ಪಂಜಾಬ್: ತರ್ನ್ ತರಣ್ ಪೊಲೀಸ್ ಠಾಣೆಗೆ ರಾಕೆಟ್ ಲಾಂಚರ್ನಿಂದ ದಾಳಿ- ಐಎಸ್ಐ ಮೇಲೆ ಶಂಕೆ
ಚಂಡಿಗಢ ಡಿಸೆಂಬರ್ 10: ಪಂಜಾಬ್ನ ಗಡಿ ಭಾಗದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಂಜಾಬ್ನ ಗಡಿ ಭಾಗದಲ್ಲಿರುವ ತರ್ನ್ ತರನ್ ಪೊಲೀಸ್ ಠಾಣೆ ಮೇಲೆ ರಾಕೆಟ್ ಲಾಂಚರ್ನಿಂದ ದಾಳಿ ಮಾಡಿರುವುದು ಬೆಳಕಿಗೆ ಬಂದಿದೆ. ಖಲಿಸ್ತಾನ್ ಪರ ಭಯೋತ್ಪಾದಕರು ಮತ್ತು ಐಎಸ್ಐ ಮೇಲೆ ಈ ದಾಳಿ ನಡೆಸಿರುವ ಶಂಕೆ ಇದೆ.
ಶನಿವಾರ ಬೆಳಿಗ್ಗೆ ಮಾಧ್ಯಮ ವರದಿಯಲ್ಲಿ ಈ ಆರೋಪ ಮಾಡಲಾಗಿದೆ. ಪಿಟಿಐ ಪ್ರಕಾರ, ಪಂಜಾಬ್ನ ತರ್ನ್ ತರನ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ತರಹದ ಆಯುಧದಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ದಾಳಿಯಲ್ಲಿ ಯಾವುದೇ ಗಾಯಗಳು ಅಥವಾ ರಚನೆಗೆ ಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ರಾಕೆಟ್ ಲಾಂಚರ್ ದಾಳಿಯ ಬಗ್ಗೆ ಪೊಲೀಸ್ ಅಧಿಕಾರಿಗಳು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಈ ಘಟನೆಯ ಬಗ್ಗೆ ಭಾರತೀಯ ಜನತಾ ಪಕ್ಷದ ಸದಸ್ಯ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದಾರೆ. 'ಅಮೃತಸರ-ಭಟಿಂಡಾ ಹೆದ್ದಾರಿಯಲ್ಲಿನ ಸೂಕ್ಷ್ಮ ಸ್ಥಳವಾದ ತರ್ನ್ ತರನ್ನ ಸರ್ಹಾಲಿಯಲ್ಲಿನ ಪೊಲೀಸ್ ಠಾಣೆಯ ಮೇಲೆ ರಾಕೆಟ್-ಲಾಂಚರ್ ಮಾದರಿಯ ಆಯುಧವನ್ನು ಹಾರಿಸಲಾಗಿದೆ. ಪಂಜಾಬ್ನಲ್ಲಿ ಕೇಜ್ರಿವಾಲ್ ಅವರ ಆದೇಶದಂತೆ ಸರ್ಕಾರ ನಡೆಯುತ್ತಿದೆ. ಅವರು ಗಡಿ ರಾಜ್ಯದ ಶಾಂತಿ ಮತ್ತು ಭದ್ರತೆಯನ್ನು ನಿರ್ಲಕ್ಷಿಸಿದ್ದಾರೆ' ಎಂದು ದೂರಿದ್ದಾರೆ.
Rocket-launcher-type weapon fired at police station in Sarhali, Tarn Taran which is a sensitive location at Amritsar-Bathinda Highway@AAPPunjab Govt is busy partying in Gujarat/Delhi as per Kejriwal’s diktat & @BhagwantMann Ji has ignored the peace & security of Border state! pic.twitter.com/A11MrCJKEp
— Manjinder Singh Sirsa (@mssirsa) December 10, 2022
ಫೋರೆನ್ಸಿಕ್ ತಂಡವು ಪುರಾವೆಗಳನ್ನು ಸಂಗ್ರಹಿಸಲು ಮತ್ತು ದಾಳಿಯ ಸ್ವರೂಪವನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಠಾಣೆಗೆ ತಲುಪಿದೆ. ಪಂಜಾಬ್ನ ತರ್ನ್ ತರನ್ ಪೊಲೀಸ್ ಠಾಣೆಯು ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿಗೆ ಸಮೀಪದಲ್ಲಿದೆ. ಇದರ ಬೆನ್ನಲ್ಲೆ ಅಧಿಕಾರಿಗಳು ಪಂಜಾಬ್ನಾದ್ಯಂತ ಎಚ್ಚರಿಕೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications