ಸಿಗರೇಟ್ ಸೇದಿದ ಸೀತೆ!: ರಾಮಲೀಲಾ ನಾಟಕ ವಿವಾದದಲ್ಲಿ ಪ್ರೊಫೆಸರ್ ಸೇರಿ ಆರು ಮಂದಿ ಬಂಧನ
ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪುಣೆ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಮತ್ತು ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ವಿದ್ಯಾರ್ಥಿಗಳು 'ರಾಮಲೀಲಾ' ವನ್ನು ಆಧಾರಿಸಿದ ನಾಟಕ ಮಾಡುತ್ತಿದ್ದರು. ಇದರ ಭಾಗವಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.
ಈ ನಾಟಕದಲ್ಲಿನ ಆಕ್ಷೇಪಾರ್ಹ ಸಂಭಾಷಣೆಗಳು ಮತ್ತು ದೃಶ್ಯಗಳು ಆರು ಮಂದಿಯ ಬಂಧನಕ್ಕೆ ಕಾರಣವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ನಾಟಕವು 'ರಾಮಲೀಲಾ'ದ ವಿವಿಧ ಪಾತ್ರಗಳನ್ನು ಚಿತ್ರಿಸುವಂತಿತ್ತು. ಜೊತೆಗೆ ಅವರ ಸಂಭಾಷಣೆ ಕೂಡ ಹಾಗೆಯೇ ಇತ್ತು ಎಂದು ಆರೋಪಗಳು ಕೇಳಿ ಬಂದಿವೆ.

ನಾಟಕ ಪ್ರದರ್ಶನದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ಗೆ ಸಂಬಂಧಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಮತ್ತು ಪುಣೆ ವಿಶ್ವವಿದ್ಯಾಲಯದ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ. ವಿಶ್ವವಿದ್ಯಾನಿಲಯದ ಅಧಿಕೃತ ಪ್ರದರ್ಶನ ಕಲೆ ಕೇಂದ್ರವಾದ ಲಲಿತ ಕಲಾ ಕೇಂದ್ರವು ಶುಕ್ರವಾರ ಸಂಜೆ ಈ ನಾಟಕವನ್ನು ಪ್ರಸ್ತುತ ಪಡಿಸಿತ್ತು. ಇದು ವಿವಾದಕ್ಕೆ ಕಾರಣವಾಗಿದೆ.
ಲಲಿತ ಕಲಾ ಕೇಂದ್ರದ ವಿಭಾಗದ ಮುಖ್ಯಸ್ಥ ಡಾ.ಪ್ರವೀಣ್ ಭೋಲೆ ಮತ್ತು ವಿದ್ಯಾರ್ಥಿಗಳಾದ ಭವೇಶ್ ಪಾಟೀಲ್, ಜಯ್ ಪೆಡ್ನೇಕರ್, ಪ್ರಥಮೇಶ್ ಸಾವಂತ್, ರಿಷಿಕೇಶ್ ದಳವಿ ಮತ್ತು ಯಶ್ ಚಿಖ್ಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಎಬಿವಿಪಿ ಕಾರ್ಯಕರ್ತ ಹರ್ಷವರ್ಧನ್ ಹರ್ಪುಡೆ ಅವರು ನೀಡಿದ ದೂರಿನ ಮೇರೆಗೆ 295 (ಎ) (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಉದ್ದೇಶ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಂಕುಶ್ ಚಿಂತಾಮನ್ ತಿಳಿಸಿದ್ದಾರೆ.
ಎಫ್ಐಆರ್ನಲ್ಲಿ ಒದಗಿಸಲಾದ ಆರಂಭಿಕ ಮಾಹಿತಿಯ ಪ್ರಕಾರ, ನಾಟಕದಲ್ಲಿ ಸೀತಾಮಾತೆ ಸಿಗರೇಟ್ ಸೇದುವುದು ಮತ್ತು ಆಕ್ಷೇಪಾರ್ಹ ಭಾಷೆಯನ್ನಮು ಬಳಸಿ ಇತರರಿಗೆ ಬೈಯುವುದು ಇತ್ತು. ಸೀತೆಯ ಪಾತ್ರವನ್ನು ಯುವಕನೊಬ್ಬ ನಟಿಸುತ್ತಿದ್ದು, ಸಿಗರೇಟ್ ಸೇದುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Radical Hindu Protests against Drama in #Pune University Drama
— Crime Reports India (@AsianDigest) February 2, 2024
pic.twitter.com/51TmY3RGUD
ಪ್ರದರ್ಶನದ ವೇಳೆ ಎಬಿವಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ನಾಟಕವನ್ನು ನಿಲ್ಲಿಸಲಾಯಿತು ಎಂದು ಎಫ್ಐಆರ್ ವರದಿ ಮಾಡಿದೆ. ಈ ಮಧ್ಯೆ, ಘರ್ಷಣೆ ನಡೆದು, ಕಲಾವಿದರು ಎಬಿವಿಪಿ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧವೂ ದೂರು ದಾಖಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಗೆ ಸಂಬಂಧಿಸಿದ ಸದಸ್ಯರು ಕಲಾವಿದರ ಮೇಲೆ ಮಸಿ ಎರಚಿದರು ಮತ್ತು ಲಲಿತ ಕಲಾ ಕೇಂದ್ರದಲ್ಲಿ ಬೋರ್ಡ್ ಅನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಹೇಳಿಕೆಯೊಂದರಲ್ಲಿ, ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (SPPU) ಆಡಳಿತವು ರಾಮಾಯಣದ ಪಾತ್ರಗಳ ಅಪಹಾಸ್ಯವನ್ನು ಬೆಂಬಲಿಸುವುದಿಲ್ಲ ಮತ್ತು ಜನರ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದೆ. ಘಟನೆಯ ಕುರಿತು ತನಿಖೆ ನಡೆಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಪಿಪಿಯು 'ಸತ್ಯಶೋಧನಾ ಸಮಿತಿ'ಯನ್ನು ರಚಿಸಿದೆ ಮತ್ತು ಅದರ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications