ಕೇದಾರನಾಥದಲ್ಲಿ ಪ್ರಪೋಸ್ ಮಾಡಿದ್ದ ಯೂಟ್ಯೂಬರ್ಗಳ ವಿರುದ್ಧ ಪೊಲೀಸರಿಗೆ ಪತ್ರ ಬರೆದ ಅರ್ಚಕರು
ಡೆಹರಾಡೂನ್ , ಜುಲೈ. 05: ಉತ್ತರಾಖಂಡ್ನ ಪ್ರಸಿದ್ಧ ಕೇದಾರನಾಥ ದೇವಸ್ಥಾನದ ಬಳಿ ಯುವತಿಯೊಬ್ಬರು ತನ್ನ ಪ್ರಿಯಕರನಿಗೆ ಪ್ರಪೋಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ಪರ ವಿರೋಧ ಚರ್ಚೆಗಳು ಆರಂಭವಾದ ನಂತರ, ಘಟನೆ ಕುರಿತು ದೇವಸ್ಥಾನ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.
ಕೇದಾರನಾಥ ದೇವಸ್ಥಾನದ ಅರ್ಚಕರು ಇಂತಹ ವೀಡಿಯೊಗಳನ್ನು ಮಾಡುವ ಜನರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ವಿಡೊಯೋಗಳು, ಘಟನೆಗಳು ಸ್ಥಳದ ಧಾರ್ಮಿಕ ಪಾವಿತ್ರ್ಯತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಎಂದು ಆರೋಪಿದ್ದು, ಇಂತಹ ವಿಡಿಯೋ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೇವಸ್ಥಾನ ಸಮಿತಿ ಪೊಲೀಸರಿಗೆ ಸೂಚಿಸಿದೆ.

ವೈರಲ್ ವಿಡಿಯೋದಲ್ಲಿ, ಯೂಟ್ಯೂಬರ್ ಆಗಿರುವ ಯುವತಿ ಕೇದಾರನಾಥ ದೇವಸ್ಥಾನದ ಬಳಿ ತನ್ನ ಗೆಳೆಯನೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಬಳಿಕ ಆಕೆ ಮೊಣಕಾಲಿನ ಮೇಲೆ ಕುಳಿತು ಸಿನಿಮೀಯ ಮಾದರಿಯಲ್ಲಿ ತನ್ನ ಗೆಳೆಯನಿಗೆ ಉಂಗುರದೊಂದಿಗೆ ಪ್ರಪೋಸ್ ಮಾಡುತ್ತಾರೆ. ಸಮೀಪದಲ್ಲಿ ನಡೆಯುತ್ತಿದ್ದ ಜನರು ಆಕೆಯ ಪ್ರಪೋಸಲ್ ನೋಡಿ ಆಶ್ಚರ್ಯಪಟ್ಟಿದ್ದಾರೆ ಮತ್ತು ಕೆಲವರು ಅದನ್ನು ತಮ್ಮ ಫೋನ್ಗಳಲ್ಲಿ ರೆಕಾರ್ಡ್ ಮಾಡಿದ್ದಾರೆ.
One of the Reasons why Smartphones should be Banned from All Leading Temples & Shrines
— Ravisutanjani (@Ravisutanjani) July 1, 2023
Just a Basic Phone within 20 KMs from the Main Temple, Eliminates Unnecessary Crowd
PS - I’m writing this from Kedarnath 🛕
pic.twitter.com/FQVxMAUEFm
ಈ ವಿಡಿಯೋಗೆ ಪ್ರತಿಕ್ರಿಯೆಯಾಗಿ ಬದರಿ-ಕೇದಾರನಾಥ ದೇವಾಲಯ ಸಮಿತಿಯು ಪೊಲೀಸರಿಗೆ ಪತ್ರ ಬರೆದಿದ್ದು, ಇಂತಹ ವಿಡಿಯೋಗಳನ್ನು ರಚಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿದೆ. ಯೂಟ್ಯೂಬ್ಗಳು ಮತ್ತು ಇನ್ಸ್ಟಾಗ್ರಾಮ್ನಲ್ಲಿ ಹೆಸರು ಗಳಿಸಿದವರು ಕೇದಾರನಾಥ ದೇವಾಲಯದ ಬಳಿ ವಿಡಿಯೋಗಳನ್ನು ಮಾಡುತ್ತಿದ್ದಾರೆ. ಇದರಿಂದ ಭಾರತ ಮತ್ತು ವಿದೇಶಗಳಲ್ಲಿನ ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಇಂತಹ ವಿಡಿಯೋಗಳು ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರ ನಂಬಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಚಂದ್ರ ತಿವಾರಿ ಅವರು ಧಾರ್ಮಿಕ ಭಾವನೆಗಳಿಗೆ ವಿರುದ್ಧವಾದ ಯೂಟ್ಯೂಬ್ ಶಾರ್ಟ್ಸ್ ಮತ್ತು ರೀಲ್ಗಳನ್ನು ರಚಿಸುವ ವ್ಯಕ್ತಿಗಳ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಮದುವೆ ಪ್ರಸ್ತಾಪಕ್ಕೆ ದೇವಸ್ಥಾನವೇ ಸರಿಯಾದ ಸ್ಥಳವೇ ಎಂಬ ಬಗ್ಗೆ ಟ್ವಿಟ್ಟರ್ನಲ್ಲಿ ಈ ವಿಡಿಯೋ ಚರ್ಚೆಯನ್ನು ಹುಟ್ಟುಹಾಕಿದೆ. ಕೆಲವರು ಇದರಲ್ಲಿ ಏನ್ನೂ ತಪ್ಪಿಲ್ಲ ಎಂದಿದ್ದಾರೆ. ಆದರೆ, ಬಹಳಷ್ಟು ಮಂದಿ ಇದು ದೇವಾಲಯಕ್ಕೆ ಮಾಡಿದ ಅಗೌರವ. ಇಂತಹ ಕ್ರಮಗಳಿಂದ ಕೇದಾರನಾಥ ದೇಗುಲದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ ಎಂದು ಟೀಕಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post











Click it and Unblock the Notifications