ಪಂಜಾಬ್ ಸೋಲಿಗೆ ಯಾರು ಹೊಣೆ?, ಸೋನಿಯಾ ಹೇಳುವುದು ಹೀಗೆ...
ನವದೆಹಲಿ, ಮಾರ್ಚ್ 22: ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಕಂಡಿದೆ. ಈ ಸೋಲಿಗೆ ಹೊಣೆ ಯಾರು ಎಂಬ ಪ್ರಸ್ತಾಪ ಬಂದಾಗ ಆ ಹೊಣೆಯನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ನ ಮೂಲಗಳು ತಿಳಿಸಿದೆ.
ಈ ತಿಂಗಳ ಆರಂಭದಲ್ಲಿ ನಡೆದ ಕಾಂಗ್ರೆಸ್ನ ಉನ್ನತ ಮಟ್ಟದ ಸಭೆಯಲ್ಲಿ, ಪಂಜಾಬ್ ಚುನಾವಣೆಯಲ್ಲಿ ಪಕ್ಷದ ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕರೊಬ್ಬರು ಮಾಹಿತಿ ನೀಡಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಪ್ರಚಾರ ಕಾರ್ಯಗಳನ್ನು ಮಾಡಿದ್ದ, ತನ್ನ ಇಬ್ಬರು ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಆರೋಪಗಳಿಂದ ದೂರ ಮಾಡುವ ನಿಟ್ಟಿನಲ್ಲಿ ಸೋನಿಯಾ ಗಾಂಧಿ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆಯನ್ನು ತನ್ನ ಮೇಲೆ ಹೊರಿಸಿಕೊಂಡಿದ್ದಾರೆ ವರದಿಯು ಉಲ್ಲೇಖ ಮಾಡಿದೆ.

ಪಂಜಾಬ್ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈ ವಿಧಾನಸಭೆ ಚುಣಾವಣೆಯಲ್ಲಿ 77 ಸ್ಥಾನಗಳಿಂದ 18 ಸ್ಥಾನಗಳಿಗೆ ಇಳಿಯಿತು. ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಬದಲಾವಣೆ ಮಾಡಬೇಕಾದ ಸ್ಥಿತಿ ಕಾಂಗ್ರೆಸ್ನ ಒಳ ಜಗಳಗಳಿಂದಾಗಿ ಉಂಟಾಯಿತು. ಅಷ್ಟೇ ಅಲ್ಲದೇ ಕಾಂಗ್ರೆಸ್ ಅಮರಿಂದರ್ ಸಿಂಗ್ರ ಎದುರಾಳಿ ಎಂಬಂತೆ ಇರುವ ನವಜೋತ್ ಸಿಧು ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನೇಮಿಸಿತು.
ಪಂಜಾಬ್ ಸೇರಿದಂತೆ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸರಣಿ ಸೋಲಿನ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಇತ್ತೀಚಿನ ಸಭೆಯಲ್ಲಿ ಸೋನಿಯಾ ಗಾಂಧಿ ಈ ಹೊಣೆಯನ್ನು ತಾನೇ ಹೊತ್ತಿದ್ದಾರೆ ಎಂದು ವರದಿಯು ಹೇಳಿದೆ. ಈ ಸಭೆಯಲ್ಲಿ ಪಕ್ಷದ 60 ಕ್ಕೂ ಹೆಚ್ಚು ಪ್ರಮುಖ ನಾಯಕರು ಭಾಗವಹಿಸಿದ್ದರು.
"ಪಂಜಾಬ್ ಹತ್ಯಾಕಾಂಡ"ಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದ ಗುಲಾಂ
ಸಭೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಮತ್ತು G-23 ಕಾಂಗ್ರೆಸ್ ಭಿನ್ನಮತೀಯರ ಗುಂಪಿನ ಸದಸ್ಯ ಗುಲಾಂ ನಬಿ ಆಜಾದ್ ಅವರು ಕೂಡಾ ಭಾಗಿಯಾಗಿದ್ದರು. "ಪಂಜಾಬ್ನಲ್ಲಿ ನಡೆದ ಹತ್ಯಾಕಾಂಡ"ಕ್ಕೆ ಯಾರು ಹೊಣೆ ಎಂದು ಗುಲಾಂ ನಬಿ ಆಜಾದ್ ಪ್ರಶ್ನೆ ಮಾಡಿದ್ದರು.
ಚುನಾವಣೆಗೆ ಮೂರು ತಿಂಗಳ ಮೊದಲು ಅಮರಿಂದರ್ ಸಿಂಗ್ ಬದಲಿಗೆ ಚರಣ್ಜೀತ್ ಸಿಂಗ್ ಚನ್ನಿ ಅವರನ್ನು ನೇಮಿಸುವ ನಿರ್ಧಾರವನ್ನು ಯಾರು ತೆಗೆದುಕೊಂಡರು? ಕಾಂಗ್ರೆಸ್ಸಿನ ಬಗ್ಗೆ ಟೀಕೆಗಳನ್ನು ಇಟ್ಟುಕೊಂಡಿರುವ ನವಜೋತ್ ಸಿಂಗ್ ಸಿಧು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದವರು ಯಾರು? ಎಂದು ಕೂಡಾ ಗುಲಾಂ ನಬಿ ಆಜಾದ್ ಸಭೆಯಲ್ಲಿ ಪ್ರಶ್ನಿಸಿದ್ದರು ಎಂದು ಮೂಲಗಳು ತಿಳಿಸಿದೆ. ಆದರೆ ಸೋನಿಯಾ ಗಾಂಧಿ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಹೊಣೆಯನ್ನು ತಾನು ಹೊತ್ತುಕೊಂಡಿದ್ದಾರೆ. "ಈ ವಿಚಾರದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖ ಮಾಡಬೇಡಿ. ಪಂಜಾಬ್ನಲ್ಲಿ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಂಡಿದ್ದೇನೆ ಮತ್ತು ನಾನು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ," ಸೋನಿಯಾ ತಿಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನು ಗುಲಾಂ ನಬಿ ಆಜಾದ್ "ಜವಾಬ್ದಾರಿ ವಹಿಸಿದ್ದಕ್ಕಾಗಿ" ಧನ್ಯವಾದ ಹೇಳುವ ಮೂಲಕ ಪ್ರತಿಕ್ರಿಯಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಕಾಂಗ್ರೆಸ್ ಭಿನ್ನಮತೀಯ ಗುಂಪಿನ ಇಬ್ಬರು ಸದಸ್ಯರಾದ ಕಪಿಲ್ ಸಿಬಲ್ ಮತ್ತು ಮನೀಶ್ ತಿವಾರಿ ಅವರು ಸಂದರ್ಶನಗಳಲ್ಲಿ ಪಕ್ಷದ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಾರೆ. ಕ್ಷದ ವರಿಷ್ಠರು "ಕೋಗಿಲೆ ನಾಡಿನಲ್ಲಿ ವಾಸಿಸುತ್ತಿದ್ದಾರೆ, ಪಕ್ಷದ ಅಧ್ಯಕ್ಷರು ಅಲ್ಲ. ಆದರೆ ಅವರು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ," ಎಂದು ಆರೋಪ ಮಾಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications