ಗಣರಾಜ್ಯೋತ್ಸವ ಪರೇಡ್‌ಗೆ ಪಂಜಾಬ್‌ ಟ್ಯಾಬ್ಲೋ ತಿರಸ್ಕಾರ: ಎಎಪಿ ಆಕ್ರೋಶ

ಅಮೃತಸರ, ಜನವರಿ 23: ಗಣರಾಜ್ಯೋತ್ಸವ ಪರೇಡ್‌ಗೆ ಪಂಜಾಬ್‌ನ ಟ್ಯಾಬ್ಲೋವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರದ ನಡೆಯನ್ನು ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಪ್ರತಿಪಕ್ಷ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸೋಮವಾರ ಖಂಡಿಸಿವೆ.

ಎಎಪಿಯ ಹಿರಿಯ ನಾಯಕರಾಗಿರುವ ಪಂಜಾಬ್‌ನ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು, ಗಣರಾಜ್ಯೋತ್ಸವದ ಪರೇಡ್‌ನಂತಹ ಕಾರ್ಯಕ್ರಮಗಳಲ್ಲಿ ಪಂಜಾಬ್‌ನ ಟ್ಯಾಬ್ಲೋ ಯಾವಾಗಲೂ ಸ್ಥಾನ ಪಡೆಯುತ್ತದೆ, ಅದರ ಮೂಲಕ ರಾಜ್ಯವು ತನ್ನ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಮತ್ತು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದರು.

ಎಎಪಿಯ ಹಿರಿಯ ನಾಯಕರಾಗಿರುವ ಪಂಜಾಬ್‌ನ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು, ಗಣರಾಜ್ಯೋತ್ಸವದ ಪರೇಡ್‌ನಂತಹ ಕಾರ್ಯಕ್ರಮಗಳಲ್ಲಿ ಪಂಜಾಬ್‌ನ ಟ್ಯಾಬ್ಲೋ ಯಾವಾಗಲೂ ಸ್ಥಾನ ಪಡೆಯುತ್ತದೆ. ಅದರ ಮೂಲಕ ರಾಜ್ಯವು ತನ್ನ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಮತ್ತು ಕಳೆದ ವರ್ಷಗಳಲ್ಲಿ ಮಾಡಿದ ಅಭಿವೃದ್ಧಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದರು.

Punjab tableau rejected by central government on Republic Day parade: AAP outraged

ಈ ಬಾರಿ ಪಂಜಾಬ್ ತನ್ನ ಟ್ಯಾಬ್ಲೋ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಜಾಬಿಗಳು ಮಾಡಿದ ತ್ಯಾಗಕ್ಕೆ ಸಂಬಂಧಿಸಿದ ಇತಿಹಾಸವನ್ನು ಪ್ರಸ್ತುತಪಡಿಸುತ್ತದೆ. ಆದರೆ ಕೇಂದ್ರ ಸರ್ಕಾರವು ಇದನ್ನು ಪ್ರಸ್ತುತಪಡಿಸುವುದನ್ನು ಉದ್ದೇಶಪೂರ್ವಕವಾಗಿ ತಡೆದಿದೆ. ಈ ಮೂಲಕ ಕೇಂದ್ರವು ಪಂಜಾಬ್ ಹಾಗೂ ದೆಹಲಿಯಲ್ಲಿ ಎಎಪಿ ಸರ್ಕಾರಗಳೊಂದಿಗೆ ತಾರತಮ್ಯ ನೀತಿ ಅನುಸರಿಸುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಎಸ್‌ಎಡಿ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಕೂಡ ಗಣರಾಜ್ಯೋತ್ಸವ ಪೇರೆಡ್‌ನಲ್ಲಿ ಪಂಜಾಬ್‌ ರಾಜ್ಯಸ ಟ್ಯಾಬ್ಲ್ಯೋವನ್ನು ತಿರಸ್ಕರಿಸಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 74ನೇ ಗಣರಾಜ್ಯೋತ್ಸವದ ಪರೇಡ್‌ಗಾಗಿ ಪಂಜಾಬ್‌ನ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ತಿಳಿದು ಆಘಾತಕ್ಕೊಳಗಾಗಿದೆ. ಅಂದರೆ ನಮ್ಮ ಸಂಸ್ಕೃತಿ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಯನ್ನು ಪ್ರದರ್ಶಿಸಲು ನಮಗೆ ಅನುಮತಿ ಇಲ್ಲ ಎಂದರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

Punjab tableau rejected by central government on Republic Day parade: AAP outraged

ಭಾರತ ಸರ್ಕಾರ ತನ್ನ ನಿರ್ಧಾರವನ್ನು ಪರಿಶೀಲಿಸುವಂತೆ ಒತ್ತಾಯಿಸುತ್ತಾ, ನಾನು ಮುಖ್ಯಮಂತ್ರಿ ಭಗವಂತ ಮಾನ್‌ ಅವರಿಗೆ ಎಚ್ಚೆತ್ತುಕೊಳ್ಳಲು ಮತ್ತು ಸರ್ಕಾರದೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡುತ್ತೇನೆ ಎಂದು ಬಾದಲ್ ಟ್ವೀಟ್ ಮಾಡಿದ್ದಾರೆ. ಹಿರಿಯ ನಾಯಕ ದಲ್ಜಿತ್ ಸಿಂಗ್ ಚೀಮಾ ಅವರು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಂಜಾಬ್‌ನ ಸ್ತಬ್ಧಚಿತ್ರವನ್ನು ಸೇರಿಸದಿರುವುದು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ ಮತ್ತು ಅದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.

ಚೀಮಾ ಅವರು ಟ್ವೀಟ್ ಮಾಡಿ ಪಂಜಾಬ್ ದೇಶದ ಕತ್ತಿಯ ತೋಳು. ಇದು ಶ್ರೀಮಂತ ಪರಂಪರೆ, ಸಂಸ್ಕೃತಿ ಮತ್ತು ಶ್ರೇಷ್ಠ ಇತಿಹಾಸವನ್ನು ಹೊಂದಿದೆ. ಇದು ದೇಶದ ಆಹಾರ ಅಗತ್ಯಗಳಿಗೆ ಅಪಾರ ಕೊಡುಗೆಗಳನ್ನು ನೀಡಿದೆ. ಆದರೆ ಆಶ್ಚರ್ಯವೆಂಬಂತೆ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಅದರ ಸ್ತಬ್ದ ಚಿತ್ರವನ್ನು ಸೇರಿಸಲಾಗಿಲ್ಲ. ಇದು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ ಮತ್ತು ಅದನ್ನು ಪರಿಶೀಲಿಸಬೇಕಾಗಿದೆ ಎಂದು ಚೀಮಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+