ಕುಣಿದು ದಣಿವ ಚೆಲುವೆ ಕಣ್ಣಲ್ಲೇ ಕೊಲ್ತಾಳಲ್ಲಪ್ಪೋ...
ಫೆಬ್ರವರಿ 14ರಿಂದ 18ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಷೋ ನಡೆಯಲಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಸುವ ಅವಕಾಶ ಇದೆ. ಅಂದಹಾಗೆ ಆ ಷೋದಲ್ಲಿ ಪ್ರದರ್ಶನ ನೀಡುವ ಸಲುವಾಗಿ ಭಾರತೀಯ ವಾಯು ಸೇನೆಯಿಂದ ತಾಲೀಮು ನಡೆಯುತ್ತಿದೆ.
ಇನ್ನು ಜಗತ್ತಿನ ಅತಿ ತೂಕದ ಹೆಂಗಸು, ಐನೂರು ಕೆಜಿ ತೂಕವಿರುವ ಎಮಾನ್ ಅಹ್ಮದ್ ತಮ್ಮ ತೂಕ ಇಳಿಸಿಕೊಳ್ಳುವ ಸಲುವಾಗಿ ಮುಂಬೈಗೆ ಚಿಕಿತ್ಸೆಗಾಗಿ ಬಂದಿದ್ದಾರೆ. ಉತ್ತರಪ್ರದೇಶದಲ್ಲಿ ಶನಿವಾರ ಮೊದಲ ಹಂತದಲ್ಲಿ ವಿಧಾನಸಭೆಗೆ ಮತದಾನ ನಡೆದಿದೆ. ಅದರ ಸಲುವಾಗಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಕಾಂಗ್ರೆಸ್ ನ ರಾಹುಲ್ ಗಾಂಧಿ ಜಂಟಿ ಪತ್ರಿಕಾಗೋಷ್ಠಿ ಮಾಡಿದ್ದಾರೆ.[ಉಪ್ರ ಚುನಾವಣೆ ಮೊದಲ ಹಂತ: ಮೋದಿಗೆ ಅಗ್ನಿ ಪರೀಕ್ಷೆ ಮತ್ತು 10 ಅಂಶಗಳು]
ಮದುರೈನ ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ನಡೆದಿದೆ. ಮರಳು ಕಲಾಕೃತಿಗಳನ್ನು ರಚಿಸುವ ಕಲಾವಿದ ಸುದರ್ಶನ ಪಟ್ನಾಯಕ್ ಒಡಿಶಾದ ಪುರಿ ಸಮುದ್ರ ತೀರದಲ್ಲಿ ರಚಿಸಿದ ಕಲಾಕೃತಿ, ಜಗತ್ತಿನ ಅತಿ ಎತ್ತರದ ಮರಳು ಕಲಾಕೃತಿ ಎಂಬ ಕಾರಣಕ್ಕೆ ಗಿನಿಸ್ ದಾಖಲೆಗೆ ಪಾತ್ರವಾಗಿದೆ. ಹೀಗೆ ಹಲವು ಸುದ್ದಿಯನ್ನು ಚಿತ್ರ ರೂಪದಲ್ಲಿ ನಿಮ್ಮ ಮುಂದಿಡಲಾಗಿದೆ.

ಏರೋ ಇಂಡಿಯಾ 2017
ಬೆಂಗಳೂರಿನ ಯಲಹಂಕ ವಾಯು ನೆಲೆಯಲ್ಲಿ ಶುಕ್ರವಾರ ಏರೋ ಇಂಡಿಯಾ 2017ರ ಪೂರ್ವಭಾವಿಯಾಗಿ ಭಾರತೀಯ ವಾಯು ಸೇನೆಯ ಏರೋಬಿಕ್ ತಂಡ 'ಸಾರಂಗ್' ತಾಲೀಮು ನಡೆಸಿತು.

ತೂಕದ ಮಹಿಳೆ ಎಮಾನ್ ಅಹ್ಮದ್
500 ಕಿಲೋಗ್ರಾಮ್ ನ ಜಗತ್ತಿನ ಅತ್ಯಂತ ತೂಕದ ಮಹಿಳೆ ಎಮಾನ್ ಅಹ್ಮದ್ ತನ್ನ ತೂಕ ಇಳಿಸುವ ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ

ಕಾಂಗ್ರೆಸ್-ಎಸ್ ಪಿ ಜಂಟಿ
ಉತ್ತರಪ್ರದೇಶದ ಲಖನೌನಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಪ್ಯಾಟ್ರಿಜ್ ಗಳ ವಾಸ
ಬೆಲಾರಸ್ ನಲ್ಲಿ ಕೊರೆಯುವ ಚಳಿಗಾಲ. ಪ್ಯಾಟ್ರಿಜ್ ಗಳು ಕಾಳು ತಿನಿಸುತ್ತಾ, ರಾತ್ರಿಗಳನ್ನು ಕಟ್ಟಡ-ಪೊದೆಗಳ ಬಳಿ ಕಳೆಯುತ್ತವೆ.

ಕುಣಿಯೋಣು ಬಾರಾ..ದಣಿಯೋಣು ಬಾರಾ
ಉರುಗ್ವೆಯಲ್ಲಿ ಶುಕ್ರವಾರ ನಡೆದ 'ಲಾಸ್ ಲಮಾಡಾಸ್' ಸಂಭ್ರಮದಲ್ಲಿ ನೃತ್ಯಗಾತಿಯೊಬ್ಬಳು ಕಾಣಿಸಿಕೊಂಡಿದ್ದು ಹೀಗೆ.

ಮರಳು ಕಲಾಕೃತಿ ಗಿನಿಸ್ ದಾಖಲೆ
ಮರಳು ಕಲಾಕೃತಿಗಳ ಕಲಾವಿದ ಸುದರ್ಶನ್ ಪಟ್ನಾಯಕ್ ಒಡಿಶಾದ ಪುರಿ ಸಮುದ್ರ ತೀರದಲ್ಲಿ ಜಗತ್ತಿನ ಅತಿ ಎತ್ತರದ ಮರಳು ಕಲಾಕೃತಿ ರಚಿಸಿ, ಗಿನಿಸ್ ದಾಖಲೆಗೆ ಸೇರ್ಪಡೆಯಾದರು.

ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು
ಮದುರೈನ ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಕ್ರೀಡೆಯ ರೋಚಕ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೀಗೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications