Puri Stampede: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತದಲ್ಲಿ 3 ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
Puri Jagannath Rath Yatra Stampede: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ 3 ಸಾವು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಇಂದು (ಜೂನ್ 29) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಗುಂಡಿಚಾ ದೇವಸ್ಥಾನದ ಬಳಿ ನಡೆದಿದೆ ಎಂದು ಎಂದು ವರದಿಯಾಗಿದೆ.
ಒಡಿಶಾದ ಪುರಿಯಲ್ಲಿ ಇಂದು ನಡೆದ ರಥಯಾತ್ರೆಯ ವೇಳೆ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಪ್ರೇಮಕಾಂತ ಮೊಹಂತಿ (80), ಬಸಂತಿ ಸಾಹೂ (36) ಮತ್ತು ಪ್ರಭಾತಿ ದಾಸ್ (42) ಎಂದು ಗುರುತಿಸಲಾಗಿದೆ.

ಮೃತಪಟ್ಟ ಮೂವರೂ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಹೇಳಿದ್ದಾರೆ.
ಇನ್ನು ಕಾಲ್ತುಳಿತ ದುರಂತ ಸಂಬಂಧ ಒಡಿಶಾ ಸರ್ಕಾರವು ಪುರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಅಲ್ಲದೆ, ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಈ ಬಗ್ಗೆ ಮಾತನಾಡಿರುವ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕಾಲ್ತುಳಿತ ದುರಂತದ ಬಳಿಕ ಪುರಿ ಕಲೆಕ್ಟರ್ ಸಿದ್ಧಾರ್ಥ್ ಎಸ್ ಸ್ವೈನ್ ಮತ್ತು ಎಸ್ಪಿ ಬಿನಿತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಪುರಿ ಪುರಿ ಡಿಸಿಪಿ ಬಿಷ್ಣು ಚರಣ್ ಪತಿ ಮತ್ತು ಪೊಲೀಸ್ ಕಮಾಂಡೆಂಟ್ ಅಜಯ್ ಪಧಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಘಟನೆ ನಡೆದಿದ್ದು ಹೇಗೆ?: ಇಂದು ಬೆಳಗಿನ ಜಾವ ಶ್ರೀ ಗುಂಡಿಚಾ ದೇವಸ್ಥಾನದ ಮುಂದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾಗ ಈ ಘಟನೆ ಸಂಭವಿಸಿದೆ. ಕಾಲ್ತುಳಿತಕ್ಕೆ ಮುಂಚೆಯೇ, ಆರೋಗ್ಯ ಅಧಿಕಾರಿಗಳು ಜನಸಂದಣಿಗೆ ಸಂಬಂಧಿಸಿದ ಗಮನಾರ್ಹ ಆರೋಗ್ಯ ಸಮಸ್ಯೆಗಳನ್ನು ವರದಿ ಮಾಡಿದ್ದರು. ನೂರಾರು ಭಕ್ತರಿಗೆ ಆಯಾಸ ಮತ್ತು ಒತ್ತಡದಿಂದಾಗಿ ವೈದ್ಯಕೀಯ ನೆರವು ಅಗತ್ಯ ಆಗಿತ್ತು.
ದುರಂತದ ಬಗ್ಗೆ ಮಾತನಾಡಿದ ಒಡಿಶಾ ಕಾನೂನು ಸಚಿವ ಪೃಥಿವಿರಾಜ್ ಹರಿಚಂದನ್ ಅವರು, ಉನ್ನತ ಮಟ್ಟದ ತನಿಖೆಗೆ ವಹಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಈ ದುರಂತದಿಂದ ಮನಸಿಗೆ ತುಂಬಾ ನೋವಾಗಿದೆ. ನಾವು ಸಮಗ್ರ ತನಿಖೆ ನಡೆಸುತ್ತೇವೆ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications