ಸಿಎಂಎಸ್-01 ಉಪಗ್ರಹ ಹೊತ್ತ ಪಿಎಸ್ಎಲ್ವಿ-ಸಿ50 ಯಶಸ್ವಿ ಉಡಾವಣೆ
ಬೆಂಗಳೂರು, ಡಿ.17: ಸಂವಹನ ಉಪಗ್ರಹ ಸಿಎಂಎಸ್-01 ಅನ್ನು ಒಳಗೊಂಡಿರುವ ಪೋಲಾರ್ ಉಪಗ್ರಹ ಉಡಾವಣಾ ವಾಹನ (ಪಿಎಸ್ಎಲ್ವಿ-ಸಿ50) ಡಿಸೆಂಬರ್ 17ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ ಎಂದು ಇಸ್ರೋ ಶುಕ್ರವಾರ ತಿಳಿಸಿದೆ.
'ಪಿಎಸ್ಎಲ್ವಿ-ಸಿ50ಯು ಪಿಎಸ್ಎಲ್ವಿ 52ನೇ ಯೋಜನೆಯಾಗಿದ್ದು, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ (ಎಸ್ಡಿಎಸ್ಸಿ) ಎರಡನೆಯ ಉಡಾವಣಾ ಘಟಕದಿಂದ ಸಿಎಂಎಸ್-01ಅನ್ನು ಉಡಾವಣೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ 2.41 ಗಂಟೆಗೆ 25 ಗಂಟೆಗಳ ಕೌಂಟ್ ಡೌನ್ ಆರಂಭಿಸಲಾಯಿತು. ಡಿಸೆಂಬರ್ 17ರ ಮಧ್ಯಾಹ್ನ 3.41ರ ಸುಮಾರಿಗೆ ಉಡಾವಣೆಯ ಸಮಯದಂತೆ ಉಡಾವಣೆ ಮಾಡಲಾಗಿದೆ' ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.
ಸಿಎಂಎಸ್-01 ಒಂದು ಸಂವಹನ ಉಪಗ್ರಹವಾಗಿದ್ದು, ತರಂಗಾಂತರ ಸ್ಪೆಕ್ಟ್ರಮ್ನ ವಿಸ್ತೃತ ಸಿ ಬ್ಯಾಂಡ್ನಲ್ಲಿ ಸೇವೆಗಳನ್ನು ಒದಗಿಸಲು ಸಹಾಯ ಮಾಡಲಿದೆ. ವಿಸ್ತೃತ ಸಿ-ಬ್ಯಾಂಡ್ ಭಾರತದ ಮುಖ್ಯಭೂಮಿ, ಅಂಡಮಾನ್ ನಿಕೋಬಾರ್ ಮತ್ತು ಲಕ್ಷದ್ವೀಪಗಳಲ್ಲಿ ಸಂವಹನಕ್ಕೆ ನೆರವಾಗುತ್ತದೆ.

ಸಿಎಂಎಸ್-01 ಭಾರತದ 42ನೇ ಸಂವಹನ ಉಪಗ್ರಹವಾಗಿದೆ. ಪಿಎಸ್ಎಲ್ವಿ-ಸಿ50ಯು ಪಿಎಸ್ಎಲ್ವಿಯ ಎಕ್ಸ್ಎಲ್ ಸಂರಚನೆಯ 22ನೇ ವಾಹನವಾಗಿದೆ. ಜತೆಗೆ ಶ್ರೀಹರಿಕೋಟಾದ ಸತೀಶ್ ಧವನ್ ಎಸ್ಎಚ್ಎಆರ್ನಿಂದ ಉಡಾವಣೆಯಾಗುತ್ತಿರುವ 77ನೇ ಉಡ್ಡಯನ ವಾಹನವಾಗಲಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications