ಕೆರೆ ಒತ್ತುವರಿ ತೆರವಿಗೆ ಆಗ್ರಹಿಸಿ ಜೆಡಿಎಸ್, ಜಯ ಕರ್ನಾಟಕ ಧರಣಿ
24.15 ಎಕರೆ ಕೆರೆಯಲ್ಲಿ 6.15 ಎಕರೆಯಷ್ಟು ವಿಸ್ತೀರ್ಣ ಒತ್ತುವರಿ ಆರೋಪ, ಒತ್ತುವರಿ ತೆರವಿಗೆ ಧರಣಿ ನಿರತರ ಆಗ್ರಹ
ಬಾಗಲಕೋಟೆ, ಫೆಬ್ರವರಿ 9: ಜಾನುವಾರುಗಳ ನೀರಡಿಕೆಗೆ ಪ್ರಮುಖ ಆಶ್ರಯ ತಾಣವಾಗಿದ್ದ ಕೂಡಗಿಯಲ್ಲಿನ ಕೆರೆಯ ಒತ್ತುವರಿ ವಿರೋಧಿಸಿ, ತಾಲೂಕು ಜೆಡಿಎಸ್ ರೈತ ಮೋರ್ಚಾ, ಜಯ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇನ್ನಿತರ ಸಂಘ-ಸಂಸ್ಥೆಗಳು ಗುರುವಾರ ಧರಣಿ ನಡೆಸಿದವು.
ಅಲಮಟ್ಟಿಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ವಿದ್ಯುತ್ ಸ್ಥಾವರಕ್ಕಾಗಿ ನೀರಿನ ಅಗತ್ಯತೆಯಿರುವುದರಿಂದ 24.15 ಎಕರೆ ವಿಸ್ತೀರ್ಣದ ಕೆರೆಯಲ್ಲಿ 6.15 ಎಕರೆಯಷ್ಟು ಕೆರೆಯನ್ನು ಆಕ್ರಮಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಈ ಕೂಡಲೇ ಸ್ಥಾವರದ ಅಧಿಕಾರಿಗಳು ಕೆರೆ ಒತ್ತುವರಿಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಜೆಡಿಎಸ್ ರೈತ ಮೋರ್ಚಾ ಸಂಘದ ಅಧ್ಯಕ್ಷ ಬಾಬು ಬೆಲ್ಲದ ಮಾತನಾಡಿ, ''ಜಾನುವಾರುಗಳಿಗೆ ಅತ್ಯಗತ್ಯವಾಗಿ ಬೇಕಾಗಿರುವ ಕೆರೆಯ ಭಾಗವನ್ನೇ ಒತ್ತುವರಿ ಮಾಡಿಕೊಂಡಿರುವ ಹಸು, ಮೇಕೆ ಮುಂತಾದ ಸಾಕು ಪ್ರಾಣಿಗಳಿಗೆ ಹಾಗೂ ಜನರಿಗೂ ನೀರಿನ ತೊಂದರೆಯುಂಟಾಗಿದೆ'' ಎಂದು ತಿಳಿಸಿದರು.
ಆನಂತರ ಮಾತನಾಡಿದ, ಜಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಆಶೀಫ ತಾಳೀಕೋಟೆ, ''ಕೆರೆ ಒತ್ತುವರಿಗೆ ಒಂದು ಪ್ರಕರಣವಾದರೆ, ಗ್ರಾಮ ಪಂಚಾಯ್ತಿಯಲ್ಲೂ ಸಾಕಷ್ಟು ಅಕ್ರಮಗಳು ನಡೆದು ಜನರಿಗೆ ಅನ್ಯಾಯವೆಸಗಲಾಗಿದೆ. ಬಡವರಿಗಾಗಿ ಮನೆ ನಿರ್ಮಾಣ ಮಾಡಲು ಸರ್ಕಾರ ರೂಪಿಸಿರುವ ವಸತಿ ಯೋಜನೆ ವಿಚಾರದಲ್ಲಿ ಬಡವರಿಂದಲೇ ಹಣ ಕಿತ್ತುಕೊಂಡು ಅವರಿಗೇ ಅನುದಾನದ ರೂಪದಲ್ಲಿ ಅದನ್ನು ಮರಳಿಕೊಡಲಾಗುತ್ತಿದೆ. ಉಚಿತ ಯೋಜನೆಗಳಲ್ಲಿ ಬಡವರಿಂದ ಹಣ ವಸೂಲಿಯಾಗುತ್ತಿರುವುದು ಅಪರಾಧ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ'' ಎಂದು ಅವರು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications