ಉಪ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ಏನಂದ್ರು?
ರಾಂಚಿ, ಡಿಸೆಂಬರ್ 9; ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಝಾರ್ಖಂಡ್ ಚುನಾವಣೆ ಪ್ರಚಾರದಲ್ಲಿ ಇಂದು ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಅವರ ಕಣ್ಣೀರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚುನಾವಣಾ ಸಮಯದಲ್ಲಿ ಕಣ್ಣೀರು ಸುರಿಸುವವರಿಗೆ ಕರ್ನಾಟಕ ಜನ ತಕ್ಕ ಪಾಠ ಕಲಿಸಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಕರ್ನಾಟಕದಲ್ಲಿ ಜನ ಮೆಚ್ಚುವ ಆಡಳಿತ ನೀಡಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪರ ಜನಾದೇಶ ಇದ್ದಾಗೂ, ಕಾಂಗ್ರೆಸ್ ಜೆಡಿಎಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಿತು. ಈಗ ಜನರೇ ಅವರನ್ನು ತಿರಸ್ಕರಿಸಿದ್ದಾರೆ. ಈ ಪಕ್ಷಗಳು ನೆಲಕಚ್ಚಿದಂತಾಗಿದೆ ಎಂದು ಮೋದಿ ಹೇಳಿದರು.

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ೧೫ ಕ್ಷೇತ್ರಗಳಲ್ಲಿ ಬಿಜೆಪಿ ೧೨, ಕಾಂಗ್ರೆಸ್ ೨ ಸ್ಥಾನಗಳನ್ನು ಪಡೆದಿವೆ. ಒಬ್ಬ ಪಕ್ಷೇತರ ಸದಸ್ಯ ಚುನಾಯಿತರಾಗಿದ್ದಾರೆ.












Click it and Unblock the Notifications