ಇಪಿಎಫ್ ಮೇಲಿನ ತೆರಿಗೆ ಆದೇಶ ಹಿಂದಕ್ಕೆ: ಜೇಟ್ಲಿ
ನವದೆಹಲಿ, ಮಾ.08: ಇಪಿಎಫ್ ವಿಥ್ ಡ್ರಾ ಸಮಯದಲ್ಲಿ ತೆರಿಗೆ ಹಾಕಲಾಗುತ್ತದೆ ಎಂಬ ಆತಂಕಕ್ಕೆ ಈಗ ತೆರೆ ಎಳೆಯಲಾಗಿದೆ. ಬಜೆಟ್ ಸಮಯದಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಾಡಿದ್ದ ಪ್ರಸ್ತಾವನೆಯನ್ನು ಹಿಂದಕ್ಕೆ ಪಡೆಯಲಾಗಿದೆ. ಲೋಕಸಭೆಯಲ್ಲಿ ಮಂಗಳವಾರ ಅರುಣ್ ಜೇಟ್ಲಿ ಅವರು ಆದೇಶ ಹಿಂಪಡೆದಿರುವುದಾಗಿ ಘೋಷಿಸಿದರು.
ಇಪಿಎಫ್ ಮೊತ್ತ ಹಾಗೂ ನಿವೃತ್ತಿ ಸಮಯದ ಪಿಎಫ್ ವಿಥ್ ಡ್ರಾ ಎಲ್ಲವೂ ತೆರಿಗೆ ಮುಕ್ತವಾಗಿತ್ತು. ಆದರೆ, ಏಪ್ರಿಲ್ 01, 2016ರಿಂದ ಇಪಿಎಫ್ ನ ಅಸಲು ಧನ ತೆರಿಗೆ ಮುಕ್ತವಾಗಿರುತ್ತದೆ. [ಆನ್ ಲೈನ್ ನಲ್ಲೇ ಪಿಎಫ್ ಹಣ ವಿಥ್ ಡ್ರಾ ಮಾಡಿ]
ಇಪಿಎಫ್ ಗೆ ನೀಡುವ ಮೊತ್ತದ ಶೇ 60ರಷ್ಟು ಬಡ್ಡಿ ಮೇಲೆ ಮಾತ್ರ ತೆರಿಗೆ ವಿಧಿಸಲಾಗುತ್ತದೆ ಎಂದು ಸೋಮವಾರ (ಫೆಬ್ರವರಿ 29) ರಂದು ಕೇಂದ್ರ ಬಜೆಟ್ ಮಂಡನೆ ಸಂದರ್ಭದಲ್ಲಿ ಸಚಿವ ಜೇಟ್ಲಿ ಅವರು ಹೇಳಿದ್ದರು.

ಇದು ಅನೇಕ ರೀತಿ ಗೊಂದಲಕ್ಕೆ ಕಾರಣವಾಯಿತು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ ಒ) ಯ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೂ ಮುಂದಾಗಿದ್ದರು. ಭಾರಿ ವಿರೋಧದ ಹಿನ್ನೆಲೆಯಲ್ಲಿ ಈ ವಿವಾದಿತ ಪ್ರಸ್ತಾವನೆಯನ್ನು ಸರ್ಕಾರ ಹಿಂಪಡೆದುಕೊಂಡಿದೆ.
ಇಪಿಎಫ್ ಒ ನಲ್ಲಿ 8.5 ಕೋಟಿಗೂ ಅಧಿಕ ಸದಸ್ಯರ 10 ಲಕ್ಷ ಕೋಟಿ ರು ಗೂ ಅಧಿಕ ಮೊತ್ತವಿದೆ. ಎನ್ ಪಿಎಸ್ ನಲ್ಲಿ 1.15 ಕೋಟಿ ಗೂ ಅಧಿಕ ಸದಸ್ಯರ 1.1 ಲಕ್ಷ ಕೋಟಿ ರು ಮೊತ್ತವಿದೆ.[ಚಿಂತೆ ಬಿಡಿ, ಪಿಪಿಎಫ್ ಮೇಲೆ ಯಾವುದೇ ತೆರಿಗೆ ಹಾಕುತ್ತಿಲ್ಲ]
ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. (ಒನ್ಇಂಡಿಯಾ ಸುದ್ದಿ)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications