ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು
ದೆಹಲಿ, ಮೇ 19: ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು ಒಟ್ಟಿಗೆ ಜೈಲಿಗೆ ಹಾಕಿ ಎಂದು ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಅವರು ಸವಾಲು ಹಾಕಿದರು.
ಎಎಪಿ ಮುಗಿಸಲು ಯತ್ನಿಸುತ್ತಿರುವ ಪ್ರಧಾನಿ ಮೋದಿ ನಿರಂಕುಶಪ್ರಭುತ್ವವನ್ನು ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಮುಖಂಡರು ಹಾಗೂ ಕಾರ್ಯಕರ್ತರ ನೇತೃತ್ವ ವಹಿಸಿದ್ದ ಪೃಥ್ವಿ ರೆಡ್ಡಿ, ಎಎಪಿ ರಾಜಕೀಯ ಪಕ್ಷ ಮಾತ್ರವಲ್ಲ ಒಂದು ಪ್ರಬುದ್ಧ ವಿಚಾರ.

ಆ ವಿಚಾರವನ್ನು ಎಂದಿಗೂ ಮುಗಿಸಲು ಸಾಧ್ಯವಿಲ್ಲ. ನಮ್ಮನ್ನು ಜೈಲಿನಲ್ಲಿಡಬಹುದು, ನಮ್ಮ ಬ್ಯಾಂಕ್ ಖಾತೆಗಳನ್ನು ತಡೆಹಿಡಿಯಬಹುದು, ಕಚೇರಿಯಿಂದ ಹೊರ ಹಾಕಬಹುದು. ಆದರೆ ಅರವಿಂದ ಕೇಜ್ರಿವಾಲ್ ಅವರು ಹುಟ್ಟುಹಾಕಿರುವ ವಿಚಾರವನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಕಾರಣ ಈಗಾಗಲೇ ಭಾರತೀಯ ಮನಸ್ಸಿನಲ್ಲಿ ಕೇಜ್ರಿವಾಲ್ ವಿಚಾರಗಳು ನಾಟಿವೆ ಎಂದರು.
ದೇಶದ ಮತದಾರರು ನಮ್ಮ ಸರ್ಕಾರದ ಅಭಿವೃದ್ಧಿ ಪರ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ ನಮ್ಮ ಪಕ್ಷವನ್ನು ಮುಗಿಸಲು ಕಳೆದ ಕೆಲವು ತಿಂಗಳಿಂದ ಹರಸಾಹಸ ಪಡುತ್ತಿದ್ದಾರೆ. ಕೆಲಸದ ವಿಚಾರದಲ್ಲಿ ನಮ್ಮ ಜೊತೆ ಸ್ಪರ್ಧಿಸಲು ಧೈರ್ಯವಿಲ್ಲದ ಮೋದಿ ವಾಮಮಾರ್ಗ ಹಿಡಿದಿದ್ದಾರೆ. ಮೂರು ರೀತಿಯಲ್ಲಿ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮೊದಲನೆಯದಾಗಿ ನಮ್ಮ ಎಲ್ಲ ಪ್ರಮುಖ ನಾಯಕರನ್ನು ಜೈಲಿಗೆ ಕಳುಹಿಸುತ್ತಿದ್ದಾರೆ.
ಎರಡನೇ ತಂತ್ರವಾಗಿ ನಮ್ಮ ಪಕ್ಷದ ಬ್ಯಾಂಕ್ ಅಕೌಂಟ್ ಫ್ರೀಜ್ ಮಾಡುವ ಪ್ರಯತ್ನ ನಡೆಸಿದ್ದಾರೆ. ಮೂರನೆಯದಾಗಿ ದೆಹಲಿಯ ಪ್ರಧಾನ ಕಚೇರಿಯಿಂದ ನಮ್ಮನ್ನು ಹೊರಹಾಕುವ ಸಂಚು ಹೂಡಿದ್ದಾರೆ. ಆದರೆ ಈ ಯಾವ ಪ್ರಯತ್ನಗಳು ಕೈಗೂಡುವುದಿಲ್ಲ ಎಂದು ಪೃಥ್ವಿ ರೆಡ್ಡಿ ಹೇಳಿದರು.
ಈ ಸಂದರ್ಭ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಅಶೋಕ್ ಮೃತ್ಯುಂಜಯ, ಸಂಚಿತ್ ಸೆಹವಾನಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ












Click it and Unblock the Notifications