ಅಧಿವೇಶನದ ನಡುವೆಯೇ ನರೇಂದ್ರ ಮೋದಿ ವಿದೇಶ ಪ್ರವಾಸ ಶುರು
ನವದೆಹಲಿ, ಜುಲೈ 20: ಮುಂಗಾರು ಅಧಿವೇಶನ ಪ್ರಾರಂಭವಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಮೂರು ದೇಶಗಳ ಪ್ರವಾಸ ನಡೆಯಲಿದೆ.
ರ್ವಾಂಡಾ, ಉಗಾಂಡ ಮತ್ತು ದಕ್ಷಿಣ ಆಫ್ರಿಕಾಗಳಿಗೆ ಮೋದಿ ಅವರು ಜುಲೈ 23-27 ರ ಅವಧಿಯಲ್ಲಿ ಐದು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.
ಪ್ರವಾಸದ ಆರಂಭದಲ್ಲಿ ಅವರು ಮೊದಲು ರ್ವಾಂಡಾಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಭಾರತೀಯ ಸಮುದಾಯದ ಜನರೊಂದಿಗೆ ಕೆಲ ಕಾಲ ಸಂವಾದ ನಡೆಸಲಿದ್ದಾರೆ.

ರ್ವಾಂಡಾಕ್ಕೆ ಭಾರತವು 200 ಹಸುಗಳನ್ನು ನೀಡಲಿದೆ. ಅಲ್ಲದೆ, ಆ ದೇಶಕ್ಕೆ ವಿಶೇಷ ಮಹತ್ವ ನೀಡಲಿದೆ. ಪ್ರಧಾನಿ ಮೋದಿ ಅವರ ಭೇಟಿಯ ವೇಳೆ ರ್ವಾಂಡಾಕ್ಕೆ ನೆರವು ಒದಗಿಸುವ ಘೋಷಣೆ ಮಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಟಿ.ಎಸ್. ತ್ರಿಮೂರ್ತಿ ತಿಳಿಸಿದ್ದಾರೆ.
ಬಳಿಕ ಅವರು ಉಗಾಂಡಕ್ಕೆ ಭೇಟಿ ನೀಡಲಿದ್ದು, ಉಗಾಂಡ ಅಧ್ಯಕ್ಷ ಯೊವೇರಿ ಮುಸೆವೇನಿ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ.
ಅಲ್ಲದೆ, ಮೋದಿ ಅವರು ಉಗಾಂಡ ಸಂಸತ್ತು ಹಾಗೂ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಂತರ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಿಕ್ಸ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಳಗೊಳ್ಳುವ ಅಭಿವೃದ್ಧಿ, ಆರೋಗ್ಯ ಹಾಗೂ ಔಷಧಗಳು, ಶಾಂತಿ ಕಾಪಾಡುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಬ್ರಿಕ್ಸ್ ಸಮ್ಮೇಳನದ ಚರ್ಚೆಯ ಪ್ರಮುಖ ವಿಷಯಗಳಾಗಿರಲಿವೆ.
ಬ್ರಿಕ್ಸ್ ಸಮ್ಮೇಳನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಹಲವು ದೇಶಗಳ ಮುಖಂಡರ ದ್ವಿಪಕ್ಷೀಯ ಮಾತುಕತೆಗಳು ಸಹ ನಡೆಯಲಿವೆ.
ಈ ವೇಳೆ ಮೋದಿ ಮತ್ತು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಅವರು ಸಭೆ ನಡೆಸಿ ಚರ್ಚಿಸಲಿದ್ದಾರೆ ಎಂದು ಅವರು ಹೇಳಿದರು.
ಮುಂಗಾರು ಅಧಿವೇಶನವು ಆಗಸ್ಟ್ 10ರವರೆಗೆ ನಡೆಯಲಿದ್ದು, ವಿದೇಶ ಪ್ರವಾಸದ ಬಳಿಕ ಮೋದಿ ಅವರು ಮತ್ತೆ ಕಲಾಪಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications