ಪಂಜಾಬ್ ಚುನಾವಣೆ: ಭರ್ಜರಿ ಪೈಪೋಟಿಗೆ ಸಾಕ್ಷಿಯಾಗಲಿದೆ 'ಲಂಬಿ'
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಲಂಬಿ ಕ್ಷೇತ್ರ ಪ್ರತಿಷ್ಠೆಯ ಕಣವಾಗಲಿದೆ. ಹಾಲಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅಲ್ಲಿಂದ ಸ್ಪರ್ಧಿಸುತ್ತಿದ್ದು, ಅವರ ಎದುರು ಕಾಂಗ್ರೆಸ್ ನಿಂದ ರಾಜ್ಯಾಧ್ಯಕ್ಷ ಕ್ಯಾ ಅಮರಿಂದರ್ ಸಿಂಗ್ ಕಣಕ್ಕಿಳಿಯುವ ಇರಾದೆಯಿದೆ
ಚಂಡೀಗಡ, ಜನವರಿ 14: ಪಂಜಾಬ್ ಚುನಾವಣೆಯಲ್ಲಿ ಲಂಬಿ ವಿಧಾನಸಭೆ ಕ್ಷೇತ್ರ ಪೈಪೋಟಿಯ ಕಾದಾಟಕ್ಕೆ ಸಾಕ್ಷಿಯಾಗುವಂತಿದೆ. ಆ ಕ್ಷೇತ್ರದಿಂದ ಹಾಲಿ ಮುಖ್ಯಮಂತ್ರಿ-ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಕಣಕ್ಕಿಳಿಯಲಿದ್ದಾರೆ. ಅವರ ಎದುರು ಕಾಂಗ್ರೆಸ್ ನಿಂದ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ರಣಾಂಗಣಕ್ಕಿಳಿಯುವ ಸಾಧ್ಯತೆ ಇದೆ.
ಪಂಜಾಬ್ ನಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಕಾಂಗ್ರೆಸ್ ಗೆ ಇದರಿಂದ ಅನುಕೂಲ ಆಗುವ ಸಾಧ್ಯತೆ ಇದೆ ಎಂದು ಪಕ್ಷವು ನಂಬಿದೆ. ಈ ಬಗ್ಗೆ ಶನಿವಾರ ಮಾಧ್ಯಮದ ಜತೆ ಮಾತನಾಡಿದ ಅಮರಿಂದರ್ ಸಿಂಗ್, ಕಾಂಗ್ರೆಸ್ ಹೈಕಮಾಂಡ್ ಜತೆಗೆ ಈ ಬಗ್ಗೆ ಚರ್ಚಿಸಿದ್ದೇನೆ. ಸ್ಪರ್ಧೆ ಬಗ್ಗೆ ಅಧಿಕೃತ ಘೋಷಣೆ ಸದ್ಯದಲ್ಲೆ ಹೊರಬೀಳಲಿದೆ ಎಂದಿದ್ದಾರೆ.[ಉಪ್ರ ಚುನಾವಣೆ ಪೋಸ್ಟರ್ ಗಳಲ್ಲಿ ಡಿಂಪಲ್-ಪ್ರಿಯಾಂಕಾ ಕಾರುಬಾರು]

"ಬಾದಲ್ ವಿರುದ್ಧ ಸ್ಪರ್ಧಿಸಲು ಅವಕಾಶ ನೀಡುವಂತೆ ನಾನು ಪಕ್ಷದ ಹೈ ಕಮಾಂಡ್ ಗೆ ಮನವಿ ಮಾಡಿದ್ದೇನೆ. ಈತ ಪಂಜಾಬ್ ನ ಪೂರ್ತಿ ಹಾಳುಗೆಡವಿದ್ದಾರೆ" ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. ಈ ನಿರ್ಧಾರದ ಹಿಂದೆ ಲೆಕ್ಕಾಚಾರವೂ ಇದೆ. ಬಾದಲ್ ಅವರನ್ನು ತವರೂರಿನಲ್ಲೇ ಮಣಿಸುವ ಇರಾದೆ ಇದೆ. ಇದರ ಜೊತೆಗೆ ಸುಖ್ ಬೀರ್ ಸಿಂಗ್ ಬಾದಲ್ ಗೂ ಸವಾಲು ಹಾಕುವ ಸಾಮರ್ಥ್ಯ ಇದೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು, ಹಾಗೊಂದು ವೇಳೆ ಆದರೆ ಸಿಧು ಪತ್ನಿ ಹೇಳಿರುವಂತೆ ಅಮೃತ್ ಸರ್ ಪೂರ್ವದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕ್ಯಾ.ಅಮರಿಂದರ್ ಸಿಂಗ್ ತಿಳಿಸಿದ್ದಾರೆ..
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications