'ಅಯ್ಯೋ, ನಿಮ್ಮ ಮೊಣಕಾಲು ಕಾಣುತ್ತಿದೆ ನೋಡಿ': ಮೋದಿ, ಭಾಗ್ವತ್ ಫೋಟೊ ಹಾಕಿ ಪ್ರಿಯಾಂಕಾ ವ್ಯಂಗ್ಯ
ನವದೆಹಲಿ, ಮಾರ್ಚ್ 19: ಹರಿದ ಜೀನ್ಸ್ಗಳನ್ನು ತೊಡುವ ಮಹಿಳೆಯರು ಸಮಾಜದ ಮೌಲ್ಯ ಕಳೆಯುತ್ತಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರ ಹೇಳಿರುವುದು ತೀವ್ರ ವಿವಾದ ಸೃಷ್ಟಿಸಿದೆ. ರಾವತ್ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಮತ್ತಿತರರು ಖಾಕಿ ಚಡ್ಡಿ ಹಾಕಿಕೊಂಡ ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
''ಅಯ್ಯೋ ದೇವರೇ!!! ಅವರ ಮೊಣಕಾಲುಗಳು ಕಾಣಿಸುತ್ತಿವೆ'' ಎಂದು ಬಿಜೆಪಿ ನಾಯಕರು, ಆರೆಸ್ಸೆಸ್ನ ಹಿಂದಿನ ಸಮವಸ್ತ್ರ ಬಿಳಿ ಅಂಗಿ ಮತ್ತು ಖಾಕಿ ಚಡ್ಡಿಯನ್ನು ಧರಿಸಿದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಇದೆಲ್ಲವೂ ಆರೆಸ್ಸೆಸ್ನ ಕಾರ್ಯಕ್ರಮದ ಚಿತ್ರಗಳಾಗಿವೆ.
ಇಂದಿನ ಯುವ ಜನಾಂಗ ಮೌಲ್ಯಗಳಿಲ್ಲದ ವಿಚಿತ್ರ ಫ್ಯಾಷನ್ ಟ್ರೆಂಡ್ ಅನ್ನು ಅನುಸರಿಸುತ್ತಿದೆ. ಮೊಣಕಾಲಿನಲ್ಲಿ ಹರಿದ ಜೀನ್ಸ್ ಧರಿಸಿದ್ದಕ್ಕೆ ತಾವು ಮಹಾನ್ ವ್ಯಕ್ತಿಗಳೆಂದು ಭಾವಿಸಿಬಿಡುತ್ತಾರೆ ಎಂದು ರಾವತ್ ಟೀಕಿಸಿದ್ದರು. ಮುಂದೆ ಓದಿ.

ಯಾವ ಸಂದೇಶ ನೀಡುತ್ತಾರೆ?
ಅರೆಬರೆ ಹರಿದ ಜೀನ್ಸ್ ತೊಟ್ಟ ಮಹಿಳೆಯೊಬ್ಬರು ಸ್ವಯಂ ಸೇವಕ ಸಂಘ ನಡೆಸುತ್ತಿರುವುದನ್ನು ನೋಡಿ ನನಗೆ ಶಾಕ್ ಆಯಿತು. ಈಕೆ ಸಮಾಜಕ್ಕೆ ಯಾವ ರೀತಿಯ ಉದಾಹರಣೆಯಾಗಬಲ್ಲಳು ಎಂಬ ಆತಂಕ ಉಂಟಾಯಿತು. ಈ ರೀತಿಯ ಮಹಿಳೆಯರು ಸಮಾಜದಲ್ಲಿ ಹಲವು ಜನರನ್ನು ಭೇಟಿ ಆಗಿ, ಅವರ ಸಮಸ್ಯೆಗಳನ್ನು ಬಗೆಹರಿಸಲು ಹೋಗುತ್ತಾರೆ ಎಂದರೆ ನಮ್ಮ ಸಮಾಜಕ್ಕೆ, ನಮ್ಮ ಮಕ್ಕಳಿಗೆ ಯಾವ ರೀತಿಯ ಸಂದೇಶ ನೀಡುತ್ತಿದ್ದೇವೆ ಎಂಬ ಕುರಿತು ನಾವು ಯೋಚಿಸಬೇಕಿದೆ. ನಾವು ಏನನ್ನು ಮಾಡುತ್ತೇವೋ ಅದನ್ನೇ ನಮ್ಮ ಮಕ್ಕಳು ಅನುಸರಿಸುತ್ತಾರಲ್ಲವೇ ಎಂದು ರಾವತ್ ಹೇಳಿದ್ದು ವಿವಾದ ಸೃಷ್ಟಿಸಿತ್ತು.
|
ರಾವತ್ ಪತ್ನಿ ಸಮರ್ಥನೆ
ತೀರಥ್ ಸಿಂಗ್ ರಾವತ್ ಅವರ ಹೇಳಿಕೆಯನ್ನು ಅವರ ಪತ್ನಿ ರಶ್ಮಿ ತ್ಯಾಗಿ ಸಮರ್ಥಿಸಿಕೊಂಡಿದ್ದಾರೆ. ಅವರು ಈ ಹೇಳಿಕೆ ನೀಡಿದ ಹಿಂದಿನ ಒಟ್ಟಾರೆ ಸನ್ನಿವೇಶವನ್ನು ಮರೆ ಮಾಚಿ ಇದನ್ನು ವಿವಾದವನ್ನಾಗಿಸಲಾಗಿದೆ ಎಂದು ರಶ್ಮಿ ಹೇಳಿದ್ದಾರೆ.

ಮಹಿಳೆಯರ ಜವಾಬ್ದಾರಿ
'ದೇಶ ಮತ್ತು ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾಲುದಾರಿಕೆ ಅಭೂತಪೂರ್ವವಾಗಿದೆ. ನಮ್ಮ ಸಾಂಸ್ಕೃತಿಕ ಪರಂಪರೆಯನ್ನು, ನಮ್ಮ ಅಸ್ಮಿತೆಯನ್ನು ಮತ್ತು ನಮ್ಮ ಉಡುಗೆ ತೊಡುಗೆ ರೀತಿಯನ್ನು ಕಾಪಾಡುವುದು ನಮ್ಮ ದೇಶದ ಮಹಿಳೆಯರ ಜವಾಬ್ದಾರಿ ಎಂಬ ಅರ್ಥದಲ್ಲಿ ಅವರು ಹೇಳಿದ್ದಾರೆ' ಎಂಬುದಾಗಿ ಸಮರ್ಥನೆ ನೀಡಿದ್ದಾರೆ.
Recommended Video

ಅಪರಾಧಗಳಿಗೆ ಪ್ರಚೋದನೆ
'ಉನ್ನತ ಹುದ್ದೆಯಲ್ಲಿ ಇರುವವರು ಸಾರ್ವಜನಿಕವಾಗಿ ಹೇಳಿಕೆ ನೀಡುವ ಮುನ್ನ ಯೋಚನೆ ಮಾಡಬೇಕು. ಇಂದಿನ ಕಾಲಮಾನದಲ್ಲಿ ಜನರು ಧರಿಸುವ ಉಡುಪಿನ ಆಧಾರದಲ್ಲಿ ಯಾರು ಸುಸಂಸ್ಕೃತರು, ಯಾರು ಅಲ್ಲ ಎಂದು ನೀವು ತೀರ್ಮಾನಿಸುತ್ತೀರಾ? ಇದು ಕೀಳು ಮನಸ್ಥಿತಿ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಪ್ರಚೋದನೆ ನೀಡುವಂತಿದೆ' ಎಂದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಟೀಕಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications