ಸರಳ ವ್ಯಕ್ತಿತ್ವದ ಅಬ್ದುಲ್ ಕಲಾಂ ಸಂಕ್ಷಿಪ್ತ ಪರಿಚಯ
ಬೆಂಗಳೂರು, ಜುಲೈ 28 : 'ಮಿಸೈಲ್ ಮ್ಯಾನ್' ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಇನ್ನು ನೆನಪು ಮಾತ್ರ. ರಾಷ್ಟ್ರಪತಿಯಾದರೂ ಜನಸಾಮಾನ್ಯರ ಜೊತೆ ಬೆರೆತು, ಮಕ್ಕಳೊಂದಿಗೆ ಮನಬಿಚ್ಚಿ ಮಾತನಾಡುತ್ತಿದ್ದ ಅಬ್ದುಲ್ ಕಲಾಂ ಅವರ ಸರಳ ಬದುಕು ಹಲವಾರು ಎಲ್ಲರಿಗೂ ಮಾದರಿ. [ಡಾ.ಕಲಾಂ ಸ್ಫೂರ್ತಿ ತುಂಬುವ ಹೇಳಿಕೆಗಳು]
ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಪೂರ್ಣ ಹೆಸರು ಅವುಲ್ ಪಕೀರ್ ಜೈನುಲಾಬ್ದಿನ್ ಅಬ್ದುಲ್ ಕಲಾಂ. ಕಲಾಂ 1931ರಲ್ಲಿ ತಮಿಳುನಾಡಿನ ರಾಮೇಶ್ವರದಲ್ಲಿ ಹುಟ್ಟಿದರು. ತಂದೆ ಮೀನುಗಾರಿಕಾ ಬೋಟ್ ಇಟ್ಟುಕೊಂಡಿದ್ದರು. ತಾಯಿ ಗೃಹಿಣಿ, ಮನೆಯಲ್ಲಿ ಬಡತನವಿತ್ತು. ['ಕ್ಷಿಪಣಿ ಮಾನವ' ಎಪಿಜೆ ಅಬ್ದುಲ್ ಕಲಾಂ ವಿಧಿವಶ']
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ಅಬ್ದುಲ್ ಕಲಾಂ ರಾಮೇಶ್ವರದಲ್ಲಿಯೇ ಪೂರ್ಣಗೊಳಿಸಿದರು. ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರೋನಾಟಿಕಲ್ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ ಕಲಾಂ ಅವರು ಇಸ್ರೋ ಮತ್ತು ಡಿಆರ್ಡಿಒದಲ್ಲಿ ಕಾರ್ಯನಿರ್ವಹಿಸಿದರು.

ಜು.1980ರಲ್ಲಿ ಭಾರತದ ಮೊದಲ ಉಪಗ್ರಹ ರೋಹಿಣಿಯನ್ನು ಕಕ್ಷೆ ಸೇರಿದಾದ ಅದರ ಹಿಂದೆ ಅಬ್ದುಲ್ ಕಲಾಂ ಅವರ ಶ್ರಮವಿತ್ತು. ಇಸ್ರೋದ ಪಿಎಸ್ಎಲ್ವಿ ಕಾರ್ಯಯೋಜನೆಯ ರೂವಾರಿ ಕಲಾಂ. ಡಿಆರ್ಡಿಒದಲ್ಲಿ ಸ್ವದೇಶೀ ತಂತ್ರಜ್ಞಾನದ ಕ್ಷಿಪಣಿ ತಯಾರಿಸುವ ತಂಡದ ಮುಖ್ಯಸ್ಥರಾಗಿದ್ದರು. [ಕಲಾಂ ಆಶಯದಂತೆ ಸರ್ಕಾರಿ ರಜೆ ಇಲ್ಲ]
ಅಬ್ದುಲ್ ಕಲಾಂ 1992ರಿಂದ 1999ರ ವರೆಗೆ ರಕ್ಷಣಾ ಸಚಿವರ ಸಲಹೆಗಾರರಾಗಿದ್ದರು. ಅಣುಶಕ್ತಿ ಆಯೋಗದ ಸಹಭಾಗಿತ್ವದಲ್ಲಿ ಪೋಖ್ರಾನ್ ಪರಮಾಣು ಪರೀಕ್ಷೆಯ ನೇತೃತ್ವ ವಹಿಸಿದ್ದರು. ಹಗುರ ಯುದ್ಧ ವಿಮಾನಗಳ ನಿರ್ಮಾಣ ಯೋಜನೆಗೂ ಕಲಾಂ ಅವರ ಕೊಡುಗೆ ಅಪಾರವಾಗಿದೆ.
ವಿಷನ್ 2020 : 2020ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿರ ರಾಷ್ಟ್ರವಾಗಿ ಮಾಡಬೇಕು ಎಂಬುದು ಕಲಾಂ ಅವರ ಕನಸಾಗಿತ್ತು. 500 ತಜ್ಞರ ಸಮಿತಿಯ ಮುಖ್ಯಸ್ಥರಾಗಿ ಅವರು ರೂಪಿಸಿದ ವಿಷನ್ 2020 ಯೋಜನೆ ಅನೇಕ ಕಾರ್ಯಕ್ರಮಗಳನ್ನು ಒಳಗೊಂಡಿದೆ.
ಅಬ್ದುಲ್ ಕಲಾಂ ಭಾರತದ 11ನೇ ರಾಷ್ಟ್ರಪತಿಯಾಗಿ ಜುಲೈ 22, 2002ರಂದು ಆಯ್ಕೆಯಾದರು. ಲೇಖಕರಾಗಿದ್ದ ಕಲಾಂ ಅವರು 'ವಿಂಗ್ಸ್ ಆಫ್ ಫೈರ್' ಸೇರಿದಂತೆ ಹಲವಾರು ಕೃತಿಗಳನ್ನು ಬರೆದಿದ್ದಾರೆ. ಜೀವನದ ಬಗ್ಗೆ ಅಬ್ದುಲ್ ಕಲಾಂ ಅವರು ಹೇಳಿದ ಮಾತುಗಳು ಇಂದಿಗೂ ಎಲ್ಲರಿಗೂ ಸ್ಫೂರ್ತಿ ತುಂಬುತ್ತಿವೆ.
ಕಲಾಂ ಅವರು ದೇಶಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ 1981ರಲ್ಲಿ ಪದ್ಮಭೂಷಣ, 1990ರಲ್ಲಿ ಪದ್ಮ ವಿಭೂಷಣ, 1997ರಲ್ಲಿ ದೇಶದ ಅತ್ಯುನ್ನುತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಗಿದೆ. ಸುಮಾರು ಮೂವತ್ತು ವಿಶ್ವವಿದ್ಯಾಲಯಗಳು ಕಲಾಂ ಅವರಿಗೆ ಗೌರವ ಡಾಕ್ಟರೇಟ್ ನೀಡಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications