ಸಮೀಕ್ಷೆ: ಪಂಜಾಬಿಗೆ ಅಮರಿಂದರ್ 'ಕ್ಯಾಪ್ಟನ್' ಆಗುವ ಸಾಧ್ಯತೆಗಳೇ ಜಾಸ್ತಿ
ಒಂದು ಸಮೀಕ್ಷೆ ಸಿಖ್ಖರ ನಾಡಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದಿದೆ. ಇನ್ನೊಂದು ಸಮೀಕ್ಷೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳಿದೆ.
ಚಂಡೀಗಢ, ಫೆಬ್ರವರಿ 1: ಬಹುನಿರೀಕ್ಷಿತ ಪಂಚ ರಾಜ್ಯಗಳ ಚುನಾವಣೆಯ ಸಮೀಕ್ಷೆಗಳು ಒಂದೊಂದಾಗಿ ಹೊರ ಬರುತ್ತಿವೆ. ಈ ಬಾರಿ ಪಂಜಾಬಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವ ಸಾಧ್ಯತೆಗಳಿವೆ ಅಂತ ಇಂಡಿಯಾ ಟುಡೆ-ಆಕ್ಸಿಸ್ ಸರ್ವೆ ಹೇಳಿದೆ. ಆದರೆ ಎಬಿಪಿ ಮಾತ್ರ ಪಂಜಾಬಿನಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದಿದೆ.
ಇಂಡಿಯಾ ಟುಡೆ-ಆಕ್ಸಿಸ್: ಅಮರಿಂದರ್ 'ಕ್ಯಾಪ್ಟನ್'
ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಶೇಕಡಾ 37ರಷ್ಟು ಮತ ಪಡೆದು 60-65 ಸೀಟುಗಳನ್ನು ಪಡೆದುಕೊಳ್ಳಲಿದೆಯಂತೆ. ಒಂದೊಮ್ಮೆ ಇಷ್ಟು ಸೀಟುಗಳನ್ನು ಪಡೆದುಕೊಂಡಿದ್ದೇ ಆದಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಅಧಿಕಾರ ಹಿಡಿಯಲಿದೆ. ಇನ್ನು ಎಎಪಿ ಶೇಕಡಾ 34 ಮತಗಳನ್ನು ಪಡೆದು 41-44 ಸ್ಥಾನಗಳನ್ನು ಪಡೆದು ವಿರೋಧ ಪಕ್ಷದಲ್ಲಿ ಕೂರಲಿದೆ. ಆಡಳಿತರೂಢ ಬಿಜೆಪಿ-ಅಕಾಲಿದಳ ಮೈತ್ರಿಕೂಟ ಶೇಕಡಾ 24 ಮತ ಗಳಿಸಿ 11-15 ಸೀಟುಗಳನ್ನು ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ. ಇನ್ನು ಇತರರು 2 ಸ್ಥಾನಗಳವರೆಗೆ ಗೆಲ್ಲಲಿದ್ದಾರಂತೆ.[ಉತ್ತರಪ್ರದೇಶ ಸರ್ವೇ: ಎಸ್ಪಿ-ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಕಷ್ಟಕಷ್ಟ]

ಎಬಿಪಿ: ಅತಂತ್ರ ವಿಧಾನಸಭೆ
ಆದರೆ ಎಬಿಪಿ ನ್ಯೂಸ್ ಮಾತ್ರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದಿದೆ. ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿರುವ ಕಾಂಗ್ರೆಸ್ 47 ರಿಂದ 55 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಬಿಜೆಪಿ ಅಕಾಲಿದಳ ಮೈತ್ರಿಕೂಟ 28-36 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಹಾಗೂ ಆಮ್ ಆದ್ಮಿ ಪಕ್ಷ 26-34 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ. ಇತರ ನಾಲ್ಕು ಸ್ಥಾನಗಳು ಅನ್ಯರ ಪಾಲಾಗಬಹುದು ಎಂದು ಸಮೀಕ್ಷೆ ಅಂದಾಜಿಸಿದೆ.[ಪಂಜಾಬ್: ಒಂದೇ ರಾಜ್ಯಕ್ಕೆ ಎಎಪಿಯಿಂದ ನಾಲ್ಕು ಪ್ರಣಾಳಿಕೆ!]
ಒಂದೊಮ್ಮೆ ಇದೇ ಫಲಿತಾಂಶ ಬಂದಲ್ಲಿ ಅಧಿಕಾರ ಹಿಡಿಯಲು ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಲಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಬದ್ಧ ವೈರಿಗಳಾದ್ದರಿಂದ ಯಾರ ನಡುವೆ ಮೈತ್ರಿ ನಡೆಯಬಹುದು ಎಂಬುದು ಕುತೂಹಲ ಹುಟ್ಟಿಸಿದೆ.
ಪಂಜಾಬ್ ವಿಧಾನಸಭೆಯಲ್ಲಿ 117 ಸ್ಥಾನಗಳಿದ್ದು ಕಳೆದ 15 ವರ್ಷಗಳಿಂದ ಬಿಜೆಪಿ-ಅಕಾಲಿದಳ ಮೈತ್ರಿಕೂಟ ಅಧಿಕಾರದಲ್ಲಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications