ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ತಸ್ಲಿಮಾ ನಸ್ರೀನ್ ವಿರುದ್ಧ ಪ್ರತಿಭಟನೆ
ಬಾಂಗ್ಲಾದೇಶ ಲೇಖಕಿ ವಿರುದ್ಧ ಮುಸ್ಲಿಂ ಸಂಪ್ರದಾಯವಾದಿಗಳ ಕಿಡಿ; ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಂತೆ ಆಗ್ರಹ
ಜೈಪುರ, ಜನವರಿ 24: ಬಾಂಗ್ಲಾದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಅವರನ್ನು ಜೈಪುರ ಲಿಟರೇಚರ್ ಫೆಸ್ಟಿವಲ್ ಆಹ್ವಾನಿಸಿದ್ದರ ವಿರುದ್ಧ ಸಿಡಿದೆದ್ದಿರುವ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಈ ಹಿನ್ನೆಲೆಯಲ್ಲಿ ತಸ್ಲಿಮಾ ನಸ್ರೀನ್ ಅವರನ್ನು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಮುಂದೆಂದೂ ಆಹ್ವಾನ ನೀಡದಿರಲು ನಿರ್ಧರಿಸಿರುವುದಾಗಿ ಸಮ್ಮೇಳನದ ಆಯೋಜಕ ಸಂಜಯ್ ರಾಯ್ ಅವರು ಭರವಸೆ ನೀಡಿದ ನಂತರ ನಸ್ರೀನ್ ಅವರ ವಿರುದ್ಧದ ಪ್ರತಿಭಟನೆ ನಿಂತಿದೆ.

ಸಮ್ಮೇಳನದ ಅಂಗವಾಗಿ, ಸೋಮವಾರ ರಾತ್ರಿ ನಸ್ರೀನ್ ಅವರ ಇತ್ತೀಚಿನ ಕೃತಿಯಾದ 'ಎಕ್ಸೈಲ್' ಕುರಿತಂತೆ ಸಂವಾದ ಏರ್ಪಡಿಸಲಾಗಿತ್ತು. ಆ ಕೃತಿಯಲ್ಲಿ ಅವರು,ಕೆಲ ವರ್ಷಗಳ ಹಿಂದೆ ಬಾಂಗ್ಲಾದೇಶದಿಂದ ಓಡಿಬಂದು ಭಾರತದಲ್ಲಿ ರಕ್ಷಣೆ ಪಡೆದಿದ್ದ ತಮ್ಮ ದಿನಗಳನ್ನು ಮೆಲುಕು ಹಾಕಿದ್ದಾರೆ.
ಆದರೆ, ಸಂವಾದ ಶುರುವಾದ ಸುಮಾರು ನಿಮಿಷಗಳಲ್ಲೇ ಸ್ಥಳಕ್ಕಾಗಮಿಸಿದ 25ರಿಂದ 30 ಮುಸ್ಲಿಮರುಳ್ಳ ಗುಂಪು, ತಸ್ಲಿಮಾ ಅವರು ಇಸ್ಲಾಂ ಧರ್ಮ ವಿರೋಧಿಯಾಗಿದ್ದು, ಅವರನ್ನು ಜೈಪುರ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಿದ್ದು ತಪ್ಪೆಂದು ಸಮಾರಂಭ ನಡೆಯುತ್ತಿದ್ದ ಡಿಗ್ಗಿ ಅರಮನೆ ಮುಂದೆ ಧರಣಿ ಕುಳಿತರು.
ಅಂದಹಾಗೆ, ಸಾಹಿತ್ಯ ಸಮ್ಮೇಳನದಲ್ಲಿ ತಸ್ಲಿಮಾ ನಸ್ರೀನ್ ಅವರು ಭಾಗವಹಿಸುತ್ತಿರುವುದನ್ನು ಆಯೋಜಕರು ಗೌಪ್ಯವಾಗಿರಿಸಿದ್ದರೆಂದು ಹೇಳಲಾಗಿದೆ. ಹಾಗಾಗಿ, ಸಂವಾದ ಕಾರ್ಯಕ್ರಮ ಆರಂಭವಾದ ನಂತರ ಗಲಾಟೆ ಆರಂಭವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications