ಬಡವರ ಬಜೆಟ್, ದೇಶದ ಅಭಿವೃದ್ಧಿಗೆ ಪೂರಕ-ಅನಂತ್ ಕುಮಾರ್
2017-18ನೇ ಬಜೆಟನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಇದೊಂದು ಬಡವರ ಪರ, ದೇಶದ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ಅವರು ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ 1: ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಬಡವರ ಬಜೆಟ್ ಆಗಿದ್ದು, ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರ ಸಚಿವ ಅನಂತ್ ಕುಮಾರ್ ಬಣ್ಣಿಸಿದ್ದಾರೆ.[ಬಜೆಟ್ 2017: ಮೂಲ ಸೌಕರ್ಯಕ್ಕೆ ಜೇಟ್ಲಿ ಕೊಟ್ಟಿದ್ದು ಬರೀ ಸಪ್ಪೆ ಸಪ್ಪೆ..]
2017ರ ಬಜೆಟ್ ಬಡವರು, ದಲಿತರು, ಶೋಷಿತರ, ವಂಚಿತರು, ಕೃಷಿಕರು, ಮಹಿಳೆಯರು ಮತ್ತು ಯುವಕರನ್ನು ಆಧಾರವಾಗಿಟ್ಟುಕೊಂಡಿದೆ. ಈ ಎಲ್ಲಾ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಬಜೆಟಿನಲ್ಲಿ ಒತ್ತು ನೀಡಲಾಗಿದೆ. ಕೃಷಿಕರಿಗೆ ಈ ಆರ್ಥಿಕ ವರ್ಷದಲ್ಲಿ 10 ಲಕ್ಷ ಕೋಟಿವರೆಗೆ ಸಾಲ ನೀಡಲಾಗುವುದ ಎಂದು ಘೋಷಣೆ ಮಾಡಲಾಗಿದೆ. 50,000 ಗ್ರಾಮ ಪಂಚಾಯತ್ ಗಳನ್ನು ಬರ ಮುಕ್ತ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ನರೇಗಾ ಯೋಜನೆಗೆ 48,000 ಕೋಟಿ ನೀಡಲಾಗಿದೆ. ಗ್ರಾಮೀಣ ಜನರಿಗೆ ಇವೆಲ್ಲಾ ತುಂಬಾ ಉಪಯೋಗಕ್ಕೆ ಬರಲಿವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.[ಜೇಟ್ಲಿ ಬಜೆಟನ್ನು ಠುಸ್ ಪಟಾಕಿ ಎಂದ ರಾಹುಲ್ ಗಾಂಧಿ]

ಇದೇ ರೀತಿ ಗ್ರಾಮೀಣ ಸಡಕ್ ಯೋಜನೆ, ಬಡವರಿಗೆ ಮನೆ ನೀಡುವ ಮಹತ್ತರ ಯೋಜನೆಗಳಿಗೆ ಬಜೆಟಿನಲ್ಲಿ ಮಹತ್ವ ನೀಡಲಾಗಿದೆ. ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕಾಗಿ 52,393 ಕೋಟಿ ಹಣ ನೀಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 31,920 ಕೋಟಿ ಹಾಗೂ ಅಲ್ಪಸಂಖ್ಯಾತರಿಗೆ 4,195 ಕೋಟಿ ನೀಡಿದ್ದಾರೆ. ಕೇಂದ್ರ ಬಜೆಟಿನಲ್ಲಿ ರೈಲ್ವೇ ಬಜೆಟನ್ನು ಸೇರಿಸಿರುವುದು ಸ್ವಾಗತಾರ್ಹ ನಡೆ ಎಂದು ಅನಂತ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications