ಮಾನವೀಯತೆ ಮೇಲಿನ ಅಪರಾಧ: ಫಡ್ನವೀಸ್ ವಿರುದ್ಧ ಪ್ರಿಯಾಂಕಾ ಗಾಂಧಿ ಟೀಕೆ
ನವದೆಹಲಿ, ಏಪ್ರಿಲ್ 19: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕೋವಿಡ್ ಚಿಕಿತ್ಸೆಗೆ ಮುಖ್ಯವಾದ ರೆಮ್ಡೆಸಿವಿರ್ ಔಷಧವನ್ನು ಸಂಗ್ರಹಿಸಿ ಇರಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಆರೋಪಿಸಿದ್ದಾರೆ. ಜನರು ರೆಮ್ಡೆಸಿವಿರ್ ಹೊಂದಿಸಲು ಸಾಧ್ಯವಾಗದೆ ಒದ್ದಾಡುತ್ತಿರುವಾಗ ಬಿಜೆಪಿ ನಾಯಕ ಅದನ್ನು ತಮ್ಮ ಬಳಿ ಇರಿಸಿಕೊಂಡಿದ್ದಾರೆ. ಇದು ಮಾನವೀಯತೆ ವಿರುದ್ಧದ ಅಪರಾಧ ಎಂದು ಅವರು ಟೀಕಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ರೆಮ್ಡೆಸಿವಿರ್ ಔಷಧ ವಿಚಾರವಾಗಿ ನಡೆದ ರಾಜಕೀಯ ಸಂಘರ್ಷದ ವಿಡಿಯೋವನ್ನು ಹಂಚಿಕೊಂಡಿರುವ ಪ್ರಿಯಾಂಕಾ, ಟ್ವಿಟ್ಟರ್ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕೋವಿಡ್-19ರ ಚಿಕಿತ್ಸೆಗೆ ಅತ್ಯಂತ ಮುಖ್ಯವಾಗಿ ಬಳಸುತ್ತಿರುವ ರೆಮ್ಡೆಸಿವಿರ್ ಲಸಿಕೆಯ ಸಾವಿರಾರು ಬಾಟಲಿಗಳನ್ನು ಬ್ರುಕ್ ಫಾರ್ಮಾ ಔಷಧ ಕಂಪೆನಿ ಸಂಗ್ರಹಿಸಿ ಇರಿಸಿಕೊಂಡಿದೆ ಎಂಬ ಮಾಹಿತಿ ಆಧಾರದಲ್ಲಿ ಮುಂಬೈನಲ್ಲಿನ ಕಂಪೆನಿ ನಿರ್ದೇಶಕರನ್ನು ಪೊಲೀಸರು ಸಮನ್ಸ್ ನೀಡಿ ವಿಚಾರಣೆಗೆ ಒಳಪಡಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಫಡ್ನವೀಸ್ ಹಾಗೂ ಇತರೆ ಬಿಜೆಪಿ ಮುಖಂಡರು ಠಾಣೆಗೆ ತೆರಳಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು.

'ದೇಶದ ಪ್ರತಿ ಮೂಲೆ ಮೂಲೆಯ ಜನರು ರೆಮ್ಡೆಸಿವಿರ್ ಲಸಿಕೆಯ ಪೂರೈಕೆಗಾಗಿ ಜನರು ಮನವಿ ಮಾಡುತ್ತಿರುವ ಮತ್ತು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಒಂದು ಬಾಟಲಿ ರೆಮ್ಡೆಸಿವಿರ್ ಖರೀದಿಸಲು ಹೆಣಗಾಡುತ್ತಿರುವ ಸಮಯದಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಬಿಜೆಪಿ ನಾಯಕರೊಬ್ಬರು ರೆಮ್ಡೆಸಿವಿರ್ ಲಸಿಕೆಯನ್ನು ಸಂಗ್ರಹಿಸಿ ಇರಿಸಿಕೊಂಡಿರುವುದು ಮಾನವೀಯತೆಯ ವಿರುದ್ಧದ ಅಪರಾಧ' ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಭಾರತದಿಂದ ಹೊರದೇಶಕ್ಕೆ ರೆಮ್ಡೆಸಿವಿರ್ ಔಷಧಗಳ ರಫ್ತು ಮಾಡುವುದನ್ನು ನಿಷೇಧಿಸಲಾಗಿದ್ದರೂ ಸರಕು ವಿಮಾನದಲ್ಲಿ ರೆಮ್ಡೆಸಿವಿರ್ ಸಂಗ್ರಹವನ್ನು ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಬಂದಿದ್ದರಿಂದ ಕಂಪೆನಿ ನಿರ್ದೇಶಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
जब देश के कोने-कोने से लोग रेमडेसिविर उपलब्ध कराने की गुहार लगा रहे हैं और तमाम लोग जान बचाने के लिए किसी तरह एक शीशी रेमडेसिविर जुटाने के लिए जद्दोजहद कर रहे हैं, उस समय जिम्मेदार पद पर रह चुके भाजपा नेता का रेमडेसिविर की जमाखोरी करने का कृत्य मानवता के खिलाफ अपराध है। pic.twitter.com/arIl5fTnGO
— Priyanka Gandhi Vadra (@priyankagandhi) April 19, 2021
ಔಷಧವನ್ನು ಮಹಾರಾಷ್ಟ್ರಕ್ಕೆ ಪೂರೈಕೆ ಮಾಡಲು ಬಿಜೆಪಿ ಅನುಮತಿ ಪಡೆಯುವುದರಲ್ಲಿ ಯಶಸ್ವಿಯಾದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಫಡ್ನವೀಸ್ ಆರೋಪಿಸಿದ್ದರು.
ರೆಮ್ಡೆಸಿವಿರ್ ಲಸಿಕೆಯನ್ನು ಸರ್ಕಾರ ಮಾತ್ರವೇ ಮಾರಾಟ ಮಾಡಲು ಅವಕಾಶ ಇರುವಾಗ ಗುಜರಾತ್ನಿಂದ ಅದನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ ಹೇಗೆ ಖರೀದಿ ಮಾಡಲು ಸಾಧ್ಯ ಎಂದು ಅನೇಕರು ಪ್ರಶ್ನಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications