#JusticeForSathyaraj ಹ್ಯಾಷ್ ಟ್ಯಾಗ್ ನಲ್ಲಿ ಕನ್ನಡಿಗರನ್ನು ಕೆಣಕಿದ ಟ್ವಿಟ್ಟಿಗರು
ಟ್ವಿಟ್ಟರ್ ನಲ್ಲಿ ಸತ್ಯರಾಜ್ ಪರ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ನಲ್ಲಿದೆ. ಕನ್ನಡಿಗರನ್ನು ಲೇವಡಿ ಮಾಡುವ ಟ್ವೀಟುಗಳು #JusticeForSathyaraj ಹ್ಯಾಷ್ ಟ್ಯಾಗ್ ನಲ್ಲಿ ಬಂದು ಬೀಳುತ್ತಿವೆ.
ಸತ್ಯರಾಜ್ ಆಲಿಯಾಸ್ ಕಟ್ಟಪ್ಪ ಕನ್ನಡಿಗರ ಮತ್ತು ಕರ್ನಾಟಕದ ಕ್ಷಮೆಯಾಚಿಸಬೇಕು, ಅಲ್ಲಿಯವರೆಗೆ ಬಾಹುಬಲಿ 2 ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎನ್ನುವ ಕನ್ನಡಪರ ಸಂಘಟನೆಗಳ ನಿರ್ಧಾರ ಮುಂದುವರಿದ ನಂತರ, ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಸತ್ಯರಾಜ್ ಪರ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ನಲ್ಲಿದೆ.
8-9ವರ್ಷಗಳ ಹಿಂದಿನ ಸತ್ಯರಾಜ್ ಹೇಳಿಕೆಯನ್ನು ಇಟ್ಟುಕೊಂಡು ಕನ್ನಡಿಗರು ಸತ್ಯರಾಜ್ ವಿರುದ್ದ ತಿರುಗಿ ಬೀಳುತ್ತಿರುವುದು ಸರಿಯಲ್ಲ.
ಆ ಹೇಳಿಕೆಯ ನಂತರ ಸತ್ಯರಾಜ್ ನಟನೆಯ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಲಿಲ್ಲವೇ? ನಾವು ಸತ್ಯರಾಜ್ ಪರವಾಗಿದ್ದೇವೆ ಎನ್ನುವ ಟ್ವೀಟುಗಳು ಹರಿದಾಡುತ್ತಿದ್ದೇವೆ. (ವಾಟಾಳ್ ನಾಗರಾಜ್ ಸಂದರ್ಶನದ ಆಯ್ದ ಭಾಗ)
ಸತ್ಯರಾಜ್ ಅವರ ಹಲವು ಸಿನಿಮಾಗಳು ಈ ಹಿಂದೆ ಇಲ್ಲೂ ಬಿಡುಗಡೆಯಾಗಿರಬಹುದು, ಈಗ ಎಲ್ಲಾ ಕನ್ನಡ ಪರ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆ ನಡೆಸುವ ಸಮಯ ಬಂದಿದೆ. ಇದು ಸುಸಂದರ್ಭ, ಮಾತ್ರವಲ್ಲ ಇದ್ದು ಒಗ್ಗಟ್ಟಿನ ಆಕ್ರೋಶವೇ ಹೊರತು ಅವಕಾಶವಾದಿತನ ಅಲ್ಲ ಎಂದು ವಾಟಾಳ್ ನಾಗರಾಜ್ ಗುರುವಾರ (ಏ 20) ' ಒನ್ ಇಂಡಿಯಾ' ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.[ಕನ್ನಡಿಗರ ಕ್ಷಮೆಕೋರಿ ಸತ್ಯರಾಜ್ ಆಡಿರುವ ಮಾತುಗಳಿವು!]
ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ, ಸತ್ಯರಾಜ್ ಹೇಳಿಕೆಗಾಗಿ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ತಡೆವೊಡ್ಡುವುದು ಸರಿಯಲ್ಲ. ಸತ್ಯರಾಜ್ ನೀಡಿದ ಹೇಳಿಕೆ ಅವರ ವೈಯಕ್ತಿಕ, ಇದಕ್ಕೆ ನಿರ್ದೇಶಕರು ಅಥವಾ ನಿರ್ಮಾಪಕರು ಜವಾಬ್ದಾರರಲ್ಲ ಎಂದು ರಾಜಮೌಳಿ ಹೇಳಿರುವ ವಿಡಿಯೋ ಗುರುವಾರ ಬಿಡುಗಡೆಯಾಗಿದೆ.
ಇವೆಲ್ಲದರ ನಡುವೆ ಕನ್ನಡಿಗರು, ಕರ್ನಾಟಕ ಮತ್ತು ನಮ್ಮ ನಟರನ್ನು ಲೇವಡಿ ಮಾಡುವ ಟ್ವೀಟುಗಳು #JusticeForSathyaraj ಹ್ಯಾಷ್ ಟ್ಯಾಗ್ ನಲ್ಲಿ ಬಂದು ಬೀಳುತ್ತಿದ್ದು, ಕೆಲವೊಂದು ಟ್ವೀಟುಗಳಿಗೆ ಸರಿಯಾದ ಪ್ರತ್ಯುತ್ತರ ಸಿಗುತ್ತಿದೆ. ಕೆಲವೊಂದು ಸ್ಯಾಂಪಲ್ ಟ್ವೀಟುಗಳ ಮುಂದೆ ನೋಡಿ..
|
ಕನ್ನಡಿಗರು ಹಿಂದಕ್ಕೆ
ಪ್ರಪಂಚ ದಿನದಿಂದ ದಿನಕ್ಕೆ ಮುಂದುವರಿಯುತ್ತಿದ್ದರೆ, ಕನ್ನಡಿಗರು ದಿನದಿಂದ ದಿನಕ್ಕೆ ಹಿಂದಕ್ಕೆ ಸಾಗುತ್ತಿದ್ದಾರೆ.
|
ನ್ಯಾಯಾಲಯದ ತೀರ್ಪಿಗೆ ಬೆಲೆಕೊಡದವರು
ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಬೆಲೆಕೊಡದ ಜನರು ನಟನೊಬ್ಬನಿಂದ ಕ್ಷಮಾಪಣೆಯಾಚಿಸುತ್ತಿದ್ದಾರೆ.

ಪುನೀತ್ ಒಬ್ಬ ಜೋಕರ್
ಪುನೀತ್ ರಾಜಕುಮಾರ್ ಒಬ್ಬ ಜೋಕರ್, ಅವರನ್ನು ಹೀರೋ ಎನ್ನುವವರು ನೀವು!

ಕನ್ನಡದಲ್ಲಿ ಒಳ್ಳೆ ಸಿನಿಮಾ ಬರುವುದೇ ಇಲ್ಲ
ಕನ್ನಡಿಗರು ಮಾಗುವುದೇ ಇಲ್ಲ, ಒಳ್ಳೆ ಸಿನಿಮಾ ಅವರಿಗೆ ಹಿಡಿಸುವುದಿಲ್ಲ. ಕನ್ನಡದ ಸಿನಿಮಾವನ್ನು ಕನ್ನಡಿಗರು ಬಿಟ್ಟರೆ ಬೇರೆ ಯಾರೂ ನೋಡಲು ಸಾಧ್ಯವಿಲ್ಲ. ಎಂಟು ವರ್ಷದ ಹಿಂದಿನ ಹೇಳಿಕೆಯನ್ನು ಇಟ್ಟುಕೊಂಡು ಈಗ ಪ್ರತಿಭಟಿಸುತ್ತಿದ್ದಾರೆಂದರೆ ಏನರ್ಥ?
|
ಸತ್ಯರಾಜ್ ದೃಶ್ಯಕ್ಕೆ ಕತ್ತರಿ ಬಿದ್ದರೆ, ಕ್ಲೈಮ್ಯಾಕ್ಸ್ ಅರ್ಥವಾಗುವುದಿಲ್ಲ
ಒಂದು ವೇಳೆ ಸತ್ಯರಾಜ್ ದೃಶ್ಯವನ್ನು ಸಿನಿಮಾದಲ್ಲಿ ಕಟ್ ಮಾಡಿದರೆ ಬಾಹುಬಲಿಯನ್ನು ಕಟ್ಟಪ್ಪ ಯಾಕೆ ಕೊಂದ ಎಂದು ಕನ್ನಡಿಗರಿಗೆ ತಿಳಿಯುವುದೇ ಇಲ್ಲ.
|
ರಜನಿ ಟ್ರೋಲ್ ಮಾಡುವ ಟ್ವೀಟ್
ನಿನ್ನ (ವಾಟಾಳ್ ನಾಗರಾಜ್) ಸಪೋರ್ಟ್ ಕೇಳಲು ನಾನೇನು ಬಾಷಾನಾ? ನಾನು ತಮಿಳಿಯನ್
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications