ಇವರೇ.. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿನ ರೂವಾರಿ
ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಗುಜರಾತ್ ನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ, ಹಿಮಾಚಲದಲ್ಲಿ ಕಾಂಗ್ರೆಸ್ ಸರಕಾರ ರಚಿಸುವಷ್ಟು ಸ್ಥಾನವನ್ನು ಗಳಿಸಿದೆ.
ಒಂದು ಬಾರಿ ಅಧಿಕಾರದಲ್ಲಿರುವ ಪಕ್ಷವನ್ನು ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವಷ್ಟು ಸ್ಥಾನವನ್ನು ಹಿಮಾಚಲದ ಜನತೆ ನೀಡಿದ ಉದಾಹರಣೆ ವಿರಳ. ಆ ಪದ್ದತಿ ಈ ಬಾರಿಯೂ ಮುಂದುವರಿದಿದೆ.
HP Election Result 2022 ; ಕಾಂಗ್ರೆಸ್ 'ಕೈ' ಹಿಡಿದ 5 ಪ್ರಮುಖ ಅಂಶಗಳು
ಕಳೆದ ಚುನಾವಣೆಯಲ್ಲಿ 44ಸ್ಥಾನವನ್ನು ಗೆದ್ದಿದ್ದ ಬಿಜೆಪಿ ಈ ಬಾರಿ (ಸದ್ಯದ ಟ್ರೆಂಡಿಂಗ್) ಪ್ರಕಾರ 26 ಸ್ಥಾನವನ್ನು, ಕಳೆದ ಬಾರಿ 21ಸ್ಥಾನವನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 39 ಸ್ಥಾನವನ್ನು ಗೆಲ್ಲುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಲ್ಲಿ ಪ್ರಮುಖರೆಂದರೆ, ಚುನಾವಣಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದ ಪ್ರಿಯಾಂಕ ಗಾಂಧಿ ವಾಧ್ರಾ. ಪಕ್ಷದ ಪರವಾಗಿ ವ್ಯವಸ್ಥಿತ ಪ್ರಚಾರವನ್ನು ನಡೆಸಿದ್ದ ಪ್ರಿಯಾಂಕ, ಪಕ್ಷವನ್ನು ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಧಾನಿ ಶಿಮ್ಲಾದ ಫಾರಂ ಹೌಸಿನಲ್ಲೇ ಮೊಕ್ಕಾಂ ಹೂಡಿ, ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಎಲ್ಲದರ ಉಸ್ತುವಾರಿಯನ್ನು ಇವರು ವಹಿಸಿಕೊಂಡಿದ್ದರು. ಸಹೋದರ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯೂಸಿಯಾಗಿದ್ದರೆ, ಪ್ರಿಯಾಂಕ ಅವರು ಹಿಮಾಚಲದ ಜವಾಬ್ದಾರಿಯನ್ನು ನೋಡಿಕೊಂಡಿದ್ದರು.

ಕಳೆದ ಉತ್ತರ ಪ್ರದೇಶದ ಅಸೆಂಬ್ಲಿಯ ವೇಳೆ ರಾಜ್ಯದ ಪೂರ್ವ ಭಾಗದ ಚುನಾವಣಾ ಉಸ್ತುವಾರಿಯನ್ನು ಪ್ರಿಯಾಂಕಗೆ ವಹಿಸಲಾಗಿತ್ತು. ಆದರೆ, ಅಲ್ಲಿ ಪ್ರಿಯಾಂಕ ಅವರ ಚರಿಸ್ಮಾ ವರ್ಕೌಟ್ ಆಗಿರಲಿಲ್ಲ, ಈಗ, ಹಿಮಾಚಲದಲ್ಲಿ ಪ್ರಿಯಾಂಕ ಅವರ ರಣತಂತ್ರ ಪಕ್ಷಕ್ಕೆ ವರದಾನವಾಗಿದೆ.
ರಾಜ್ಯದಲ್ಲಿ ಹಲವು ಚುನಾವಣಾ ಪ್ರಚಾರವನ್ನು ನಡೆಸಿದ್ದ ಪ್ರಿಯಾಂಕ, ರಾಜೀವ್ ಶುಕ್ಲಾ ಅವರನ್ನು ಚುನಾವಣಾ ಪ್ರಮುಖರನ್ನಾಗಿ ಮಾಡಿದರು. ಪಕ್ಷದಲ್ಲಿ ಬಂಡಾಯ ಏಳದಂತೆ ಎಲ್ಲರನ್ನು ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಮಾಡಿದ್ದು ಪಕ್ಷಕ್ಕೆ ಅನುಕೂಲವಾಯಿತು ಎನ್ನುವುದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications