Get Updates
Get notified of breaking news, exclusive insights, and must-see stories!

ದೇಶದ ಹೆಮ್ಮೆಯ ಕ್ರಿಡಾಪಟುಗಳನ್ನು ಹೀನಾಯವಾಗಿ ರಸ್ತೆಯಲ್ಲಿ ಎಳೆದಾಡಿದ ಪೊಲೀಸರು!

ನವದೆಹಲಿ, ಮೇ. 28: ದೇಶಕ್ಕಾಗಿ ಕುಸ್ತಿ ಆಡುತ್ತಿದ್ದವರು ಇಂದು ತಮಗೆ ನ್ಯಾಯಬೇಕೆಂದು ಪ್ರತಿಭಟಿಸುತ್ತಿದ್ದು, ಈ ವೇಳೆ ನೂತನ ಸಂಸತ್ ಭವನದತ್ತ ಮೆರವಣಿಗೆ ಹೊರಟಿದ್ದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇದನ್ನು ಖಂಡಿಸಿರುವ ಅವರು "ಜಗತ್ತು ನಮ್ಮನ್ನು ನೋಡುತ್ತಿದೆ" ಎಂದು ಹೇಳಿದ್ದಾರೆ.

ಸಾಕ್ಷಿ ಮಲಿಕ್ ತನ್ನ ಸಹ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿರುವ ವಿಡಿಯೋವನ್ನು ಹಂಚಿಕೊಂಡಿದ್ದು, "ನಮ್ಮ ಚಾಂಪಿಯನ್‌ಗಳನ್ನು ಹೀಗೆ ನಡೆಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದ್ದಾರೆ. ಕುಸ್ತಿಪಟುಗಳು ಮತ್ತು ಪೊಲೀಸ್ ಅಧಿಕಾರಿಗಳು ಒಬ್ಬರನ್ನೊಬ್ಬರು ತಳ್ಳುತ್ತಿರುವ ದೃಶ್ಯಗಳು, ಕುಸ್ತಿಪಟುಗಳನ್ನು ಪೊಲೀಸರು ಎಳೆದಾಡುತ್ತಿರುವ ದೃಶ್ಯಗಳು ವಿಡಿಯೋಗಳಲ್ಲಿ ಕಂಡುಬಂದಿವೆ. ಪೊಲೀಸರು ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬಲವಾಗಿ ಎಳೆದು ಪೊಲೀಸ್ ವ್ಯಾನ್‌ಗಳಿಗೆ ತಳ್ಳಿದ್ದಾರೆ.

Wrestlers Maha Panchayat

ಬಜರಂಗ್ ಪೂನಿಯಾ ಅವರು ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬಂಧಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. "ನಾವು ಏನು ಅಪರಾಧ ಮಾಡಿದ್ದೇವೆ?. ಯಾವುದೇ ಸರ್ಕಾರವು ತಮ್ಮ ದೇಶದ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುತ್ತದೆಯೇ?" ಅವನು ಕಿಡಿಕಾರಿದ್ದಾರೆ. ಈ ಹಿಂದೆ ವಿನೇಶ್ ಫೋಗಟ್ ಟ್ವಿಟರ್‌ನಲ್ಲಿ ವೀಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. "ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ. ಒಂದೆಡೆ ಪ್ರಧಾನಿಯವರು ಪ್ರಜಾಪ್ರಭುತ್ವದ ಹೊಸ ಕಟ್ಟಡವನ್ನು ಉದ್ಘಾಟಿಸಿದರೆ ಮತ್ತೊಂದೆಡೆ ನಮ್ಮ ಜನರನ್ನು ಬಂಧಿಸಲಾಗುತ್ತಿದೆ" ಎಂದು ಹೇಳಿದ್ದಾರೆ.

"ಇಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ. ನಮ್ಮನ್ನು ಜೈಲಿಗೆ ಹಾಕಿದಂತಿದೆ. ನ್ಯಾಯಕ್ಕಾಗಿ ದೇಶದ ಹೆಣ್ಣು ಮಕ್ಕಳು ರಸ್ತೆಯಲ್ಲಿ ಕುಳಿತಿದ್ದಾರೆ. ಆದರೆ ನಮಗೆ ನ್ಯಾಯ ಒದಗಿಸುವ ಬದಲು ನಮ್ಮದೇ ತಪ್ಪು ಎಂಬಂತೆ ಬಿಂಬಿಸುತ್ತಿದ್ದಾರೆ. ದೇಶವು ಇದನ್ನು ನೆನಪಿಸಿಕೊಳ್ಳುತ್ತದೆ" ಎಂದು ವಿನೇಶ್ ಫೋಗಟ್ ತನ್ನ ವಿಡಿಯೋದಲ್ಲಿ ತಿಳಿಸಿದ್ದಾರೆ.

ಕುಸ್ತಿಪಟುಗಳನ್ನು ಬಂಧಿಸಿ ಬೇರೆ ಬೇರೆ ಅಜ್ಞಾತ ಸ್ಥಳಗಳಿಗೆ ಕೊಂಡೊಯ್ದ ತಕ್ಷಣ, ಪೊಲೀಸರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲು ಪ್ರಾರಂಭಿಸಿದ್ದಾರೆ. ಅಲ್ಲಿದ್ದ ಮಂಚಗಳು, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು ಮತ್ತು ಕುಸ್ತಿಪಟುಗಳ ಇತರ ವಸ್ತುಗಳ ಜೊತೆಗೆ ಟಾರ್ಪಾಲಿನ್ ಸೀಲಿಂಗ್ ಅನ್ನು ತೆಗೆದುಹಾಕಿದ್ದಾರೆ.

Wrestlers Maha Panchayat

ಯಾವುದೇ ಪ್ರತಿಭಟನಾಕಾರರಿಗೆ ಅನುಮತಿ ನೀಡದ ಕಾರಣ ಹೊಸ ಸಂಸತ್ ಭವನದತ್ತ ತೆರಳಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿಶೇಷ ಸಿಪಿ, ಕಾನೂನು ಮತ್ತು ಸುವ್ಯವಸ್ಥೆಯ ದೀಪೇಂದ್ರ ಪಾಠಕ್ ಪ್ರಕಾರ, ಕುಸ್ತಿಪಟುಗಳನ್ನು "ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಕ್ಕಾಗಿ" ಬಂಧಿಸಲಾಗಿದೆ ಎಂದಿದ್ದಾರೆ.

"ನಾವು ಸರಿಯಾದ ಸಮಯದಲ್ಲಿ ವಿಚಾರಣೆಯ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ. ನಾವು ಸಂಪೂರ್ಣ ಪರಿಸ್ಥಿತಿಯನ್ನು ನಿರ್ಣಯಿಸಬೇಕಾಗಿದೆ. ನೀವು ನೋಡಿದಂತೆ ಬ್ಯಾರಿಕೇಡ್‌ಗಳನ್ನು ಮುರಿದು ಮನವಿ ಮತ್ತು ಎಚ್ಚರಿಕೆಯ ಹೊರತಾಗಿಯೂ ಅವರು ಮುಂದೆ ನುಗ್ಗಿದ್ದಾರೆ. ಆದ್ದರಿಂದ ನಾವು ಅವರನ್ನು ಇಲ್ಲಿಂದ ಹೊರಹಾಕಿದ್ದೇವೆ" ಎಂದು ದೀಪೇಂದ್ರ ಪಾಠಕ್ ಹೇಳಿದ್ದಾರೆ.

ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ನೇತೃತ್ವದ ಆಂದೋಲನದ ಕುಸ್ತಿಪಟುಗಳು ಮಾಜಿ ವ್ರೆಸ್ಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಪ್ರಿಲ್ 23 ರಂದು ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ. ಅಪ್ರಾಪ್ತ ವಯಸ್ಕ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+