ರಾಜ್ಯಪಾಲೆ ಕಿರಣ್ ಬೇಡಿ ನಿವಾಸದ ಮುಂದೆ ರಾತ್ರಿ ಕಳೆದ ಪುದುಚೆರಿ ಸಿಎಂ
ಪುದುಚೆರಿ, ಫೆಬ್ರವರಿ 14: ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಕೇಂದ್ರದಿಂದ ನೇಮಕವಾಗಿರುವ ಲೆಫ್ಟಿನೆಂಟ್ ಗೌರ್ನರ್ (ರಾಜ್ಯಪಾಲ ಪ್ರತಿನಿಧಿ) ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ವಿರುದ್ಧ ಅಲ್ಲಿನ ಸಿಎಂ ಮತ್ತು ಮಂತ್ರಿ ಮಂಡಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ.
ಕಿರಣ್ ಬೇಡಿ ಅವರ ಅಧಿಕೃತ ನಿವಾಸ 'ರಾಜ್ ನಿವಾಸದ' ಎದುರು ಪುದುಚೆರಿ ಸಿಎಂ ವಿ.ನಾರಾಯಣಸ್ವಾಮಿ ಅವರು ನಿನ್ನೆ ಇಡೀ ರಾತ್ರಿ ಕಳೆದಿದ್ದು, ಇಂದು ಸಹ ಅವರ ನಿವಾಸದ ಎದುರೇ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಿರಣ್ ಬೇಡಿ ಅವರು ತಮ್ಮ ಕಾರ್ಯದಲ್ಲಿ ಅನವಶ್ಯಕ ಮೂಗು ತೂರಿಸುತ್ತಿದ್ದಾರೆ ಎಂದು ಸಿಎಂ ವಿ.ನಾರಾಯಣಸ್ವಾಮಿ ಹಾಗೂ ಮಂತ್ರಿ ಮಂಡಲ ಆರೋಪಿಸಿದ್ದು, ಇಂದು ಸಹ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಕಿರಣ್ ಬೇಡಿ ಅವರು ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ತಾವೇ ಸರ್ಕಾರ, ತಮಗೆ ಎಲ್ಲವೂ ಗೊತ್ತು, ತಮ್ಮ ಅಧೀನದಲ್ಲಿ ಚುನಾಯಿತ ಪ್ರತಿನಿಧಿಗಳು ಇರಬೇಕು ಎಂಬ ಧೋರಣೆ ಅವರದ್ದಾಗಿದೆ ಎಂದು ಸಿಎಂ ನಾರಾಯಣಸ್ವಾಮಿ ಹೇಳಿದ್ದಾರೆ.
ರಾಜ ನಿವಾಸದಿಂದ ಹೊರ ಹೋಗುವ ಎಲ್ಲಾ ಮಾರ್ಗಗಳಲ್ಲೂ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದು, ಕಿರಣ್ ಬೇಡಿ ಅವರು ಮುಂದೆ ಏನು ಮಾಡುತ್ತಾರೆ ಎಂಬುದು ಕಾದು ನೋಡಬೇಕಿದೆ. ಅಥವಾ ಕೇಂದ್ರ ಮಧ್ಯ ಪ್ರವೇಶ ಮಾಡುತ್ತದೆಯಾ ಎಂದು ಸಹ ನಿರೀಕ್ಷಿಸಲಾಗುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications