ಪೋಲಿ ಚಿತ್ರ ನೋಡಿದ ಶಿಕ್ಷಕರು ಸೀದಾ ಮನೆಗೆ

ನಾಲ್ವರು ಶಿಕ್ಷಕರು ಕಂಪ್ಯೂಟರ್ ತರಗತಿ ನಡೆಯುತ್ತಿದ್ದಾಗ ಕದ್ದುಮುಚ್ಚಿ ನೀತಿ ಚಿತ್ರ ಹಾಕಿ ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲ ನಮ್ಮ ಹೆಣ್ಣುಮಕ್ಕಳನ್ನೂ ಆ ಗಲೀಜು ಚಿತ್ರಗಳನ್ನು ನೋಡುವಂತೆ ಪೀಡಿಸಿದ್ದಾರೆ ಎಂದು ಶಾಲೆಯ ಹೆಣ್ಣುಮಕ್ಕಳ ಪೋಷಕರು ಇದೀಗ ಅಲವತ್ತುಕೊಂಡಿದ್ದಾರೆ. ತತ್ಪರಿಣಾಮ ಪದವೀಧರ ಶಿಕ್ಷಕರಿಗೆ ಗೇಟ್ ಪಾಸ್ ನೀಡಲಾಗಿದೆ. ವಜಾಗೊಂಡ ಪಾಪಿ ಶಿಕ್ಷಕರು ಮನೆ ಸೇರಿಕೊಂಡಿದ್ದಾರೆ.
ಪದವೀಧರ ಶಿಕ್ಷಕರಾದ ಜುದೆ ಅನ್ಬಳಗನ್, ಸಿವಾ ಕುಮಾರ್ ಮತ್ತು ಅಬ್ದುಲ್ ಮಲಿಕ್ ಹಾಗೂ ದೈಹಿಕ ಶಿಕ್ಷಣ ತರಬೇತುದಾರ ಅಬ್ದುಲ್ ರಶೀದ್ ಈ ಕುಕೃತ್ಯವೆಸಗಿರುವ ಆರೋಪಿಗಳು.
ವಾಸ್ತವವಾಗಿ ಒಂದು ತಿಂಗಳ ಹಿಂದೆಯೇ ಈ ರಾದ್ಧಾಂತ ನಡೆದಿದ್ದು, ಪೋಷಕರು ವಿಷಯವನ್ನು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಆದರೆ ಮಂಡಳಿ ವಿಳಂಬ ಧೋರಣೆ ತಳೆದಿತ್ತು. ತದನಂತರ ಒತ್ತಡ ಹೆಚ್ಚಾದಾಗ ಅವರನ್ನು ಸಸ್ಪೆಂಡ್ ಮಾಡಿ ಮನೆಗೆ ಕಳುಹಿಸಿದೆಯಷ್ಟೇ. ಹೆಚ್ಚಿನ ತನಿಖೆ ನಡೆಸಿಲ್ಲ. ಅವರ ವಿರುದ್ಧ ಶಿಸ್ತು ಕ್ರಮವನ್ನೂ ಜರುಗಿಸಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಕಾರ ತಕ್ಷಣ ಹೆಚ್ಚಿನ ಕ್ರಮ ಕೈಗೊಳ್ಳದಿದ್ದಲ್ಲಿ ಪೊಲೀಸರಿಗೆ ದೂರು ನೀಡುವುದಾಗಿ ಪೋಷಕರು ಎಚ್ಚರಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ಇದೀಗ ಎಚ್ಚೆತ್ತುಕೊಂಡಿದ್ದು ಇಲಾಖಾ ತನಿಖೆ ನಡೆಸಲು ನಿರ್ಧರಿಸಿದೆ. ವರದಿಯನ್ನು ಸರಕಾರಕ್ಕೆ ಕಳುಹಿಸುತ್ತೇವೆ. ಮುಂದಿನ ಕ್ರಮ ಕೈಗೊಳ್ಳುವುದು ಸರಕಾರಕ್ಕೆ ಬಿಟ್ಟ ವಿಷಯ ಎಂದು ಶಾಲಾ ಆಡಳಿತಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications