Get Updates
Get notified of breaking news, exclusive insights, and must-see stories!

ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿವಿ ಉಪ ಕುಲಪತಿಯಾಗಿ ಕನ್ನಡಿಗ ಪ್ರೊಫೆಸರ್ ಅಶೋಕ್ ರಾಮಪ್ಪ ನೇಮಕ

ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿವಿ ಉಪ ಕುಲಪತಿಯಾಗಿ ಕನ್ನಡಿಗ ಪ್ರೊಫೆಸರ್ ಅಶೋಕ್ ರಾಮಪ್ಪ ಪಾಟೀಲ್ ನೇಮಕವಾಗಿದ್ದಾರೆ. ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಪ್ರೊಫೆಸರ್ ಪಾಟೀಲ್ ಅವರನ್ನು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಿಸಿದ್ದಾರೆ.

ಪ್ರೊಫೆಸರ್ ಅಶೋಕ್ ರಾಮಪ್ಪ ಪಾಟೀಲರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ತಮ್ಮ ಶಿಕ್ಷಣವನ್ನು ಪಡೆದರು. 1993ರಲ್ಲಿ ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್ ಸೈನ್ಸ್‌ನಲ್ಲಿ ಪದವಿ ಪಡೆದ ಅವರು, 1996ರಲ್ಲಿ ಎಲ್‌ಎಲ್‌.ಬಿ ಪದವಿಯನ್ನು ಪೂರ್ಣಗೊಳಿಸಿದರು. ನಂತರ ಮರ್ಕೆಂಟೈಲ್ ಕಾನೂನಿನಲ್ಲಿ ಪ್ರಥಮ ಶ್ರೇಣಿಯೊಂದಿಗೆ 1998 ರಲ್ಲಿ ಎಲ್‌ಎಲ್‌.ಎಂ ಅನ್ನು ಪೂರ್ಣಗೊಳಿಸಿದರು.

 Professor Ashok Ramappa Patil Appointed Vice Chancellor of NUSRL Ranchi

2006ರಲ್ಲಿ ಯುಜಿಸಿ ಫೆಲೋಶಿಪ್ ಅಡಿಯಲ್ಲಿ ಗ್ರಾಹಕ ಕಾನೂನು ವಿಷಯದಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದರು. ಆರಂಭದಲ್ಲಿ 1999 ರವರೆಗೆ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದರು. ನಂತರ ಶಿಕ್ಷಣ ರಂಗಕ್ಕೆ ಕಾಲಿಟ್ಟರು. 2007 ರವರೆಗೆ ಬೆಳಗಾವಿಯ ಕೆಎಲ್‌ಇಎಸ್‌ ಬಿ.ವಿ. ಬೆಲ್ಲದ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ ಅವರು, 2007ರಿಂದ 2008 ರವರೆಗೆ ಅದೇ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡಿದರು.

ಆಗಸ್ಟ್ 2008 ರಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ಗೆ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇರ್ಪಡೆಯಾದ ಅವರು 2011 ರಲ್ಲಿ ಪ್ರೊಫೆಸರ್ ಆಗಿ ಬಡ್ತಿ ಪಡೆದರು.

ಇದೊಂದು ಉತ್ತಮ ಅವಕಾಶ ಎಂದ ಪಾಟೀಲ್

ತಾವು ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿವಿ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ, ಬಾರ್ & ಬೆಂಚ್‌ ಜೊತೆ ಮಾತನಾಡಿದ್ದು, ಸಂತಸ ಹಂಚಿಕೊಂಡಿದ್ದಾರೆ.

"ಇದೊಂದು ಉತ್ತಮ ಅವಕಾಶ ಮತ್ತು ವಿಶ್ವವಿದ್ಯಾನಿಲಯದಲ್ಲಿ ಸುಧಾರಣೆಗೆ ಸಾಕಷ್ಟು ಅವಕಾಶವಿದೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ನಾನು ತೆಗೆದುಕೊಂಡ ಅಂತರರಾಷ್ಟ್ರೀಯ ನಿಯತಕಾಲಿಕೆಗಳು, ಪುಸ್ತಕ ಪ್ರಕಟಣೆಗಳು ಮತ್ತು ನಿಧಿಸಂಗ್ರಹದಂತ ಹೊಸ ಯೋಜನೆಗಳನ್ನು ಇಲ್ಲಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ" ಎಂದು ಹೇಳಿದ್ದಾರೆ.

ಪ್ರಸ್ತುತ ಎನ್‌ಎಲ್‌ಎಸ್‌ಐಯುನಲ್ಲಿ ಬೋಧನೆ ಮಾಡುತ್ತಿರುವ ಪ್ರೊಫೆಸರ್ ಪಾಟೀಲ್ ಅವರು ಎನ್‌ಯುಎಸ್‌ಆರ್‌ಎಲ್‌ನಲ್ಲಿ ಉಪಕುಲಪತಿಯಾಗಿ ತಮ್ಮ ಹೊಸ ಪಾತ್ರಕ್ಕೆ ಇನ್ನೂ ಸಿದ್ಧವಾಗಿಲ್ಲ ಎಂದಿದ್ದಾರೆ. ಎನ್‌ಎಲ್‌ಎಸ್‌ಐಯುನಲ್ಲಿ ಪೂರ್ಣ ಸಮಯದ ಅಧ್ಯಾಪಕರಾಗಿ ಶೈಕ್ಷಣಿಕ ವರ್ಷಕ್ಕೆ ತಮ್ಮ ಜವಾಬ್ದಾರಿಗಳನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯಲ್ಲಿದ್ದಾರೆ.

ಈ ತಿಂಗಳ ಅಂತ್ಯದ ವೇಳೆಗೆ ಅವರು ಉಪ ಕುಲಪತಿಗಳಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಪ್ರಸ್ತುತ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಉಪ ಕುಲಪತಿ, ಪ್ರೊ. ಸುಧೀರ್ ಕೃಷ್ಣಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ರಾಂಚಿ ವಿಶ್ವವಿದ್ಯಾಲಯದಲ್ಲಿ 5 ವರ್ಷಗಳ ತಮ್ಮ ಅವಧಿ ಮುಗಿದ ಬಳಿಕ, ಬೆಂಗಳೂರಿಗೆ ವಾಪಸಾಗಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+