ಪಂಜಾಬ್ ಚುನಾವಣೆಯಲ್ಲಿ ಕೋಟ್ಯಾಧಿಪತಿ ಅಭ್ಯರ್ಥಿಗಳದ್ದೇ ಬಿಗ್ ಫೈಟ್
ಚುನಾವಣಾ ಆಯೋಗದ ಮುಂದೆ ಅಭ್ಯರ್ಥಿಗಳು ತಮ್ಮ ಆಸ್ತಿ ಮತ್ತು ತಮ್ಮ ಮೇಲಿರುವ ಪ್ರಕರಣಗಳ ವಿವರಗಳನ್ನು ನೀಡಿದ್ದಾರೆ. ಇದರ ಪ್ರಕಾರ ಪ್ರಮುಖ ಪಕ್ಷಗಳು ಹೆಚ್ಚಿನ ಅಭ್ಯರ್ಥಿಗಳು ಕೋಟ್ಯಾಧಿಪತಿಗಳಾಗಿದ್ದಾರೆ.
ಚಂಡೀಗಢ, ಜನವರಿ 30: ಪಂಜಾಬ್ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಹೆಚ್ಚಿನವರು ಕೋಟ್ಯಾಧಿಪತಿಗಳಾಗಿದ್ದಾರೆ. ಚುನಾವಣಾ ಆಐಒಗದ ಮುಂದೆ ತಮ್ಮ ಆಸ್ತಿ ಘೋಷಿಸಿಕೊಂಡಿರುವ ಅಭ್ಯರ್ಥಿಗಳು ತಾವು ಕೋಟ್ಯಾಧಿಪತಿಗಳು ಎಂಬುದನ್ನು ಎದೆಯುಬ್ಬಿಸಿಕೊಂಡು ಹೇಳಿದ್ದಾರೆ. ಹೀಗಾಗಿ ಪಂಜಾಬ್ ಅಖಾಡ ಕೇವಲ ಕೋಟ್ಯಾಧಿಪತಿಗಳ ನಡುವಿನ ಸ್ಪರ್ಧಾ ಕಣವಾಗಿ ಮಾರ್ಪಟ್ಟಿದೆ.
ಅಕಾಲಿದಳದ 94 ಅಭ್ಯರ್ಥಿಗಳಲ್ಲಿ 87 ಜನ ಕೋಟ್ಯಾಧಿಪತಿಗಳಿದ್ದಾರೆ. ಇನ್ನು ಕಾಂಗ್ರೆಸಿನಲ್ಲಿ 117ರಲ್ಲಿ 103 ಜನ ಕೋಟ್ಯಾಧಿಪತಿಗಳಾಗಿದ್ದಾರೆ. ಆಮ್ ಆದ್ಮಿ ಪಕ್ಷದ 112 ಭ್ಯರ್ಥಿಗಳಲ್ಲೂ 71 ಜನ ಕೋಟ್ಯಾಧಿಪತಿಗಳಿದ್ದಾರೆ. ಒಟ್ಟಾರೆ ಪಕ್ಷೇತರರು ಸೇರಿ ನಾಮಪತ್ರ ಸಲ್ಲಿಸಿದ 1,145 ಅಭ್ಯರ್ಥಿಗಳಲ್ಲಿ 428 ಜನ ಕೋಟಿಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ.[ಪಂಜಾಬ್: ಕಾಂಗ್ರೆಸಿನಲ್ಲಿ ಸಿದ್ದು-ಅಮರಿಂದರ್ ಜಟಾಪಟಿ]

ವಿಚಿತ್ರ ಎಂದರೆ ಅಭ್ಯರ್ಥಿಗಳಲ್ಲಿ ಅತೀ ಶ್ರೀಮಂತ ಕಾಂಗ್ರೆಸಿನಿಂದ ಸ್ಪರ್ಧಿಸುತ್ತಿರುವ ನವಜೋತ್ ಸಿಂಗ್ ಸಿದ್ಧು. ತಮಗೆ ವಾರ್ಷಿಕ 9.9 ಕೋಟಿ ರೂಪಾಯಿ ವರಮಾನ ಇರುವುದಾಗಿ ಚುನಾವಣಾ ಆಯೋಗದ ಮುಂದೆ ಅವರು ಹೇಳಿಕೊಂಡಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಮದ್ಯದ ದೊರೆ ಶಿವ್ ಲಾಲ್ ದೊಡಾ ಇದ್ದಾರೆ. ಅಬೊಹರಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿತ್ತಿರುವ ಇವರ ಆಸ್ತಿ 5 ಕೋಟಿ.
ವಿಶೇಷ ಎಂದರೆ ರಾಜ್ಯದಲ್ಲಿ ಪ್ರಮುಖ ಸಾರಿಗೆ ಸಂಸ್ಥೆಗಳನ್ನು ಹೊಂದಿರುವ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮಗ ಸುಖ್ ಬೀರ್ ಸಿಂಗ್ ಬಾದಲ್ ಆಸ್ತಿ ಕೇವಲ 2.28 ಕೋಟಿ ರೂಪಾಯಿ.[ಪಂಜಾಬ್: ಒಂದೇ ರಾಜ್ಯಕ್ಕೆ ಎಎಪಿಯಿಂದ ನಾಲ್ಕು ಪ್ರಣಾಳಿಕೆ!]
ಇನ್ನು ಬಿಜೆಪಿ ಅಕಾಲಿದಳ ಮೈತ್ರಿಕೂಟದಿಂದ ಸ್ಪರ್ಧಿಸಿರುವ 12 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆ ಹೊಂದಿದ್ದಾರೆ. ಕಾಂಗ್ರೆಸ್ ಮತ್ತು ಎಎಪಿಯಲ್ಲಿ ತಲಾ 14 ಜನ ಕ್ರಿಮಿನಲ್ ಹಿನ್ನಲೆಯ ಅಭ್ಯರ್ಥಿಗಳಿದ್ದಾರೆ. ಒಟ್ಟಾರೆ 100 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ 71 ಜನರ ಮೆಲೆ ಗುರುತರ ಪ್ರಕರಣಗಳಿವೆ. 11 ಜನರ ಮೇಲೆಯಂತೂ ಕೊಲೆ ಹಾಗೂ ಕೊಲೆಯತ್ನದ ಪ್ರಕರಣಗಳಿವೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications