ಮೋದಿ ಮನ್‌ಕಿ ಬಾತ್ ಪ್ರಸಾರ ವೇಳೆ ರೈತರಿಂದ 'ತಾಲಿ ಬಜಾವೊ' ಪ್ರತಿಭಟನೆ

ನವದೆಹಲಿ, ಡಿಸೆಂಬರ್ 27: ಪ್ರಧಾನಿ ನರೇಂದ್ರ ಮೋದಿಯವರ ಮನ್‌ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ಸಮಯದಲ್ಲಿ ತೈತರು 'ತಾಲಿ ಬಜಾವೊ' ಪ್ರತಿಭಟನೆ ನಡೆಸಿದ್ದಾರೆ.

ರೈತರು ಪಾತ್ರೆಗಳನ್ನು ಬಡಿದು ತಾಲಿ ಬಜಾವೊ(ಚಪ್ಪಾಳೆ ತಟ್ಟಿ) ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ಮತ್ತು ಹರ್ಯಾಣ ಭಾಗದ ಹಲವು ರೈತರು ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಬೀಡುಬಿಟ್ಟಿದ್ದು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಸರ್ಕಾರದ ಪ್ರತಿನಿಧಿಗಳು ಮತ್ತು ರೈತ ಗುಂಪುಗಳೊಂದಿಗೆ ನಡೆದ ಮಾತುಕತೆ ಇದುವರೆಗೆ ಫಲಪ್ರದವಾಗಿಲ್ಲ.

ತಾಲಿ ಬಜಾವೊ ಪರಿಕಲ್ಪನೆಯನ್ನು ಮೊದಲು ಆರಂಭಿಸಿದ್ದೇ ಪ್ರಧಾನ ಮಂತ್ರಿ ಮೋದಿಯವರು. ಕೊರೊನಾ ವಾರಿಯರ್ಸ್ ಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದ ನಾಗರಿಕರೆಲ್ಲರೂ ಒಟ್ಟು ಸೇರಿ ಚಪ್ಪಾಳೆ ತಟ್ಟಿ ಎಂದು ಲಾಕ್ ಡೌನ್ ನ ಮೊದಲ ಹಂತದಲ್ಲಿ ಕರೆ ಕೊಟ್ಟಿದ್ದರು.

Protesting Farmers Clang Thalis As PM Addresses Mann Ki Baat

ತಮ್ಮ ಬೇಡಿಕೆಗಳಿಗೆ ಪ್ರಧಾನಿ ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.ಕಳೆದ ಭಾನುವಾರ, ಸ್ವರಾಜ್ ಇಂಡಿಯಾ ನಾಯಕ ಯೋಗೇಂದ್ರ ಯಾದವ್ ಅವರು ಮನ್ ಕಿ ಬಾತ್ ಕಾರ್ಯಕ್ರಮದ ವೇಳೆ ತಾಲಿ ಬಜಾವೊ ಪ್ರತಿಭಟನೆ ನಡೆಸಲು ಕರೆಕೊಟ್ಟರು.

ಪ್ರಧಾನಿಯವರು ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ರೈತರು, ನಿಮ್ಮ ಮಾತುಗಳಿಂದ ನಮಗೆ ಬೇಸತ್ತು ಹೋಗಿದೆ,ನಮ್ಮ ಮನದ ಮಾತುಗಳನ್ನು ಯಾವಾಗ ಕೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಗಾಜಿಪುರ್ ಮತ್ತು ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಪ್ರಸಾರವಾಗುತ್ತಿದ್ದ ವೇಳೆ ಪಾತ್ರೆಗಳನ್ನು ಬಡಿದು ವಿರೋಧ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+