ಎನ್ ಡಿಟಿವಿ ಮತದಾನೋತ್ತರ ಸಮೀಕ್ಷೆ: ಪಂಜಾಬಿನಲ್ಲಿ ಎಎಪಿಗೆ ಅಧಿಕಾರ
ದೆಹಲಿ ನಂತರ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ತನ್ನ ರಾಜ್ಯಭಾರ ನಡೆಸಲಿದೆ. ಆಮ್ ಆದ್ಮಿ ಪಕ್ಷ ಅಧಿಕಾರ ಸ್ಥಾಪಿಸುವ ಸಾಧ್ಯತೆ ಹೆಚ್ಚಿದೆ ಎಂದು ಎನ್ ಡಿಟಿವಿ ಮತದಾನೋತ್ತರ ಸಮೀಕ್ಷೆ ಹೇಳಿದೆ
ನವದೆಹಲಿ, ಫೆಬ್ರವರಿ 06: ದೆಹಲಿ ನಂತರ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ತನ್ನ ರಾಜ್ಯಭಾರ ನಡೆಸಲಿದೆ. ಆಮ್ ಆದ್ಮಿ ಪಕ್ಷ ಅಧಿಕಾರ ಸ್ಥಾಪಿಸುವ ಸಾಧ್ಯತೆ ಹೆಚ್ಚಿದೆ ಎಂದು ಮತದಾನೋತ್ತರ ಸಮೀಕ್ಷೆ ನಡೆಸಿ ಎನ್ ಡಿಟಿವಿಯ ಪ್ರಣಯ್ ರಾಯ್ ಅವರು ವಿಶ್ಲೇಷಿಸಿದ್ದಾರೆ.
ಹಫಿಂಗ್ಟನ್ ಪೋಸ್ಟ್ -ಸಿ ವೋಟರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಕೂಡಾ ಇದೇ ರೀತಿ ಫಲಿತಾಂಶ ನೀಡಿತ್ತು. ಹಫಿಂಗ್ಟನ್ ಹಾಗೂ ಸಿವೋಟರ್ಸ್ ಚುನಾವಣಾ ಪೂರ್ವ ಸಮೀಕ್ಷೆಯಂತೆ ಎಎಪಿ 117 ಸ್ಥಾನಗಳ ಪೈಕಿ 63 ಸ್ಥಾನಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಶನಿವಾರ (ಫೆಬ್ರವರಿ 4) ದಂದು ಶೇ 73ರಷ್ಟು ಮತದಾನ ದಾಖಲಾಗಿದ್ದು, ಫಲಿತಾಂಶ ಮಾರ್ಚ್ 11ರಂದು ಹೊರಬೀಳಲಿದೆ.

ಎನ್ ಡಿಟಿವಿ ಮತದಾನೋತ್ತರ ಸಮೀಕ್ಷೆ ವರದಿ:
* ಎಎಪಿಗೆ ಶೇ 55-60 ರಷ್ಟು ಪ್ರತಿಶತ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ.
* ಕಾಂಗ್ರೆಸ್ಸಿಗೆ ಶೇ 20-35 ರಷ್ಟು ಅವಕಾಶವಿದೆ.
* ಅಕಾಲಿ ದಳಕ್ಕೆ ಶೇ 5 ರಿಂದ 10ರಷ್ಟು ಅವಕಾಶವಿದೆ.
ಅಕಾಲಿದಳದಿಂದ ಸಿಖ್ ಮತಗಳನ್ನು ಶೇ 27ರಷ್ಟು ಕಬಳಿಸಿದ್ದು ಅರವಿಂದ್ ಕೇಜ್ರಿವಾಲ್ ಪಕ್ಷಕ್ಕೆ ಲಾಭ ತರಲಿದೆ ಎಂದು ಪ್ರಣಯ್ ರಾಯ್ ವಿಶ್ಲೇಷಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications