ಏಪ್ರಿಲ್ 6 ರಂದು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 2ಕ್ಕೆ ಮತ ಎಣಿಕೆ
ನವದೆಹಲಿ,ಫೆಬ್ರವರಿ 26:ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು,ಪುದುಚೇರಿ,ಅಸ್ಸಾಂ,ಕೇರಳ,ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪುದುಚೆರಿಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.ವಿಜ್ಞಾನ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ಅಸ್ಸಾಂನಲ್ಲಿ 3 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ಕ್ಕೆ ಮೊದಲ ಹಂತದ ಚುನಾವಣೆ, ಏಪ್ರಿಲ್ 1 ರಿಂದ ಎರಡನೇ ಹಂತದ ಚುನಾವಣೆ, ಏಪ್ರಿಲ್ 6ಕ್ಕೆ ಮೂರನೇ ಹಂತದ ಚುನಾವಣೆ ಹಾಗೂ ಮೇ2ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

30 ಸದಸ್ಯರಿರುವ ಪುದುಚೇರಿ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ಏಪ್ರಿಲ್ 6 ರಂದು ನಡೆಯಲಿದೆ. ಒಟ್ಟು 30 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಐದು ಸ್ಥಾನಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ. ಪುದುಚೆರಿಯಲ್ಲಿ 1559 ಮತಗಟ್ಟೆಗಳಿವೆ.
ಅಧಿಸೂಚನೆ ಮಾರ್ಚ್ 12
ನಾಮ ಪತ್ರ ಸಲ್ಲಿಕೆಗೆ ಅಂತಿಮ ದಿನಾಂಕ ಮಾರ್ಚ್ 19
ನಾಮಪತ್ರ ಪರಿಶೀಲನೆ ಮಾರ್ಚ್ 20
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಮಾರ್ಚ್ 22
ಚುನಾವಣೆ ಏಪ್ರಿಲ್ 6
ಮತ ಎಣಿಕೆ ಮೇ 2
ಚುನಾವಣೆಗೆ ಕೋವಿಡ್ ಮಾರ್ಗಸೂಚಿಗಳೇನಿವೆ?
*ಅಭ್ಯರ್ಥಿ ಜತೆ ಇಬ್ಬರಿಗೆ ಮಾತ್ರ ತೆರಳಲು ಅವಕಾಶ
*ಮನೆ,ಮನೆ ಪ್ರಚಾರಕ್ಕೆ ಕೇವಲ ಐವರಿಗೆ ಮಾತ್ರ ಅವಕಾಶ
*ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ
*ನಾಮಪತ್ರ ಸಲ್ಲಿಸಲು ಎರಡು ವಾಹನಗಳಲ್ಲಿ ಮಾತ್ರ ಬರಬೇಕು
*ಮತದಾರರ ಭದ್ರತೆಗೆ ಆದ್ಯತೆ
*ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಎಸ್ಒಪಿ
*ಮತದಾನ ಅವಧಿ ಒಂದು ಗಂಟೆ ವಿಸ್ತರಣೆ
*ಶೇ.50ರಷ್ಟು ಮತಗಟ್ಟೆಗಳಲ್ಲಿ ವೋಟಿಂಗ್ ದೃಶ್ಯ ನೇರಪ್ರಸಾರ
* ಚುನಾವಣಾಧಿಕಾರಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಬೇಕು
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications