Breaking News: ಪಠಾಣ್ಕೋಟ್ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ
ಚಂಡೀಗಢ, ನವೆಂಬರ್ 22: ಪಂಜಾಬ್ನ ಪಠಾಣ್ಕೋಟ್ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಪಠಾಣ್ಕೋಟ್ನ ಧೀರಾಪುಲ್ ಬಳಿಯ ಸೇನೆಯ ತ್ರಿವೇಣಿ ಗೇಟ್ನಲ್ಲಿ ಸೋಮವಾರ ಮುಂಜಾನೆ ಗ್ರನೇಡ್ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಮೂಲಗಳನ್ನು ಉಲ್ಲೇಖಿಸಿದೆ. ಈ ಪ್ರದೇಶದಿಂದ ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್ನಲ್ಲಿ ಬಂದ ಅಪರಿಚಿತರು ಸೇನಾ ಠಾಣೆ ಗೇಟ್ ಬಳಿ ಗ್ರೆನೇಡ್ ಎಸೆದಿದ್ದಾರೆ ಎಂದು ವರದಿ ತಿಳಿಸಿದೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಪಠಾಣ್ಕೋಟ್ನ ಎಲ್ಲಾ ಪೊಲೀಸ್ ಚೆಕ್ಪೋಸ್ಟ್ಗಳನ್ನು ಅಲರ್ಟ್ ಮಾಡಲಾಗಿದೆ ಎಂದು ಪಠಾಣ್ಕೋಟ್ ಎಸ್ಎಸ್ಪಿ ಸುರೇಂದ್ರ ಲಂಬಾ ತಿಳಿಸಿದ್ದಾರೆ. ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳದಿಂದ ಗ್ರೆನೇಡ್ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಪಠಾಣ್ಕೋಟ್ನಲ್ಲಿ ಈ ಹಿಂದೆ ನಡೆದ ದಾಳಿ:
ಐದು ವರ್ಷಗಳ ಹಿಂದೆ, ಪಠಾಣ್ಕೋಟ್ನಲ್ಲಿರುವ ಭಾರತೀಯ ವಾಯುಪಡೆಯ ನೆಲೆಯ ಮೇಲೆ ಆರು ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದರು. ಕಳೆದ 2015ರ ಡಿಸೆಂಬರ್ 30 ಹಾಗೂ 31ರ ರಾತ್ರಿ ವೇಳೆ ಪಾಕಿಸ್ತಾನದಿಂದ ಪಂಜಾಬ್ನ ಕಥುವಾ-ಗುರುದಾಸ್ಪುರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದರು.
ಜನವರಿ 1, 2016 ರಂದು, ಭಯೋತ್ಪಾದಕರು ಪಂಜಾಬ್ ಟಾಪ್ ಕಾಪ್ ಸಲ್ವಿಂದರ್ ಸಿಂಗ್ ಅವರ SUV ಅನ್ನು ವಾಯು ನೆಲೆಯ ಸಮೀಪಕ್ಕೆ ಹೋಗಲು ಕಾರ್ಜಾಕ್ ಮಾಡಿದರು. ಜನವರಿ 2 ರಂದು ದಾಳಿ ಪ್ರಾರಂಭವಾಗಿತ್ತು. ಆದರೆ ದಾಳಿಯ ಕಾಪ್ಟರ್ಗಳು ರಾಕೆಟ್ಗಳಿಂದ ಅವರನ್ನು ಪಿನ್ ಮಾಡಿದ ಕಾರಣ ಥರ್ಮಲ್ ಇಮೇಜಿಂಗ್ ಸಹಾಯದಿಂದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿದ್ದವು.
Recommended Video
ಮೂರು ದಿನಗಳ ಕಾಲ ನಡೆದ ಗುಂಡಿನ ಕದನದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು. ಈ ಆದರೆ ಹೋರಾಟದಲ್ಲಿ ಏಳು ಭದ್ರತಾ ಸಿಬ್ಬಂದಿಯ ಹುತಾತ್ಮರಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications