Get Updates
Get notified of breaking news, exclusive insights, and must-see stories!

ಸಿಗರೇಟ್ ಸೇದಿದ ಸೀತೆ!: ರಾಮಲೀಲಾ ನಾಟಕ ವಿವಾದದಲ್ಲಿ ಪ್ರೊಫೆಸರ್ ಸೇರಿ ಆರು ಮಂದಿ ಬಂಧನ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪುಣೆ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಮತ್ತು ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ವಿದ್ಯಾರ್ಥಿಗಳು 'ರಾಮಲೀಲಾ' ವನ್ನು ಆಧಾರಿಸಿದ ನಾಟಕ ಮಾಡುತ್ತಿದ್ದರು. ಇದರ ಭಾಗವಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.

ಈ ನಾಟಕದಲ್ಲಿನ ಆಕ್ಷೇಪಾರ್ಹ ಸಂಭಾಷಣೆಗಳು ಮತ್ತು ದೃಶ್ಯಗಳು ಆರು ಮಂದಿಯ ಬಂಧನಕ್ಕೆ ಕಾರಣವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ನಾಟಕವು 'ರಾಮಲೀಲಾ'ದ ವಿವಿಧ ಪಾತ್ರಗಳನ್ನು ಚಿತ್ರಿಸುವಂತಿತ್ತು. ಜೊತೆಗೆ ಅವರ ಸಂಭಾಷಣೆ ಕೂಡ ಹಾಗೆಯೇ ಇತ್ತು ಎಂದು ಆರೋಪಗಳು ಕೇಳಿ ಬಂದಿವೆ.

Pune University professor, 5 students arrested for Ramleela play, showing Sita smoking

ನಾಟಕ ಪ್ರದರ್ಶನದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಗೆ ಸಂಬಂಧಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಮತ್ತು ಪುಣೆ ವಿಶ್ವವಿದ್ಯಾಲಯದ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ. ವಿಶ್ವವಿದ್ಯಾನಿಲಯದ ಅಧಿಕೃತ ಪ್ರದರ್ಶನ ಕಲೆ ಕೇಂದ್ರವಾದ ಲಲಿತ ಕಲಾ ಕೇಂದ್ರವು ಶುಕ್ರವಾರ ಸಂಜೆ ಈ ನಾಟಕವನ್ನು ಪ್ರಸ್ತುತ ಪಡಿಸಿತ್ತು. ಇದು ವಿವಾದಕ್ಕೆ ಕಾರಣವಾಗಿದೆ.

ಲಲಿತ ಕಲಾ ಕೇಂದ್ರದ ವಿಭಾಗದ ಮುಖ್ಯಸ್ಥ ಡಾ.ಪ್ರವೀಣ್ ಭೋಲೆ ಮತ್ತು ವಿದ್ಯಾರ್ಥಿಗಳಾದ ಭವೇಶ್ ಪಾಟೀಲ್, ಜಯ್ ಪೆಡ್ನೇಕರ್, ಪ್ರಥಮೇಶ್ ಸಾವಂತ್, ರಿಷಿಕೇಶ್ ದಳವಿ ಮತ್ತು ಯಶ್ ಚಿಖ್ಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಬಿವಿಪಿ ಕಾರ್ಯಕರ್ತ ಹರ್ಷವರ್ಧನ್ ಹರ್ಪುಡೆ ಅವರು ನೀಡಿದ ದೂರಿನ ಮೇರೆಗೆ 295 (ಎ) (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಉದ್ದೇಶ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಂಕುಶ್ ಚಿಂತಾಮನ್ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಒದಗಿಸಲಾದ ಆರಂಭಿಕ ಮಾಹಿತಿಯ ಪ್ರಕಾರ, ನಾಟಕದಲ್ಲಿ ಸೀತಾಮಾತೆ ಸಿಗರೇಟ್ ಸೇದುವುದು ಮತ್ತು ಆಕ್ಷೇಪಾರ್ಹ ಭಾಷೆಯನ್ನಮು ಬಳಸಿ ಇತರರಿಗೆ ಬೈಯುವುದು ಇತ್ತು. ಸೀತೆಯ ಪಾತ್ರವನ್ನು ಯುವಕನೊಬ್ಬ ನಟಿಸುತ್ತಿದ್ದು, ಸಿಗರೇಟ್ ಸೇದುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಪ್ರದರ್ಶನದ ವೇಳೆ ಎಬಿವಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ನಾಟಕವನ್ನು ನಿಲ್ಲಿಸಲಾಯಿತು ಎಂದು ಎಫ್‌ಐಆರ್ ವರದಿ ಮಾಡಿದೆ. ಈ ಮಧ್ಯೆ, ಘರ್ಷಣೆ ನಡೆದು, ಕಲಾವಿದರು ಎಬಿವಿಪಿ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧವೂ ದೂರು ದಾಖಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಗೆ ಸಂಬಂಧಿಸಿದ ಸದಸ್ಯರು ಕಲಾವಿದರ ಮೇಲೆ ಮಸಿ ಎರಚಿದರು ಮತ್ತು ಲಲಿತ ಕಲಾ ಕೇಂದ್ರದಲ್ಲಿ ಬೋರ್ಡ್ ಅನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಹೇಳಿಕೆಯೊಂದರಲ್ಲಿ, ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (SPPU) ಆಡಳಿತವು ರಾಮಾಯಣದ ಪಾತ್ರಗಳ ಅಪಹಾಸ್ಯವನ್ನು ಬೆಂಬಲಿಸುವುದಿಲ್ಲ ಮತ್ತು ಜನರ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದೆ. ಘಟನೆಯ ಕುರಿತು ತನಿಖೆ ನಡೆಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ಪಿಪಿಯು 'ಸತ್ಯಶೋಧನಾ ಸಮಿತಿ'ಯನ್ನು ರಚಿಸಿದೆ ಮತ್ತು ಅದರ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+