ಗಾಂಧಿ ಜಯಂತಿ ವೇದಿಕೆಯಲ್ಲೇ ಕಿತ್ತಾಡಿದ ಕಿರಣ್ ಬೇಡಿ-ಎಐಎಡಿಎಂಕೆ ಶಾಸಕ
ಉಪ್ಪಾಳಂ, ಅಕ್ಟೋಬರ್ 2: ಪುದುಚೆರಿಯ ಉಪ್ಪಾಳಂನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮತ್ತು ಎಐಎಡಿಎಂಕೆ ಶಾಸಕ ಎ. ಅಣ್ಬಾಲಗನ್ ಅವರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು.
ಕಿರಣ್ ಬೇಡಿ ವೇದಿಕೆಯಲ್ಲಿ ಇರುವಾಗಲೇ ಅಣ್ಬಾಲಗನ್, ಬೇಡಿ ಅವರ ಕಾರ್ಯ ವೈಖರಿಯನ್ನು ಕಟುವಾಗಿ ಟೀಕಿಸಿದರು. ಅಲ್ಲದೆ, ಕಿರಣ್ ಬೇಡಿ ಅವರ ಅಧಿಕಾರಾವಧಿಯಲ್ಲಿ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ಆರೋಪಿಸಿದರು.
ತಮ್ಮ ಕ್ಷೇತ್ರಕ್ಕೆ ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದ್ದರೂ ಜಾರಿ ಮಾಡದ ಯೋಜನೆಗಳ ಪಟ್ಟಿಯನ್ನು ಅವರು ಓದಿದರು.

ಅವರ ಆಕ್ಷೇಪಣೆಗಳನ್ನು ಆಲಿಸಿದ ಬೇಡಿ, ಅವರ ಬಳಿಗೆ ಹೋಗಿ ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ಎಲ್ಲ ಕೆಲಸಗಳೂ ಆರಂಭವಾಗಲಿವೆ ಎಂದು ಭರವಸೆ ನೀಡಿದರು. ಆದರೆ, ಅದಕ್ಕೆ ಕಿವಿಗೊಡದ ಅಣ್ಬಾಲಗನ್, ಅವರ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದರು.
ಶಾಸಕ ತಮ್ಮ ಭಾಷಣವನ್ನು ಮುಗಿಸದೆ ಇದ್ದಾಗ ಸಿಟ್ಟಿಗೆದ್ದ ಕಿರಣ್ ಬೇಡಿ, ಮೈಕ್ ಆಫ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ಕೋಪಗೊಂಡ ಶಾಸಕ ಬೇಡಿ ವಿರುದ್ಧ ಏರುಧ್ವನಿಯಲ್ಲಿ ಮಾತನಾಡತೊಡಗಿದರು.
#WATCH Verbal spat on stage between Puducherry Governor Kiran Bedi and AIADMK MLA A Anbalagan at a government function. The argument reportedly broke out over duration of MLA's speech pic.twitter.com/bptFSr80nC
— ANI (@ANI) 2 October 2018
ವೇದಿಕೆಯಿಂದ ಕೆಳಕ್ಕೆ ಹೋಗುವಂತೆ ಬೇಡಿ ಅವರಿಗೆ ಸೂಚಿಸಿದರು. ಆದರೆ, ಅವರೊಂದಿಗೆ ಜಗಳ ತೆಗೆದ ಶಾಸಕ ನೀವೇ ವೇದಿಕೆಯಿಂದ ಹೋಗಿ ಎಂದು ದಬಾಯಿಸಿದರು.
ಬೇಡಿ ಅವರ ವಿರುದ್ಧ ಅಣ್ಬಾಲಗನ್ ಟೀಕೆ ನಡೆಸುತ್ತಿರುವುದು ಇದು ಮೊದಲೇನಲ್ಲ. ಈ ವರ್ಷದ ಮಾರ್ಚ್ನಲ್ಲಿ ಪುದುಚೆರಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಅವರು, ಬೇಡಿ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದರು.
ಸಂಪುಟದ ನಿರ್ಧಾರಗಳು ತಮ್ಮ ಮುಂದೆ ಬಂದಾಗ ಅವುಗಳಿಗೆ ಅನುಮೋದನೆ ನೀಡಲು ಬೇಡಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದರಿಂದ ಯೋಜನೆಗಳು ನನೆಗುದಿಗೆ ಬೀಳುತ್ತಿವೆ ಎಂದು ಆರೋಪಿಸಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications