ಮಾನವೀಯತೆ ಮೇಲಿನ ಅಪರಾಧ: ಫಡ್ನವೀಸ್ ವಿರುದ್ಧ ಪ್ರಿಯಾಂಕಾ ಗಾಂಧಿ ಟೀಕೆ
ನವದೆಹಲಿ, ಏಪ್ರಿಲ್ 19: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕೋವಿಡ್ ಚಿಕಿತ್ಸೆಗೆ ಮುಖ್ಯವಾದ ರೆಮ್ಡೆಸಿವಿರ್ ಔಷಧವನ್ನು ಸಂಗ್ರಹಿಸಿ ಇರಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಆರೋಪಿಸಿದ್ದಾರೆ. ಜನರು ರೆಮ್ಡೆಸಿವಿರ್ ಹೊಂದಿಸಲು ಸಾಧ್ಯವಾಗದೆ ಒದ್ದಾಡುತ್ತಿರುವಾಗ ಬಿಜೆಪಿ ನಾಯಕ ಅದನ್ನು ತಮ್ಮ ಬಳಿ ಇರಿಸಿಕೊಂಡಿದ್ದಾರೆ. ಇದು ಮಾನವೀಯತೆ ವಿರುದ್ಧದ ಅಪರಾಧ ಎಂದು ಅವರು ಟೀಕಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ರೆಮ್ಡೆಸಿವಿರ್ ಔಷಧ ವಿಚಾರವಾಗಿ ನಡೆದ ರಾಜಕೀಯ ಸಂಘರ್ಷದ ವಿಡಿಯೋವನ್ನು ಹಂಚಿಕೊಂಡಿರುವ ಪ್ರಿಯಾಂಕಾ, ಟ್ವಿಟ್ಟರ್ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕೋವಿಡ್-19ರ ಚಿಕಿತ್ಸೆಗೆ ಅತ್ಯಂತ ಮುಖ್ಯವಾಗಿ ಬಳಸುತ್ತಿರುವ ರೆಮ್ಡೆಸಿವಿರ್ ಲಸಿಕೆಯ ಸಾವಿರಾರು ಬಾಟಲಿಗಳನ್ನು ಬ್ರುಕ್ ಫಾರ್ಮಾ ಔಷಧ ಕಂಪೆನಿ ಸಂಗ್ರಹಿಸಿ ಇರಿಸಿಕೊಂಡಿದೆ ಎಂಬ ಮಾಹಿತಿ ಆಧಾರದಲ್ಲಿ ಮುಂಬೈನಲ್ಲಿನ ಕಂಪೆನಿ ನಿರ್ದೇಶಕರನ್ನು ಪೊಲೀಸರು ಸಮನ್ಸ್ ನೀಡಿ ವಿಚಾರಣೆಗೆ ಒಳಪಡಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಫಡ್ನವೀಸ್ ಹಾಗೂ ಇತರೆ ಬಿಜೆಪಿ ಮುಖಂಡರು ಠಾಣೆಗೆ ತೆರಳಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು.

'ದೇಶದ ಪ್ರತಿ ಮೂಲೆ ಮೂಲೆಯ ಜನರು ರೆಮ್ಡೆಸಿವಿರ್ ಲಸಿಕೆಯ ಪೂರೈಕೆಗಾಗಿ ಜನರು ಮನವಿ ಮಾಡುತ್ತಿರುವ ಮತ್ತು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಒಂದು ಬಾಟಲಿ ರೆಮ್ಡೆಸಿವಿರ್ ಖರೀದಿಸಲು ಹೆಣಗಾಡುತ್ತಿರುವ ಸಮಯದಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಬಿಜೆಪಿ ನಾಯಕರೊಬ್ಬರು ರೆಮ್ಡೆಸಿವಿರ್ ಲಸಿಕೆಯನ್ನು ಸಂಗ್ರಹಿಸಿ ಇರಿಸಿಕೊಂಡಿರುವುದು ಮಾನವೀಯತೆಯ ವಿರುದ್ಧದ ಅಪರಾಧ' ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಭಾರತದಿಂದ ಹೊರದೇಶಕ್ಕೆ ರೆಮ್ಡೆಸಿವಿರ್ ಔಷಧಗಳ ರಫ್ತು ಮಾಡುವುದನ್ನು ನಿಷೇಧಿಸಲಾಗಿದ್ದರೂ ಸರಕು ವಿಮಾನದಲ್ಲಿ ರೆಮ್ಡೆಸಿವಿರ್ ಸಂಗ್ರಹವನ್ನು ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಬಂದಿದ್ದರಿಂದ ಕಂಪೆನಿ ನಿರ್ದೇಶಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
जब देश के कोने-कोने से लोग रेमडेसिविर उपलब्ध कराने की गुहार लगा रहे हैं और तमाम लोग जान बचाने के लिए किसी तरह एक शीशी रेमडेसिविर जुटाने के लिए जद्दोजहद कर रहे हैं, उस समय जिम्मेदार पद पर रह चुके भाजपा नेता का रेमडेसिविर की जमाखोरी करने का कृत्य मानवता के खिलाफ अपराध है। pic.twitter.com/arIl5fTnGO
— Priyanka Gandhi Vadra (@priyankagandhi) April 19, 2021
ಔಷಧವನ್ನು ಮಹಾರಾಷ್ಟ್ರಕ್ಕೆ ಪೂರೈಕೆ ಮಾಡಲು ಬಿಜೆಪಿ ಅನುಮತಿ ಪಡೆಯುವುದರಲ್ಲಿ ಯಶಸ್ವಿಯಾದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಫಡ್ನವೀಸ್ ಆರೋಪಿಸಿದ್ದರು.
ರೆಮ್ಡೆಸಿವಿರ್ ಲಸಿಕೆಯನ್ನು ಸರ್ಕಾರ ಮಾತ್ರವೇ ಮಾರಾಟ ಮಾಡಲು ಅವಕಾಶ ಇರುವಾಗ ಗುಜರಾತ್ನಿಂದ ಅದನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ ಹೇಗೆ ಖರೀದಿ ಮಾಡಲು ಸಾಧ್ಯ ಎಂದು ಅನೇಕರು ಪ್ರಶ್ನಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications