ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಪಾಹ್ ವೈರಸ್ ಭೀತಿ: ಪುದುಚೇರಿಯಾದ್ಯಂತ ಕಟ್ಟೆಚ್ಚರ!

|
Google Oneindia Kannada News

ಪುದುಚೇರಿ, ಮೇ 26: ದೇಶದ ಜನರ ನಿದ್ದೆಕೆಡಿಸಿರುವ ನಿಪಾಹ್ ವೈರಸ್ ಭೀತಿಗೆ ಮುನ್ನೆಚ್ಚರಿಕೆ ಕ್ರಮದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗಾಗಲೇ 11 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಈ ಮಾರಣಾಂತಿಕ ಕಾಯಿಲೆಯ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಪುದುಚೇರಿಯಲ್ಲಿ ಸೂಚಿಸಲಾಗಿದೆ.

ಕೇರಳ ರಾಜ್ಯದಲ್ಲಿ ಈ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಕೇರಳದ ಗಡಿಭಾಗದ ರಾಜ್ಯಗಳು ಜಾಗರೂಕವಾಗಿವೆ. ಈ ಹಿನ್ನೆಲೆಯಲ್ಲಿ ಪುದುಚೇರಿಯಲ್ಲಿಯೂ ಸಾಕಷ್ಟು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ.

ಮಾರಣಾಂತಿಕ ನಿಪಾಹ್ ವೈರಸ್ ಹೇಗೆ ಹರಡುತ್ತೆ ? ಮುನ್ನೆಚ್ಚರಿಕೆ ಏನು?ಮಾರಣಾಂತಿಕ ನಿಪಾಹ್ ವೈರಸ್ ಹೇಗೆ ಹರಡುತ್ತೆ ? ಮುನ್ನೆಚ್ಚರಿಕೆ ಏನು?

ಈ ಕುರಿತು ಈಗಾಗಲೇ ಇಲ್ಲಿನ ಎಲ್ಲಾ ಆಸ್ಪತ್ರೆಯ ಆಡಳಿತ ಮಂಡಳಿಗಳಿಗೂ ಸೂಚನೆ ನೀಡಲಾಗಿದೆ. ಇದುವರೆಗೂ ಈ ವೈರಸ್ ನಿಂದಾಗಿ 11 ಜನರು ಮೃತರಾಗಿದ್ದು, ಮಲೇಶ್ಯಾದ ಕಾಡುಗಳಲ್ಲಿ ಕಂಡುಬರುವ ಒಂದು ರೀತಿಯ ಬಾವಲಿಗಳಿಂದ ಈ ಕಾಯಿಲೆ ಹರಡುತ್ತದೆ ಎಂಬುದು ಈಗಾಗಲೇ ತಿಳಿದುಬಂದಿದೆ.

Puducherry Collector issues precautionary steps for Nipah

ಆದ್ದರಿಂದ ಬೇರೆ ಬೇರೆ ದೇಶಗಳಿಂದ ಆಗಮಿಸುವ ಪ್ರವಾಸಗರನ್ನು, ಪ್ರಯಾಣಿಕರನ್ನು ವಿಶೇಷ ತಪಾಸಣೆಗೊಳಪಡಿಸಲಾಗುತ್ತಿದೆ. ಸದ್ಯಕ್ಕೆ ಈ ಕಾಯಿಲೆಗೆ ಯಾವುದೇ ರೀತಿಯ ಚಿಕಿತ್ಸೆ ಲಭ್ಯವಿಲ್ಲ. ಮುನ್ನೆಚ್ಚರಿಕೆಯೊಂದೇ ರೋಗದಿಂದ ಪಾರಾಗುವ ಉಪಾಯವೆನ್ನಿಸಿದೆ.

English summary
In the wake of the sudden outbreak of Nipah virus in Kerala, the Collector Office, Pudducherry on Saturday issued an advisory, mentioning preventive steps to be taken in high-risk areas to check the spread of the contagious disease.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X