದು ಸೋಲು ಕಂಡರು. ವಾರಣಾಸಿ ಲೋಕಸಭಾ ಚುನಾವಣೆಯ ಕೊನೆಯ ಹಂತದಲ್ಲಿ 2029 ಮೇ 19 ರಂದು ಮತದಾನ ನಡೆದಿತ್ತು. ಈ ಬಾರಿಯ ಸಹ ಪ್ರಧಾನಿ ಮೋದಿಯವರು ಅಂತದ್ದೆ ಮಹತ್ತರ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ರಾಜಕೀಯ ತಂತ್ರಗಾರಿಕೆ ಹೆಣೆಯಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications