ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ; ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ
ಶಿಮ್ಲಾ, ಅ. 14: ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಇತ್ತ, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಶುಕ್ರವಾರ ಹಿಮಾಚಲ ಪ್ರದೇಶದ ಸೋಲನ್ನ ಥೋಡೋ ಮೈದಾನದಲ್ಲಿ ನಡೆದ 'ಪರಿವರ್ತನ್ ಪ್ರತಿಜ್ಞಾ ರ್ಯಾಲಿ' ಉದ್ದೇಶಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿದ್ದಾರೆ.
ಭಾರೀ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ, ಹಿಮಾಚಲ ಪ್ರದೇಶದಲ್ಲಿ ತಮ್ಮ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ, ಐದು ಲಕ್ಷ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ.

ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ
ಹಿಮಾಚಲ ಪ್ರದೇಶದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರಲಾಗುವುದು ಎಂದು ಸಭೆಯಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು, ರಾಜ್ಯದಲ್ಲಿ ಕಾಂಗ್ರೆಸ್ನ ಚುನಾವಣಾ ಪ್ರಚಾರವನ್ನು ಔಪಚಾರಿಕವಾಗಿ ಪ್ರಾರಂಭಿಸುವ ಮೊದಲು ಸೋಲನ್ನಲ್ಲಿರುವ ಮಾ ಶೂಲಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅವರು ಪಕ್ಷದ ಚುನಾವಣಾ ಥೀಮ್ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ನಿರುದ್ಯೋಗಿ ಯುವಕರಿಗಾಗಿ ಐದು ಲಕ್ಷ ಉದ್ಯೋಗ ಸೃಷ್ಟಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ನಿರುದ್ಯೋಗಿ ಯುವಕರಿಗೆ ಒಂದು ಲಕ್ಷ ಉದ್ಯೋಗ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ತಮ್ಮ ಪಕ್ಷದ ಗಮನವು ಉದ್ಯೋಗ ಸೃಷ್ಟಿಯ ಮೇಲಿರುತ್ತದೆ ಎಂದಿರುವ ಅವರು, ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯ ನಂತರ ಸರ್ಕಾರ 1 ಲಕ್ಷ ಉದ್ಯೋಗಗಳನ್ನು ನೀಡಲಿದೆ . ರಾಜ್ಯದಲ್ಲಿ ಒಟ್ಟು 5 ಲಕ್ಷ ಉದ್ಯೋಗಗಳ ಭರವಸೆಯನ್ನೂ ಅವರು ನೀಡಿದ್ದಾರೆ.

ಸ್ಟಾರ್ಟ್-ಅಪ್ ಮಾಡುವವರಿಗೆ ಸೊನ್ನೆ ಬಡ್ಡಿ ದರದಲ್ಲಿ ಸಾಲ!
"ನಾವು ಉದ್ಯೋಗ ಸೃಷ್ಟಿಯ ಮೇಲೆ ನಮ್ಮ ಗಮನ ಕೇಂದ್ರೀಕರಿಸುತ್ತೇವೆ. 680 ಕೋಟಿ ರೂಪಾಯಿಗಳ ಸ್ಟಾರ್ಟಪ್ ಫಂಡ್ ಅನ್ನು ರಚಿಸಲಾಗುವುದು. ಸ್ಟಾರ್ಟ್-ಅಪ್ ಸ್ಥಾಪಿಸಲು ಬಯಸುವವರಿಗೆ ಶೂನ್ಯ ಶೇಕಡಾ (ಬಡ್ಡಿ) ಮೇಲೆ ಸಾಲ ಸಿಗುತ್ತದೆ. ಇದಕ್ಕಾಗಿಯೇ ಪ್ರತ್ಯೇಕ ನಿಧಿ ರಚಿಸಲಾಗುವುದು" ಎಂದು ರ್ಯಾಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉನಾ ಮತ್ತು ಚಂಬಾದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಒಂದು ದಿನದ ನಂತರ ಪ್ರಿಯಾಂಕಾ ಗಾಂಧಿಯವರು ಹಿಮಾಚಲ ಪ್ರದೇಶದಲ್ಲಿ ರ್ಯಾಲಿ ನಡೆಸಿದ್ದಾರೆ. ಪ್ರಧಾನಿ ಮೋದಿ ಉನಾದಿಂದ ಭಾರತದ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಉದ್ಘಾಟನೆ ಮಾಡುವುದು ಸೇರಿದಂತೆ ವಿವಿಧ ಯೋಜನೆಗಳಿಗೆ ಅಡಿಪಾಯ ಹಾಕಿದ್ದರು.

ರಾಜ್ಯದ ಸಾರ್ವಜನಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ
ಪ್ರಿಯಾಂಕಾ ಗಾಂಧಿ ಅವರು ರಾಜ್ಯದ ಮಹಿಳೆಯರಿಗೆ ಮಾಸಿಕ 1,500 ರೂಪಾಯಿ ವೇತನ ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು (PHC) ಬಲಪಡಿಸುವ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು "ಆಹಾರ ಮೆರವಣಿಗೆ ಪಾರ್ಕ್" ಗೆ ನಿಬಂಧನೆಗಳನ್ನು ತರುತ್ತದೆ ಎಂದಿದ್ದಾರೆ.
ರಾಜ್ಯದಲ್ಲಿ ನಾಲ್ಕು ಆಂಗ್ಲ ಮಾಧ್ಯಮ ಶಾಲೆಗಳನ್ನು ಸ್ಥಾಪಿಸುತ್ತದೆ. ಮಾದಕ ವ್ಯಸನದ ಸಮಸ್ಯೆಗಳ ಹಿನ್ನೆಲೆಯಲ್ಲಿ ಔಷಧ ನೀತಿಯನ್ನು ರೂಪಿಸಿ ವ್ಯಸನಮುಕ್ತ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಹಿಮಾಚಲ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ, ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖವಿಂದರ್ ಸುಖು ಮತ್ತು ಹಿರಿಯ ನಾಯಕ ರಾಜೀವ್ ಶುಕ್ಲಾ ಕೂಡ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.












Click it and Unblock the Notifications