ದಿಲೀಪ್ ಭೂ ವ್ಯವಹಾರ, ವಿದೇಶಿ ಯಾತ್ರೆ ಕುರಿತು ತನಿಖೆ
ತಿರುವನಂತಪುರಂ, ಜುಲೈ 30: ಬಹುಭಾಷಾ ನಟಿ ಅಪಹರಣ ಹಾಗೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿ ಬಂಧಿತನಾಗಿ ಜೈಲಿನಲ್ಲಿರುವ ನಟ ದಿಲೀಪ್ ಗೆ ಇನ್ನಷ್ಟು ಕಷ್ಟ ಎದುರಾಗಿದೆ.
ಭೂಸ್ವಾಧೀನದ ಆರೋಪದ ಕುರಿತು ತನಿಖೆ ನಡೆಸುವಂತೆ ಜಾಗೃತ ದಳ ನ್ಯಾಯಾಲಯವು ಜಾಗೃತ ದಳ ಹಾಗೂ ಭ್ರಷ್ಚಾಚಾರ ನಿಗ್ರಹ ದಳಕ್ಕೆ ಶನಿವಾರದಂದು ಆದೇಶಿಸಿದೆ. ಚಾಲಕ್ಕುಡಿಯಲ್ಲಿ ದಿಲೀಪ್ ಮಾಲಕತ್ವದ ಥಿಯೇಟರ್ ಸಂಕೀರ್ಣ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಕಟ್ಟಲಾಗಿದೆ.

ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಸುಮಾರು 5 ಜಿಲ್ಲೆಗಳಲ್ಲಿನ 55 ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಸೆಪ್ಟಂಬರ್ 13ರೊಳಗೆ ವರದಿ ಸಲ್ಲಿಸುವಂತೆ ಜಾಗೃತ ದಳ ಹಾಗೂ ಭ್ರಷ್ಚಾಚಾರ ನಿಗ್ರಹ ದಳಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.
ಚಲಕ್ಕುಡಿಯ ಅಥಿರಪಿಲ್ಲಿ ಗ್ರಾಮದಲ್ಲಿ 39.98 ಎಕರೆ ವಿಸ್ತೀರ್ಣದ ಭೂಮಿಯನ್ನು 80 ಲಕ್ಷ ರುಗೆ ಮಾರಾಟ ಮಾಡಿದ ದಾಖಲೆ ಲಭ್ಯವಾಗಿದೆ. ಸುಮಾರು 55ಕ್ಕೂ ಅಧಿಕ ವ್ಯವಹಾರಗಳಿಂದ ಕೋಟ್ಯಂತರ ರುಪಾಯಿ ಕೈ ಬದಲಾಗಿದೆ. ಆಳಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರುಗಳಲ್ಲಿನ ಭೂ ವ್ಯಹಾರಗಳ ಬಗ್ಗೆ ರಾಜ್ಯದ ಭೂ ಕಂದಾಯ ಇಲಾಖೆಯಿಂದ ದಾಖಲೆಗಳನ್ನು ಪಡೆಯಲಾಗಿದೆ.
ದಿಲೀಪ್ ಅವರ ವಿದೇಶಿ ಯಾತ್ರೆ ಬಗ್ಗೆ ಕೂಡಾ ತನಿಖೆ ಆರಂಭಿಸಲಾಗಿದೆ. ಗಾಯಕಿ ರಿಮಿ, ನಟಿ, ದಿಲೀಪ್ ಪತ್ನಿ ಕಾವ್ಯ ಮಾಧವನ್, ಆಕೆಯ ತಯಿ ಶ್ಯಾಮಲಾ ಮಾಧವನ್ ಅವರ ವಿಚಾರಣೆ ಕೂಡಾ ಜಾರಿಯಲ್ಲಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications