ನಿರ್ಗಮಿತ ಸಮಯ ಪುದುಚೇರಿ ಜನರಿಗೆ ಕಿರಣ್ ಬೇಡಿ ಕೊಟ್ಟ ಸಂದೇಶ
ಪುದುಚೇರಿ, ಫೆಬ್ರುವರಿ 17: ಪುದುಚೇರಿ ಸರ್ಕಾರದ ಬಿಕ್ಕಟ್ಟಿನ ನಡುವೆ ಲೆಫ್ಟಿನಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ವಜಾಗೊಳಿಸಿದ್ದು, ತೆಲಂಗಾಣ ರಾಜ್ಯಪಾಲ ಡಾ. ತಮಿಳುಸಾಯಿ ಸುಂದರ್ ರಾಜನ್ ಅವರಿಗೆ ಹೆಚ್ಚುವರಿ ಹೊಣೆ ಹೊರಿಸಲಾಗಿದೆ. ಈ ಬೆಳವಣಿಗೆ ಬೆನ್ನಲ್ಲಿ ನಿರ್ಗಮಿತರಾಗುತ್ತಿರುವ ಕಿರಣ್ ಬೇಡಿ ಅವರು ಪುದುಚೇರಿ ಜನರಿಗೆ ಧನ್ಯವಾದ ಹೇಳಿದ್ದಾರೆ.
ಈ ಕೇಂದ್ರಾಡಳಿತ ಪ್ರದೇಶದಲ್ಲಿ ನನ್ನ ಪಯಣದ ಭಾಗವಾದ ಜನರಿಗೆ ಹಾಗೂ ಅಧಿಕಾರಿಗಳಿಗೆ ಧನ್ಯವಾದ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿರಣ್ ಬೇಡಿ, "ಪುದುಚೇರಿಯಲ್ಲಿ ಲೆಫ್ಟಿನಂಟ್ ಗವರ್ನರ್ ಆಗಿ ಕೆಲಸ ಮಾಡಿ ಜೀವಮಾನದ ಅನುಭವ ಕೊಟ್ಟ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಇದರೊಂದಿಗೆ ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದ. ಈ ಸಮಯದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ತಕ್ಕಂತೆ ಟೀಮ್ ರಾಜ್ ನಿವಾಸ್ ಪ್ರಾಮಾಣಿಕವಾಗಿ ಕೆಲಸ ಮಾಡಿದೆ ಎಂಬುದನ್ನು ಮನಃಪೂರ್ವಕವಾಗಿ ಹೇಳುತ್ತೇನೆ" ಎಂದಿದ್ದಾರೆ.
"ಪುದುಚೇರಿಗೆ ಉಜ್ವಲ ಭವಿಷ್ಯವಿದೆ. ಆ ಭವಿಷ್ಯ ಜನರ ಕೈಯಲ್ಲಿದೆ" ಎಂದು ಉಲ್ಲೇಖಿಸಿದ್ದಾರೆ.

ಪುದುಚೇರಿಯಲ್ಲಿ ಸರ್ಕಾರದ ಬಿಕ್ಕಟ್ಟಿನ ನಡುವೆ ಲೆಫ್ಟನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ವಜಾಗೊಳಿಸಿ ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದರು. ಕಿರಣ್ ಬೇಡಿಯವರ ಅಧಿಕಾರವನ್ನು ತಡೆ ಹಿಡಿಯುವ ಬಗ್ಗೆ ನಿರ್ದೇಶನ ನೀಡಲಾಗಿದ್ದು, ಪುದುಚೇರಿಯ ಕಾರ್ಯಗಳನ್ನು ನೋಡಿಕೊಳ್ಳುವುದಕ್ಕಾಗಿ ರಾಜ್ಯಪಾಲ ಡಾ. ತಮಿಳುಸಾಯಿ ಸುಂದರ್ ರಾಜನ್ ಅವರನ್ನು ನೇಮಿಸಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications