ಮಾದಕದ್ರವ್ಯ ಮಾರುತ್ತಿದ್ದ ಎಂದು ಕೈ-ಕಾಲು ಕತ್ತರಿಸಿ ಕೊಂದೇಬಿಟ್ಟರು ಜನ
ಬತಿಂಡಾ, ಜೂನ್ 9: ಪಂಜಾಬ್ ನ ಬತಿಂಡಾದಲ್ಲಿ ಮಾದಕ ವಸ್ತು ಮಾರುತ್ತಿದ್ದ ಎಂದು ಆರೋಪಿಸಿ ಹಳ್ಳಿಯ ಜನರೆಲ್ಲ ಸೇರಿ ಯುವಕನೊಬ್ಬನ ಕೈ-ಕಾಲು ಕತ್ತರಿಸಿ ಹಾಕಿದ್ದಾರೆ. ಈ ಘಟನೆ ನಡೆದ ಕೆಲವು ಗಂಟೆಯೊಳಗೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇಪ್ಪತ್ತೈದು ವರ್ಷದ ವಿನೋದ್ ಕುಮಾರ್ ಮೃತ ಯುವಕ. ಆತನ ಮೇಲೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಆ ಕಾರಣಕ್ಕೆ ಆರೇಳು ತಿಂಗಳ ಹಿಂದೆ ಹಳ್ಳಿ ಬಿಡುವಂತೆ ಆತನನ್ನು ಮಾಡಲಾಗಿತ್ತು. ಗುರುವಾರ ವಿನೋದ್ ಹಳ್ಳಿಗೆ ವಾಪಸಾಗಿದ್ದ. ಆ ವೇಳೆ ಪುರುಷರ ಗುಂಪೊಂದು ಆತನ ಮೇಲೆ ದಾಳಿ ನಡೆಸಿದೆ.[5ಕೆಜಿ ಚಿನ್ನಕ್ಕಾಗಿ ಮಗಳನ್ನೇ ಕೊಂದು, ಅತ್ಯಾಚಾರ ಮಾಡಲು ಬಿಟ್ಟ ಹೆತ್ತವರು]
ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ಫೋನ್ ಗಳಲ್ಲಿ ಘಟನೆಯನ್ನು ಚಿತ್ರೀಕರಿಸಿಕೊಂಡಿದ್ದಾರೆ. ಆತನನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಲಾಗಿದೆ. ಆ ವೇಳೆ ಆಕ್ರೋಶಗೊಂಡ ಹಳ್ಳಿಗರು ಆಸ್ಪತ್ರೆಯನ್ನು ಸುತ್ತುವರಿದಿದ್ದಾರೆ. ವಿನೋದ್ ವಿರುದ್ಧ ಹಲವು ಪ್ರಕರಣಗಳಿದ್ದವು. ಮೂರ್ನಾಲ್ಕು ದಿನದ ಹಿಂದಷ್ಟೇ ಆತ ಬಿಡುಗಡೆಯಾಗಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಯಾವಾಗ ಸ್ಥಳೀಯ ಆಸ್ಪತ್ರೆ ಸುತ್ತ ಆಕ್ರೋಶಿತ ಹಳ್ಳಿಗರು ಗುಂಪುಗೂಡಿದರೋ ಆಗ ಪೊಲೀಸರು ವಿನೋದ್ ನನ್ನು ಅಲ್ಲಿಂದ ನಲವತ್ತೈದು ಕಿಲೋಮೀಟರ್ ದೂರದ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ ಗಾಯಗಳಿಂದ ಆತ ಮೃತಪಟ್ಟಿದ್ದಾನೆ. ಇದೀಗ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಪೊಲೀಸರು.[ಹರ್ಯಾಣ: ಆಟೋದಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ]
ಆತ ಮಾದಕ ದ್ರವ್ಯ ಮಾರುತ್ತಿದ್ದಾನೆ ಎಂದು ನಾವು ಎಷ್ಟು ಬಾರಿ ದೂರು ಕೊಟ್ಟರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎಂದು ಹಳ್ಳಿಗರು ಆರೋಪ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications