ಸಿಎಂಎಸ್-01 ಉಪಗ್ರಹ ಹೊತ್ತ ಪಿಎಸ್ಎಲ್ವಿ-ಸಿ50 ಯಶಸ್ವಿ ಉಡಾವಣೆ
ಬೆಂಗಳೂರು, ಡಿ.17: ಸಂವಹನ ಉಪಗ್ರಹ ಸಿಎಂಎಸ್-01 ಅನ್ನು ಒಳಗೊಂಡಿರುವ ಪೋಲಾರ್ ಉಪಗ್ರಹ ಉಡಾವಣಾ ವಾಹನ (ಪಿಎಸ್ಎಲ್ವಿ-ಸಿ50) ಡಿಸೆಂಬರ್ 17ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ ಎಂದು ಇಸ್ರೋ ಶುಕ್ರವಾರ ತಿಳಿಸಿದೆ.
'ಪಿಎಸ್ಎಲ್ವಿ-ಸಿ50ಯು ಪಿಎಸ್ಎಲ್ವಿ 52ನೇ ಯೋಜನೆಯಾಗಿದ್ದು, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ (ಎಸ್ಡಿಎಸ್ಸಿ) ಎರಡನೆಯ ಉಡಾವಣಾ ಘಟಕದಿಂದ ಸಿಎಂಎಸ್-01ಅನ್ನು ಉಡಾವಣೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ 2.41 ಗಂಟೆಗೆ 25 ಗಂಟೆಗಳ ಕೌಂಟ್ ಡೌನ್ ಆರಂಭಿಸಲಾಯಿತು. ಡಿಸೆಂಬರ್ 17ರ ಮಧ್ಯಾಹ್ನ 3.41ರ ಸುಮಾರಿಗೆ ಉಡಾವಣೆಯ ಸಮಯದಂತೆ ಉಡಾವಣೆ ಮಾಡಲಾಗಿದೆ' ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.
ಸಿಎಂಎಸ್-01 ಒಂದು ಸಂವಹನ ಉಪಗ್ರಹವಾಗಿದ್ದು, ತರಂಗಾಂತರ ಸ್ಪೆಕ್ಟ್ರಮ್ನ ವಿಸ್ತೃತ ಸಿ ಬ್ಯಾಂಡ್ನಲ್ಲಿ ಸೇವೆಗಳನ್ನು ಒದಗಿಸಲು ಸಹಾಯ ಮಾಡಲಿದೆ. ವಿಸ್ತೃತ ಸಿ-ಬ್ಯಾಂಡ್ ಭಾರತದ ಮುಖ್ಯಭೂಮಿ, ಅಂಡಮಾನ್ ನಿಕೋಬಾರ್ ಮತ್ತು ಲಕ್ಷದ್ವೀಪಗಳಲ್ಲಿ ಸಂವಹನಕ್ಕೆ ನೆರವಾಗುತ್ತದೆ.

ಸಿಎಂಎಸ್-01 ಭಾರತದ 42ನೇ ಸಂವಹನ ಉಪಗ್ರಹವಾಗಿದೆ. ಪಿಎಸ್ಎಲ್ವಿ-ಸಿ50ಯು ಪಿಎಸ್ಎಲ್ವಿಯ ಎಕ್ಸ್ಎಲ್ ಸಂರಚನೆಯ 22ನೇ ವಾಹನವಾಗಿದೆ. ಜತೆಗೆ ಶ್ರೀಹರಿಕೋಟಾದ ಸತೀಶ್ ಧವನ್ ಎಸ್ಎಚ್ಎಆರ್ನಿಂದ ಉಡಾವಣೆಯಾಗುತ್ತಿರುವ 77ನೇ ಉಡ್ಡಯನ ವಾಹನವಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications