ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಪ್ರತಿಭಟನೆ: ಛಾಪ್ರಾದಲ್ಲಿ ರೈಲಿಗೆ ಬೆಂಕಿ

ಪಾಟ್ನಾ, ಜೂನ್ 16: ಅಗ್ನಿಪಥ್ ಯೋಜನೆ ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರ, ರಾಜಸ್ಥಾನದಲ್ಲಿ ಈ ಯೋಜನೆಯ ವಿರುದ್ಧ ಜನರು ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ಜೊತೆಗೆ ಉದ್ಯೋಗ ಭದ್ರತೆ ಮತ್ತು ಪಿಂಚಣಿಗೆ ಒತ್ತಾಯಿಸುತ್ತಿದ್ದಾರೆ. ಛಾಪ್ರಾದಲ್ಲಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಅದರ ವಿಡಿಯೊ ಕೂಡ ಹೊರಬಿದ್ದಿದ್ದು ಇದರಲ್ಲಿ ರೈಲು ಹೊಗೆ ಬೆಂಕಿಯೊಂದಿಗೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಅರ್ರಾದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ.

ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ, ಸೇನೆಯಲ್ಲಿ ನೇಮಕಾತಿ ಬಯಸುವ ಜನರು ನಾಲ್ಕು ವರ್ಷಗಳ ಗುತ್ತಿಗೆ ನೇಮಕಾತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ನಾಲ್ಕು ವರ್ಷಗಳ ನಂತರ ನಮ್ಮ ಭವಿಷ್ಯ ಏನಾಗಬಹುದು. ಕೇವಲ 25 ಪ್ರತಿಶತ ಜನರಿಗೆ ಮಾತ್ರ ಸೇವೆ ವಿಸ್ತರಣೆ ನೀಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ಅಗ್ನಿಪಥ ಯೋಜನೆಯಡಿ ನೇಮಕಗೊಳ್ಳುವ ಜನರಲ್ಲಿ ಶೇಕಡಾ 75 ರಷ್ಟು ಜನರಿಗೆ ಸೇವಾ ವಿಸ್ತರಣೆಯನ್ನು ನೀಡಲಾಗುವುದಿಲ್ಲ ಅಥವಾ ಯಾವುದೇ ರೀತಿಯ ಪಿಂಚಣಿ ಪ್ರಯೋಜನವನ್ನು ಪಡೆಯುವುದಿಲ್ಲ. ಎರಡು ವರ್ಷಗಳ ನಂತರ ಸೇನೆಗೆ ನೇಮಕಾತಿ ಆರಂಭವಾಗಿದ್ದು, ನಂತರವೂ ಭವಿಷ್ಯದ ಬಗ್ಗೆ ಖಚಿತತೆ ಇಲ್ಲ ಎನ್ನುತ್ತಾರೆ ಪ್ರತಿಭಟನಾಕಾರರು. 4 ವರ್ಷಗಳ ನಂತರ ಸೇವೆ ವಿಸ್ತರಣೆಯಾಗದಿದ್ದರೆ ನಾವು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಈ ಯೋಜನೆಗೆ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಶತಾಬ್ದಿ ಎಕ್ಸ್‌ಪ್ರೆಸ್ ರೈಲು ತಡೆ

ಬಿಹಾರದ ಅರಾ ರೈಲ್ವೇ ನಿಲ್ದಾಣದಲ್ಲಿ ಆರ್ಮಿ ನೇಮಕಾತಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಮಾಡಿದರು. ಈ ಜನರ ಈ ಪ್ರತಿಭಟನೆ ಸತತ ಎರಡನೇ ದಿನವೂ ಮುಂದುವರಿದಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಬಕ್ಸರ್ ಜಿಲ್ಲೆಯಲ್ಲಿ 100 ಕ್ಕೂ ಹೆಚ್ಚು ಯುವಕರು ರೈಲು ನಿಲ್ದಾಣದಲ್ಲಿ ಪ್ರದರ್ಶನ ನೀಡಿದರು. ಈ ಜನರು ರೈಲ್ವೆ ಹಳಿಯಲ್ಲಿಯೇ ಧರಣಿ ನಡೆಸಿದರು. ಪಾಟ್ನಾದಿಂದ ಹೋಗುತ್ತಿದ್ದ ಜನ ಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ನಿಲ್ಲಿಸಿದರು, ಇದರಿಂದಾಗಿ ರೈಲು 30 ನಿಮಿಷಗಳ ಕಾಲ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರಕಾರದ ಯೋಜನೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಹಾರದ ನವಾಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿದರು.

'ನಾಲ್ಕು ವರ್ಷದ ನಂತರ ನಾವು ನಿರಾಶ್ರಿತರಾಗುತ್ತೇವೆ'

ಸೇನೆಯಲ್ಲಿ ನೇಮಕಾತಿಗಾಗಿ ನಾವು ಶ್ರಮಿಸುತ್ತೇವೆ. ನಾಲ್ಕು ತಿಂಗಳ ತರಬೇತಿಯ ನಂತರ ನಾಲ್ಕು ವರ್ಷಗಳ ಕೆಲಸ ಏನಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು. ಅಷ್ಟಕ್ಕೂ, ಮೂರು ವರ್ಷಗಳ ತರಬೇತಿಯ ನಂತರ ನಾವು ದೇಶವನ್ನು ಹೇಗೆ ರಕ್ಷಿಸುತ್ತೇವೆ? ಸರಕಾರ ಈ ಯೋಜನೆಯನ್ನು ಹಿಂಪಡೆಯಬೇಕು. ನಾಲ್ಕು ವರ್ಷಗಳ ನಂತರ ನಾವು ಎಲ್ಲಿಗೆ ಹೋಗುತ್ತೇವೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ಕೇಳಿದ್ದಾರೆ. ನಾಲ್ಕು ವರ್ಷಗಳ ದುಡಿಮೆಯ ನಂತರ ನಾವು ನಿರಾಶ್ರಿತರಾಗುತ್ತೇವೆ. ಅದಕ್ಕಾಗಿಯೇ ನಾವು ರಸ್ತೆ ತಡೆ ಮಾಡಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಯುವಕರು ಜಾಗೃತರಾಗಿದ್ದಾರೆ ಎಂಬುದು ದೇಶದ ನಾಯಕರಿಗೆ ಈಗ ತಿಳಿಯುತ್ತದೆ.

ಪಾಟ್ಲಿಪುತ್ರ ಎಕ್ಸ್‌ಪ್ರೆಸ್‌ನ ಮೇಲೆ ಕಲ್ಲು ತೂರಾಟ

ಸ್ಥಳೀಯ ಮಾಧ್ಯಮಗಳ ಪ್ರಕಾರ, ಪ್ರತಿಭಟನಾನಿರತ ವಿದ್ಯಾರ್ಥಿಗಳು ಪಾಟ್ಲಿಪುತ್ರ ಎಕ್ಸ್‌ಪ್ರೆಸ್‌ನ ಮೇಲೆ ಕಲ್ಲು ತೂರಾಟ ನಡೆಸಿದರು. ಆದರೆ ಇದನ್ನು ರೈಲ್ವೆ ಅಧಿಕಾರಿಗಳು ನಿರಾಕರಿಸಿದರು. ಮುಜಾಫರ್‌ನಗರ ನಗರದ ಕುರಿತು ಮಾತನಾಡುತ್ತಾ, ಇಲ್ಲಿ ಹೆಚ್ಚಿನ ಸಂಖ್ಯೆಯ ಸೇನಾ ನೇಮಕಾತಿ ಅಭ್ಯರ್ಥಿಗಳು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು, ಟೈರ್‌ಗಳನ್ನು ಸುಟ್ಟುಹಾಕಿದ್ದಾರೆ. ಇಷ್ಟು ಮಾತ್ರವಲ್ಲದೆ ರಾಜಸ್ಥಾನದ ಜೈಪುರದಲ್ಲಿ ಅಜ್ಮೀರ್ ದೆಹಲಿ ಹೆದ್ದಾರಿಯನ್ನು ವಿದ್ಯಾರ್ಥಿಗಳು ತಡೆದಿದ್ದಾರೆ. ಬುಧವಾರ ಯುವ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ನಡುರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು. ಸುಮಾರು 150 ಪ್ರತಿಭಟನಾಕಾರರು ಹೆದ್ದಾರಿ ತಡೆದು ಸೇನೆಯಲ್ಲಿನ ಹಳೆಯ ನೇಮಕಾತಿ ಪ್ರಕ್ರಿಯೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದರು ಎಂದು ಕರ್ಧಾನಿ ಠಾಣೆಯ ಎಸ್‌ಎಚ್‌ಒ ಬನ್ವಾರಿ ಮೀನಾ ತಿಳಿಸಿದ್ದಾರೆ. ಪ್ರತಿಭಟನಾಕಾರರಿಂದ ರಸ್ತೆಯನ್ನು ತೆರವುಗೊಳಿ 10 ಜನರನ್ನು ಬಂಧಿಸಲಾಗಿದೆ.

ಇದರ ವಿರುದ್ಧ ಅಭ್ಯರ್ಥಿಗಳು ಪ್ರತಿಭಟಿಸುತ್ತಿರುವುದೇಕೆ?

ಇದರ ವಿರುದ್ಧ ಅಭ್ಯರ್ಥಿಗಳು ಪ್ರತಿಭಟಿಸುತ್ತಿರುವುದೇಕೆ?

ಅಗ್ನಿಪಥ್ ಅಥವಾ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ಜೂನ್ 14ಕ್ಕೆ ಚಾಲನೆ ನೀಡಿದರು. ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಯೋಜನೆಯಾಗಿದ್ದು, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗೆ 46,000 ಸೈನಿಕರನ್ನು ಸೇರಿಸಿಕೊಳ್ಳುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಸರಳವಾಗಿ ಹೇಳಬೇಕೆಂದರೆ, ಅಗ್ನಿಪಥ್ ಅಥವಾ ಅಗ್ನಿಪತ್ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಭಾರತೀಯ ಯುವಕರಿಗೆ ನೇಮಕಾತಿ ಯೋಜನೆಯಾಗಿದೆ. ಪ್ರವೇಶವನ್ನು ಆರಂಭದಲ್ಲಿ 4 ವರ್ಷಗಳ ಅವಧಿಗೆ ನಿಗದಿಪಡಿಸಲಾಗುತ್ತದೆ. ಈ 4 ವರ್ಷಗಳಲ್ಲಿ, ನೇಮಕಗೊಂಡವರಿಗೆ ಅಗತ್ಯವಿರುವ ಕೌಶಲ್ಯಗಳಲ್ಲಿ ಸಶಸ್ತ್ರ ಪಡೆಗಳಿಂದ ತರಬೇತಿ ನೀಡಲಾಗುತ್ತದೆ. ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಪ್ರತಿ ವರ್ಷ ಒಟ್ಟು 46 ಸಾವಿರ ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಇವರಲ್ಲಿ ಶೇಕಡಾ 25ರಷ್ಟು ಖಾಯಂ ಆಯೋಗಕ್ಕಾಗಿ 15 ವರ್ಷಗಳ ಹೆಚ್ಚುವರಿ ಅವಧಿಗೆ ಉಳಿಸಿಕೊಳ್ಳಲಾಗುವುದು. ಉಳಿದವರಿಗೆ ನಿವೃತ್ತಿಗೆ ಅವಕಾಶ ನೀಡಿ ಅವರಿಗೆ ಸೇವಾ ನಿಧಿಯನ್ನು ನೀಡಲಾಗುತ್ತದೆ - ಅದರ ಮೊತ್ತ 11.71 ಲಕ್ಷ ರೂಪಾಯಿಗಳಾಗಿರುತ್ತವೆ. ಈ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ.

Recommended Video

      Pakistan ಜನ Tea ಕುಡಿಯೋದನ್ನು ನಿಲ್ಲಿಸಬೇಕಂತೆ!! | OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+