ಗಾಂಧಿ ಜಯಂತಿ ವೇದಿಕೆಯಲ್ಲೇ ಕಿತ್ತಾಡಿದ ಕಿರಣ್ ಬೇಡಿ-ಎಐಎಡಿಎಂಕೆ ಶಾಸಕ
ಉಪ್ಪಾಳಂ, ಅಕ್ಟೋಬರ್ 2: ಪುದುಚೆರಿಯ ಉಪ್ಪಾಳಂನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮತ್ತು ಎಐಎಡಿಎಂಕೆ ಶಾಸಕ ಎ. ಅಣ್ಬಾಲಗನ್ ಅವರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು.
ಕಿರಣ್ ಬೇಡಿ ವೇದಿಕೆಯಲ್ಲಿ ಇರುವಾಗಲೇ ಅಣ್ಬಾಲಗನ್, ಬೇಡಿ ಅವರ ಕಾರ್ಯ ವೈಖರಿಯನ್ನು ಕಟುವಾಗಿ ಟೀಕಿಸಿದರು. ಅಲ್ಲದೆ, ಕಿರಣ್ ಬೇಡಿ ಅವರ ಅಧಿಕಾರಾವಧಿಯಲ್ಲಿ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ಆರೋಪಿಸಿದರು.
ತಮ್ಮ ಕ್ಷೇತ್ರಕ್ಕೆ ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದ್ದರೂ ಜಾರಿ ಮಾಡದ ಯೋಜನೆಗಳ ಪಟ್ಟಿಯನ್ನು ಅವರು ಓದಿದರು.

ಅವರ ಆಕ್ಷೇಪಣೆಗಳನ್ನು ಆಲಿಸಿದ ಬೇಡಿ, ಅವರ ಬಳಿಗೆ ಹೋಗಿ ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ಎಲ್ಲ ಕೆಲಸಗಳೂ ಆರಂಭವಾಗಲಿವೆ ಎಂದು ಭರವಸೆ ನೀಡಿದರು. ಆದರೆ, ಅದಕ್ಕೆ ಕಿವಿಗೊಡದ ಅಣ್ಬಾಲಗನ್, ಅವರ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದರು.
ಶಾಸಕ ತಮ್ಮ ಭಾಷಣವನ್ನು ಮುಗಿಸದೆ ಇದ್ದಾಗ ಸಿಟ್ಟಿಗೆದ್ದ ಕಿರಣ್ ಬೇಡಿ, ಮೈಕ್ ಆಫ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ಕೋಪಗೊಂಡ ಶಾಸಕ ಬೇಡಿ ವಿರುದ್ಧ ಏರುಧ್ವನಿಯಲ್ಲಿ ಮಾತನಾಡತೊಡಗಿದರು.
#WATCH Verbal spat on stage between Puducherry Governor Kiran Bedi and AIADMK MLA A Anbalagan at a government function. The argument reportedly broke out over duration of MLA's speech pic.twitter.com/bptFSr80nC
— ANI (@ANI) 2 October 2018
ವೇದಿಕೆಯಿಂದ ಕೆಳಕ್ಕೆ ಹೋಗುವಂತೆ ಬೇಡಿ ಅವರಿಗೆ ಸೂಚಿಸಿದರು. ಆದರೆ, ಅವರೊಂದಿಗೆ ಜಗಳ ತೆಗೆದ ಶಾಸಕ ನೀವೇ ವೇದಿಕೆಯಿಂದ ಹೋಗಿ ಎಂದು ದಬಾಯಿಸಿದರು.
ಬೇಡಿ ಅವರ ವಿರುದ್ಧ ಅಣ್ಬಾಲಗನ್ ಟೀಕೆ ನಡೆಸುತ್ತಿರುವುದು ಇದು ಮೊದಲೇನಲ್ಲ. ಈ ವರ್ಷದ ಮಾರ್ಚ್ನಲ್ಲಿ ಪುದುಚೆರಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಅವರು, ಬೇಡಿ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದರು.
ಸಂಪುಟದ ನಿರ್ಧಾರಗಳು ತಮ್ಮ ಮುಂದೆ ಬಂದಾಗ ಅವುಗಳಿಗೆ ಅನುಮೋದನೆ ನೀಡಲು ಬೇಡಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದರಿಂದ ಯೋಜನೆಗಳು ನನೆಗುದಿಗೆ ಬೀಳುತ್ತಿವೆ ಎಂದು ಆರೋಪಿಸಿದ್ದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications